ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಮಾತೋಶ್ರೀ ಶಾಂತಬಾಯಿ ಗೋಟೆ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆಗೆ ಹಾಜರಾಗಲು ಹಿಜಾಬ್ ತೆಗೆಯಬೇಕೆಂದು ಸೂಚಿಸಿದ ವಿಚಾರಕ್ಕೆ ಸಂಬಂಧಿಸಿ ವಿವಾದವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಲೇಜು ಪ್ರಾಂಶುಪಾಲ ಜಿ.ಎಸ್. ಕುಬ್ಡೆ ಅವರು, ಕೇವಲ ಓರ್ವ ವಿದ್ಯಾರ್ಥಿನಿಯ ಪೋಷಕರು ಇದನ್ನು ವಿವಾದವನ್ನಾಗಿಸಿದ್ದಾರೆ ಎಂದು ದೂರಿದ್ದಾರೆ.