ಸ್ಥಳದಲ್ಲೇ 7 ಜನ ಮೃತಪಟ್ಟಿದ್ದು, 4 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕತ್ರಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬಿಹಾರದವರು ಎಂದು ಜಮ್ಮುವಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಸ್ಥಳಕ್ಕೆ ಸಿಆರ್ಪಿಎಫ್ ಪರಿಹಾರ ಕಾರ್ಯಾಚರಣೆ ತಂಡವನ್ನು ಕಳಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ. ಕತ್ರಾ ಸ್ಥಳ ತ್ರಿಕೂಟ ಬೆಟ್ಟಗಳಿಗೆ ಖ್ಯಾತಿಯಾಗಿದ್ದು ಇಲ್ಲಿ ಪ್ರಸಿದ್ಧ ವೈಷ್ಣೋದೇವಿ ಮಂದಿರವಿದೆ.