<p><strong>ಹೈದರಾಬಾದ್:</strong> ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಸಮೀಪ ಗುರುವಾರ ಸಂಭವಿಸಿದ್ದ ರಸ್ತೆ ಅಪಘಾತ ಸಂಬಂಧ ಹರಿಕೃಷ್ಣ ಟ್ರಾವೆಲ್ಸ್ ಮಾಲೀಕ ಪಿ. ಹರಿಕೃಷ್ಣಾರೆಡ್ಡಿ ಹಾಗೂ ಚಾಲಕ ಯುವರಾಜು ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಅಪಘಾತ ಸಂಭವಿಸಿದ ಕೂಡಲೇ ಇಬ್ಬರೂ ತಲೆಮರೆಸಿಕೊಂಡಿದ್ದರು. ಹರಿಕೃಷ್ಣಾರೆಡ್ಡಿ ಅವರ ಮೊಬೈಲ್ ಫೋನ್ ಸಿಗ್ನಲ್ ಜಾಡು ಹಿಡಿದು ಬಂಧಿಸಲಾಗಿದೆ. ಘಟನೆ ನಡೆದಾಕ್ಷಣ ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಯುವರಾಜು ಅವರನ್ನು ಕನಿಗಿರಿಯ ಪಾಮೂರು ಪಟ್ಟಣದ ಬಳಿ ಬಂಧಿಸಲಾಗಿದೆ.</p>.<p>ಗುರುವಾರ ಬೆಳಿಗ್ಗೆ 5.30ರ ಸುಮಾರಿಗೆ ಹರಿಕೃಷ್ಣ ಟ್ರಾವೆಲ್ಸ್ಗೆ ಸೇರಿದ ಬಸ್ ಟಿಪ್ಪರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ 14 ಪ್ರಯಾಣಿಕರು ಸಜೀವ ದಹನವಾಗಿದ್ದರು. 22 ಮಂದಿ ಗಾಯಗೊಂಡಿದ್ದರು.</p>.<p><strong>‘ನಿದ್ದೆ ಮಂಪರಿನಲ್ಲಿದ್ದ ಚಾಲಕ’</strong></p>.<p>‘ಬಸ್ ದುರಂತಕ್ಕೆ ಚಾಲಕ ಯುವರಾಜು ನಿರ್ಲಕ್ಷ್ಯವೇ ಮೂಲ ಕಾರಣ. ಆತ ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದ. ರಾಯವರಂ ಬಳಿ ಎಸ್–ಆಕಾರದ ತಿರುವಿನಲ್ಲಿ ಬಸ್ ಚಲಾಯಿಸುವಾಗ ಚಾಲಕ ನಿದ್ದೆ ಮಂಪರಿನಿಂದ ಕಷ್ಟಪಡುತ್ತಿದ್ದ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ಎದುರಿನ ಲೇನ್ಗೆ ನುಗ್ಗಿ ಜಲ್ಲಿ ತುಂಬಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಸಮೀಪ ಗುರುವಾರ ಸಂಭವಿಸಿದ್ದ ರಸ್ತೆ ಅಪಘಾತ ಸಂಬಂಧ ಹರಿಕೃಷ್ಣ ಟ್ರಾವೆಲ್ಸ್ ಮಾಲೀಕ ಪಿ. ಹರಿಕೃಷ್ಣಾರೆಡ್ಡಿ ಹಾಗೂ ಚಾಲಕ ಯುವರಾಜು ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ಅಪಘಾತ ಸಂಭವಿಸಿದ ಕೂಡಲೇ ಇಬ್ಬರೂ ತಲೆಮರೆಸಿಕೊಂಡಿದ್ದರು. ಹರಿಕೃಷ್ಣಾರೆಡ್ಡಿ ಅವರ ಮೊಬೈಲ್ ಫೋನ್ ಸಿಗ್ನಲ್ ಜಾಡು ಹಿಡಿದು ಬಂಧಿಸಲಾಗಿದೆ. ಘಟನೆ ನಡೆದಾಕ್ಷಣ ಸ್ಥಳದಿಂದ ಪರಾರಿಯಾಗಿದ್ದ ಚಾಲಕ ಯುವರಾಜು ಅವರನ್ನು ಕನಿಗಿರಿಯ ಪಾಮೂರು ಪಟ್ಟಣದ ಬಳಿ ಬಂಧಿಸಲಾಗಿದೆ.</p>.<p>ಗುರುವಾರ ಬೆಳಿಗ್ಗೆ 5.30ರ ಸುಮಾರಿಗೆ ಹರಿಕೃಷ್ಣ ಟ್ರಾವೆಲ್ಸ್ಗೆ ಸೇರಿದ ಬಸ್ ಟಿಪ್ಪರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ 14 ಪ್ರಯಾಣಿಕರು ಸಜೀವ ದಹನವಾಗಿದ್ದರು. 22 ಮಂದಿ ಗಾಯಗೊಂಡಿದ್ದರು.</p>.<p><strong>‘ನಿದ್ದೆ ಮಂಪರಿನಲ್ಲಿದ್ದ ಚಾಲಕ’</strong></p>.<p>‘ಬಸ್ ದುರಂತಕ್ಕೆ ಚಾಲಕ ಯುವರಾಜು ನಿರ್ಲಕ್ಷ್ಯವೇ ಮೂಲ ಕಾರಣ. ಆತ ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸುತ್ತಿದ್ದ. ರಾಯವರಂ ಬಳಿ ಎಸ್–ಆಕಾರದ ತಿರುವಿನಲ್ಲಿ ಬಸ್ ಚಲಾಯಿಸುವಾಗ ಚಾಲಕ ನಿದ್ದೆ ಮಂಪರಿನಿಂದ ಕಷ್ಟಪಡುತ್ತಿದ್ದ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ಎದುರಿನ ಲೇನ್ಗೆ ನುಗ್ಗಿ ಜಲ್ಲಿ ತುಂಬಿದ್ದ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>