<p><strong>ಲಖನೌ:</strong> ಉತ್ತರ ಪ್ರದೇಶದ ಬುಲಂದ್ಶೆಹರ್ನಲ್ಲಿ ಡಿಸೆಂಬರ್ 3ರಂದು ಗೋಹಂತಕರ ವಿರುದ್ಧ ನಡೆದ ಪ್ರತಿಭಟನೆ ವೇಳೆ ಗುಂಪನ್ನು ಚದುರಿಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ.</p>.<p>ಪ್ರತಿಭಟನೆ ನಡೆಯುತ್ತಿದ್ದ ವೇಳೆ ಗುಂಪೊಂದು ಪೊಲೀಸರ ಮೇಲೆ ದಾಳಿ ನಡೆಸಿ ಪೊಲೀಸರ ವಾಹನಕ್ಕೆ ಬೆಂಕಿ ಹಚ್ಚಿತ್ತು.ಗಲಭೆ ವೇಳೆ ಗುಂಡು ಹಾರಾಟ ನಡೆದಿದ್ದು, ಸ್ಥಳೀಯ ನಿವಾಸಿ ಸುಮಿತ್ (21 ) ಮತ್ತು ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಗೀಡಾಗಿದ್ದರು.</p>.<p>ಬಂಧನಕ್ಕೊಳಗಾಗಿರುವ ಪ್ರಶಾಂತ್ ನಾಥ್ ಎಂಬ ಟ್ಯಾಕ್ಸಿ ಚಾಲಕ ತಾನು ಪೊಲೀಸ್ ಅಧಿಕಾರಿ ಮೇಲೆ ಗುಂಡು ಹಾರಿಸಿದ್ದೆ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.</p>.<p>ರಾಜಕೀಯ ಒತ್ತಡದಿಂದ ಪೊಲೀಸರು ಆರೋಪಿಯನ್ನು ಬಂಧಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಸಿಂಗ್ ಅವರ ಕುಟುಂಬ ಆರೋಪಿಸಿತ್ತು.<br />ಈ ಪ್ರಕರಣದಲ್ಲಿ 27 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ವಾರಗಳ ಹಿಂದೆಯೇ ಬಂಧಿಸಲಾಗಿತ್ತು.ಗಲಭೆಯ ವಿಡಿಯೊ ದೃಶ್ಯಾವಳಿಗಳನ್ನು ನೋಡಿ 19 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.</p>.<p>ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಗುರುವಾರ ನೋಯ್ಡಾದಲ್ಲಿ ನಾಥ್ನ್ನು ಬಂಧಿಸಿದೆ.</p>.<p><strong><span style="color:#0000CD;">ಇದನ್ನೂ ಓದಿ</span></strong></p>.<p><a href="https://www.prajavani.net/stories/national/cop-killed-bulandshahr-had-591814.html" target="_blank">ಪೊಲೀಸ್ ಅಧಿಕಾರಿ ಸುಬೋಧ್ ಸಿಂಗ್ ಮೇಲೆ ದಾಳಿ ಪೂರ್ವಯೋಜಿತ ಕೃತ್ಯ?</a></p>.<p><a href="https://www.prajavani.net/stories/national/bulandshahr-violence-592229.html" target="_blank">ಬುಲಂದ್ಶಹರ್ ಹಿಂಸೆ: ಪೊಲೀಸರಿಗೆ ಒಳಸಂಚಿನ ಶಂಕೆ</a></p>.<p><a href="https://www.prajavani.net/stories/national/armyman-key-suspect-593054.html" target="_blank">ಬುಲಂದ್ಶಹರ್ ಹಿಂಸಾಚಾರ: ಪೊಲೀಸ್ ಮೇಲೆ ಗುಂಡು ಹಾರಿಸಿದ ಆರೋಪಿ ಯೋಧನ ಬಂಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ಬುಲಂದ್ಶೆಹರ್ನಲ್ಲಿ ಡಿಸೆಂಬರ್ 3ರಂದು ಗೋಹಂತಕರ ವಿರುದ್ಧ ನಡೆದ ಪ್ರತಿಭಟನೆ ವೇಳೆ ಗುಂಪನ್ನು ಚದುರಿಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ.</p>.<p>ಪ್ರತಿಭಟನೆ ನಡೆಯುತ್ತಿದ್ದ ವೇಳೆ ಗುಂಪೊಂದು ಪೊಲೀಸರ ಮೇಲೆ ದಾಳಿ ನಡೆಸಿ ಪೊಲೀಸರ ವಾಹನಕ್ಕೆ ಬೆಂಕಿ ಹಚ್ಚಿತ್ತು.ಗಲಭೆ ವೇಳೆ ಗುಂಡು ಹಾರಾಟ ನಡೆದಿದ್ದು, ಸ್ಥಳೀಯ ನಿವಾಸಿ ಸುಮಿತ್ (21 ) ಮತ್ತು ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಗೀಡಾಗಿದ್ದರು.</p>.<p>ಬಂಧನಕ್ಕೊಳಗಾಗಿರುವ ಪ್ರಶಾಂತ್ ನಾಥ್ ಎಂಬ ಟ್ಯಾಕ್ಸಿ ಚಾಲಕ ತಾನು ಪೊಲೀಸ್ ಅಧಿಕಾರಿ ಮೇಲೆ ಗುಂಡು ಹಾರಿಸಿದ್ದೆ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.</p>.<p>ರಾಜಕೀಯ ಒತ್ತಡದಿಂದ ಪೊಲೀಸರು ಆರೋಪಿಯನ್ನು ಬಂಧಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಸಿಂಗ್ ಅವರ ಕುಟುಂಬ ಆರೋಪಿಸಿತ್ತು.<br />ಈ ಪ್ರಕರಣದಲ್ಲಿ 27 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ವಾರಗಳ ಹಿಂದೆಯೇ ಬಂಧಿಸಲಾಗಿತ್ತು.ಗಲಭೆಯ ವಿಡಿಯೊ ದೃಶ್ಯಾವಳಿಗಳನ್ನು ನೋಡಿ 19 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.</p>.<p>ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ ಗುರುವಾರ ನೋಯ್ಡಾದಲ್ಲಿ ನಾಥ್ನ್ನು ಬಂಧಿಸಿದೆ.</p>.<p><strong><span style="color:#0000CD;">ಇದನ್ನೂ ಓದಿ</span></strong></p>.<p><a href="https://www.prajavani.net/stories/national/cop-killed-bulandshahr-had-591814.html" target="_blank">ಪೊಲೀಸ್ ಅಧಿಕಾರಿ ಸುಬೋಧ್ ಸಿಂಗ್ ಮೇಲೆ ದಾಳಿ ಪೂರ್ವಯೋಜಿತ ಕೃತ್ಯ?</a></p>.<p><a href="https://www.prajavani.net/stories/national/bulandshahr-violence-592229.html" target="_blank">ಬುಲಂದ್ಶಹರ್ ಹಿಂಸೆ: ಪೊಲೀಸರಿಗೆ ಒಳಸಂಚಿನ ಶಂಕೆ</a></p>.<p><a href="https://www.prajavani.net/stories/national/armyman-key-suspect-593054.html" target="_blank">ಬುಲಂದ್ಶಹರ್ ಹಿಂಸಾಚಾರ: ಪೊಲೀಸ್ ಮೇಲೆ ಗುಂಡು ಹಾರಿಸಿದ ಆರೋಪಿ ಯೋಧನ ಬಂಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>