<p><strong>ನವದೆಹಲಿ:</strong> ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ನ ಆಹಾರ ಮಳಿಗೆಯಲ್ಲಿ ನಡೆದಿದ್ದ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. </p>.<p>ಬಂಧಿತ ಆರೋಪಿಯು ಹತ್ಯೆ ನಡೆಸಲು ಇಬ್ಬರು ಶೂಟರ್ಗಳನ್ನು ತನ್ನ ವಾಹನದಲ್ಲಿ ಸ್ಥಳಕ್ಕೆ ಕರೆತಂದಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ.</p>.<p>ರಜೌರಿ ಗಾರ್ಡನ್ನ ಬರ್ಗರ್ ಕಿಂಗ್ ಆಹಾರ ಮಳಿಗೆಯಲ್ಲಿ ಮಹಿಳೆಯೊಬ್ಬರೊಂದಿಗೆ ಕುಳಿತಿದ್ದಾಗ ಹರಿಯಾಣ ಮೂಲದ ಅಮನ್ ಜೂನ್ ಎಂಬುವವರನ್ನು ಜೂನ್ 18ರಂದು ಇಬ್ಬರು ಆಗಂತುಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಮೃತ ವ್ಯಕ್ತಿಗೆ 38 ಗುಂಡೇಟುಗಳು ತಗುಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೈಲಿನಲ್ಲಿರುವ ಗ್ಯಾಂಗ್ಸ್ಟರ್ಗಳಾದ ನೀರಜ್ ಬವಾನ್ ಮತ್ತು ಅಶೋಕ್ ಪ್ರಧಾನ್ ನಡುವಿನ ಗುಂಪು ಘರ್ಷಣೆ ಅಮನ್ ಕೊಲೆಗೆ ಕಾರಣ ಎನ್ನಲಾಗಿದೆ.</p>.<p>ಕೊಲೆಗೆ ಕಾರಣರಾದ ಇತರೆ ಮೂವರು ಶಂಕಿತರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ನ ಆಹಾರ ಮಳಿಗೆಯಲ್ಲಿ ನಡೆದಿದ್ದ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. </p>.<p>ಬಂಧಿತ ಆರೋಪಿಯು ಹತ್ಯೆ ನಡೆಸಲು ಇಬ್ಬರು ಶೂಟರ್ಗಳನ್ನು ತನ್ನ ವಾಹನದಲ್ಲಿ ಸ್ಥಳಕ್ಕೆ ಕರೆತಂದಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ.</p>.<p>ರಜೌರಿ ಗಾರ್ಡನ್ನ ಬರ್ಗರ್ ಕಿಂಗ್ ಆಹಾರ ಮಳಿಗೆಯಲ್ಲಿ ಮಹಿಳೆಯೊಬ್ಬರೊಂದಿಗೆ ಕುಳಿತಿದ್ದಾಗ ಹರಿಯಾಣ ಮೂಲದ ಅಮನ್ ಜೂನ್ ಎಂಬುವವರನ್ನು ಜೂನ್ 18ರಂದು ಇಬ್ಬರು ಆಗಂತುಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಮೃತ ವ್ಯಕ್ತಿಗೆ 38 ಗುಂಡೇಟುಗಳು ತಗುಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೈಲಿನಲ್ಲಿರುವ ಗ್ಯಾಂಗ್ಸ್ಟರ್ಗಳಾದ ನೀರಜ್ ಬವಾನ್ ಮತ್ತು ಅಶೋಕ್ ಪ್ರಧಾನ್ ನಡುವಿನ ಗುಂಪು ಘರ್ಷಣೆ ಅಮನ್ ಕೊಲೆಗೆ ಕಾರಣ ಎನ್ನಲಾಗಿದೆ.</p>.<p>ಕೊಲೆಗೆ ಕಾರಣರಾದ ಇತರೆ ಮೂವರು ಶಂಕಿತರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>