<blockquote>₹5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ | ಎನ್ಡಿಆರ್ಎಫ್, ಪೊಲೀಸರಿಂದ ರಕ್ಷಣಾ ಕಾರ್ಯ | ಸುರಕ್ಷಿತ ಪ್ರದೇಶಗಳಿಗೆ ನಿವಾಸಿಗಳ ಸ್ಥಳಾಂತರ</blockquote>.<p><strong>ಪಾಲ್ಘರ್:</strong> ಮುಂಬೈ ಸಮೀಪದ ವಿರಾರ್ನ ನಾರಂಗಿ ರಸ್ತೆಯಲ್ಲಿ ಸಂಭವಿಸಿದ ಕಟ್ಟಡ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿದೆ.</p>.<p>ವಸಯಿ ತಾಲ್ಲೂಕಿನ ವಿರಾರ್ ಪೂರ್ವ ಭಾಗದ ಚಾಮುಂಡಿ ನಗರ ಹಾಗೂ ವಿಜಯನಗರದ ನಡುವೆ ಇರುವ ನಾಲ್ಕು ಅಂತಸ್ತಿನ ಕಟ್ಟಡ ‘ರಮಾಬಾಯಿ ಅಪಾರ್ಟ್ಮೆಂಟ್’ ಮಂಗಳವಾರ ಮಧ್ಯರಾತ್ರಿ ಕುಸಿದಿತ್ತು. ಈ ಘಟನೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.</p>.<p>ಈ ಅಪಾರ್ಟ್ಮೆಂಟ್ನಲ್ಲಿ 50 ಫ್ಲ್ಯಾಟ್ಗಳಿದ್ದು, ಕುಸಿದ ಭಾಗದಲ್ಲಿ 12 ಫ್ಲ್ಯಾಟ್ಗಳಿದ್ದವು. ಇವುಗಳಲ್ಲಿ 50–60 ಮಂದಿ ವಾಸವಾಗಿದ್ದರು. ಈ ಕಟ್ಟಡವನ್ನು 2012ರಲ್ಲಿ ನಿರ್ಮಿಸಲಾಗಿತ್ತು.</p>.<p>ಕಟ್ಟಡ ನಿರ್ಮಿಸಿದ್ದ ಸಾಯಿದತ್ತ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮಾಲೀಕ ನಿಟ್ಟಲ್ ಗೋಪಿನಾಥ್ ಸಾನೆ ಅವರನ್ನು ವಿರಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ವಸಯಿ–ವಿರಾರ್ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ನಗರಸಭೆ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡು ಅವಶೇಷಗಳ ಅಡಿ ಸಿಲುಕಿದವರನ್ನು ರಕ್ಷಿಸಿದರು.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡದ ಸುತ್ತಲಿನ ಮನೆಗಳನ್ನು ತೆರವುಗೊಳಿಸಲಾಗಿದ್ದು, ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಅನೇಕರು ನಿರಾಶ್ರಿತರಾಗಿದ್ದು, ಚಂದನಸರ್ ಸಮಾಜ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ. ಅವರಿಗೆ ಆಹಾರ, ನೀರು, ವೈದ್ಯಕೀಯ ನೆರವು ಒದಗಿಸಲಾಗಿದೆ.</p>.<p>ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<blockquote>₹5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ | ಎನ್ಡಿಆರ್ಎಫ್, ಪೊಲೀಸರಿಂದ ರಕ್ಷಣಾ ಕಾರ್ಯ | ಸುರಕ್ಷಿತ ಪ್ರದೇಶಗಳಿಗೆ ನಿವಾಸಿಗಳ ಸ್ಥಳಾಂತರ</blockquote>.<p><strong>ಪಾಲ್ಘರ್:</strong> ಮುಂಬೈ ಸಮೀಪದ ವಿರಾರ್ನ ನಾರಂಗಿ ರಸ್ತೆಯಲ್ಲಿ ಸಂಭವಿಸಿದ ಕಟ್ಟಡ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿದೆ.</p>.<p>ವಸಯಿ ತಾಲ್ಲೂಕಿನ ವಿರಾರ್ ಪೂರ್ವ ಭಾಗದ ಚಾಮುಂಡಿ ನಗರ ಹಾಗೂ ವಿಜಯನಗರದ ನಡುವೆ ಇರುವ ನಾಲ್ಕು ಅಂತಸ್ತಿನ ಕಟ್ಟಡ ‘ರಮಾಬಾಯಿ ಅಪಾರ್ಟ್ಮೆಂಟ್’ ಮಂಗಳವಾರ ಮಧ್ಯರಾತ್ರಿ ಕುಸಿದಿತ್ತು. ಈ ಘಟನೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.</p>.<p>ಈ ಅಪಾರ್ಟ್ಮೆಂಟ್ನಲ್ಲಿ 50 ಫ್ಲ್ಯಾಟ್ಗಳಿದ್ದು, ಕುಸಿದ ಭಾಗದಲ್ಲಿ 12 ಫ್ಲ್ಯಾಟ್ಗಳಿದ್ದವು. ಇವುಗಳಲ್ಲಿ 50–60 ಮಂದಿ ವಾಸವಾಗಿದ್ದರು. ಈ ಕಟ್ಟಡವನ್ನು 2012ರಲ್ಲಿ ನಿರ್ಮಿಸಲಾಗಿತ್ತು.</p>.<p>ಕಟ್ಟಡ ನಿರ್ಮಿಸಿದ್ದ ಸಾಯಿದತ್ತ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಮಾಲೀಕ ನಿಟ್ಟಲ್ ಗೋಪಿನಾಥ್ ಸಾನೆ ಅವರನ್ನು ವಿರಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ವಸಯಿ–ವಿರಾರ್ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ನಗರಸಭೆ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡು ಅವಶೇಷಗಳ ಅಡಿ ಸಿಲುಕಿದವರನ್ನು ರಕ್ಷಿಸಿದರು.</p>.<p>ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡದ ಸುತ್ತಲಿನ ಮನೆಗಳನ್ನು ತೆರವುಗೊಳಿಸಲಾಗಿದ್ದು, ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಅನೇಕರು ನಿರಾಶ್ರಿತರಾಗಿದ್ದು, ಚಂದನಸರ್ ಸಮಾಜ ಮಂದಿರಕ್ಕೆ ಸ್ಥಳಾಂತರಿಸಲಾಗಿದೆ. ಅವರಿಗೆ ಆಹಾರ, ನೀರು, ವೈದ್ಯಕೀಯ ನೆರವು ಒದಗಿಸಲಾಗಿದೆ.</p>.<p>ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>