<p><strong>ಅಮರಾವತಿ:</strong> ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಉದ್ಯಮಿಯೊಬ್ಬರು ₹140 ಕೋಟಿ ಮೌಲ್ಯದ 121 ಕೆ.ಜಿ ಚಿನ್ನ ಕಾಣಿಕೆ ನೀಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೆಂಕಟೇಶ್ವರ ಸ್ವಾಮಿಯ ಭಕ್ತರೊಬ್ಬರು ಕಂಪನಿಯೊಂದನ್ನು ಸ್ಥಾಪಿಸಿ ಯಶಸ್ವಿಯಾಗಿದ್ದಾರೆ. ಕೃತಜ್ಞತೆಯ ಸಂಕೇತವಾಗಿ ದೇವರಿಗೆ ಚಿನ್ನವನ್ನು ದಾನ ಮಾಡಲು ನಿರ್ಧರಿಸಿದ್ದಾರೆ’ ಎಂದು ಹೇಳಿದ್ದಾರೆ.</p><p>‘ನನ್ನ ಕಂಪನಿಯ ಶೇ 60ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ ₹6,000 ಕೋಟಿಯಿಂದ ₹7,000 ಕೋಟಿ ಗಳಿಸಿದ್ದೇನೆ. ವೆಂಕಟೇಶ್ವರ ಸ್ವಾಮಿ ಅನುಗ್ರಹದಿಂದಲೇ ನಾನು ಇಷ್ಟೊಂದು ಸಂಪತ್ತನ್ನು ಗಳಿಸಿದ್ದೇನೆ. ಕೃತಜ್ಞತೆಯ ಸಂಕೇತವಾಗಿ ದೇವರಿಗೆ ಚಿನ್ನವನ್ನು ಕಾಣಿಕೆ ನೀಡಲು ನಿರ್ಧರಿಸಿದ್ದೇನೆ’ ಎಂದು ಹೆಸರೇಳಲಿಚ್ಛಿಸದ ಉದ್ಯಮಿ ತಿಳಿಸಿದ್ದಾರೆ.</p><p>‘ಪ್ರತಿದಿನ ವೆಂಕಟೇಶ್ವರ ಸ್ವಾಮಿಯ ವಿಗ್ರಹವನ್ನು 120 ಕೆ.ಜಿ ತೂಕದ ಚಿನ್ನದ ಆಭರಣಗಳಿಂದ ಅಲಂಕರಿಸಲಾಗುತ್ತದೆ ಎಂದು ಟಿಡಿಪಿ ಮುಖ್ಯಸ್ಥರು ಹೇಳಿದ್ದರು. ಹಾಗಾಗಿ ನಾನು 121 ಕೆ.ಜಿ ತೂಕದ ಚಿನ್ನವನ್ನು ಕಾಣಿಕೆ ನೀಡುತ್ತಿದ್ದೇನೆ’ ಎಂದು ಉದ್ಯಮಿ ಹೇಳಿದ್ದಾರೆ.</p><p>ತಿರುಪತಿಯ ಉಚಿತ ಅನ್ನದಾನ ಕಾರ್ಯಕ್ರಮಕ್ಕೆ ಬೆಂಗಳೂರಿನ ಉದ್ಯಮಿ ಕಲ್ಯಾಣ ರಾಮನ್ ಕೃಷ್ಣಮೂರ್ತಿ ₹1 ಕೋಟಿ ಹಾಗೂ ಕೆ.ಎಂ. ಶ್ರೀನಿವಾಸ ಮೂರ್ತಿ 148 ಗ್ರಾಂ ತೂಕದ, ಅಂದಾಜು ₹25 ಲಕ್ಷ ಮೌಲ್ಯದ ಚಿನ್ನದ ಪದಕ ಕೊಡುಗೆಯಾಗಿ ನೀಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪ್ರಕಟಣೆಯಲ್ಲಿ ತಿಳಿಸಿತ್ತು.</p>.ಬೆಂಗಳೂರಿನ ಭಕ್ತರಿಂದ ತಿರುಪತಿಗೆ ಚಿನ್ನದ ಲಕ್ಷ್ಮಿ ಪೆಂಡೆಂಟ್, ₹1 ಕೋಟಿ ದೇಣಿಗೆ.ತಿರುಪತಿ ದೇವಸ್ಥಾನಂ | ಹಿಂದೂಗಳಲ್ಲದ ನಾಲ್ವರು ನೌಕರರ ಅಮಾನತು ಮಾಡಿದ ಟಿಟಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಉದ್ಯಮಿಯೊಬ್ಬರು ₹140 ಕೋಟಿ ಮೌಲ್ಯದ 121 ಕೆ.ಜಿ ಚಿನ್ನ ಕಾಣಿಕೆ ನೀಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೆಂಕಟೇಶ್ವರ ಸ್ವಾಮಿಯ ಭಕ್ತರೊಬ್ಬರು ಕಂಪನಿಯೊಂದನ್ನು ಸ್ಥಾಪಿಸಿ ಯಶಸ್ವಿಯಾಗಿದ್ದಾರೆ. ಕೃತಜ್ಞತೆಯ ಸಂಕೇತವಾಗಿ ದೇವರಿಗೆ ಚಿನ್ನವನ್ನು ದಾನ ಮಾಡಲು ನಿರ್ಧರಿಸಿದ್ದಾರೆ’ ಎಂದು ಹೇಳಿದ್ದಾರೆ.</p><p>‘ನನ್ನ ಕಂಪನಿಯ ಶೇ 60ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ ₹6,000 ಕೋಟಿಯಿಂದ ₹7,000 ಕೋಟಿ ಗಳಿಸಿದ್ದೇನೆ. ವೆಂಕಟೇಶ್ವರ ಸ್ವಾಮಿ ಅನುಗ್ರಹದಿಂದಲೇ ನಾನು ಇಷ್ಟೊಂದು ಸಂಪತ್ತನ್ನು ಗಳಿಸಿದ್ದೇನೆ. ಕೃತಜ್ಞತೆಯ ಸಂಕೇತವಾಗಿ ದೇವರಿಗೆ ಚಿನ್ನವನ್ನು ಕಾಣಿಕೆ ನೀಡಲು ನಿರ್ಧರಿಸಿದ್ದೇನೆ’ ಎಂದು ಹೆಸರೇಳಲಿಚ್ಛಿಸದ ಉದ್ಯಮಿ ತಿಳಿಸಿದ್ದಾರೆ.</p><p>‘ಪ್ರತಿದಿನ ವೆಂಕಟೇಶ್ವರ ಸ್ವಾಮಿಯ ವಿಗ್ರಹವನ್ನು 120 ಕೆ.ಜಿ ತೂಕದ ಚಿನ್ನದ ಆಭರಣಗಳಿಂದ ಅಲಂಕರಿಸಲಾಗುತ್ತದೆ ಎಂದು ಟಿಡಿಪಿ ಮುಖ್ಯಸ್ಥರು ಹೇಳಿದ್ದರು. ಹಾಗಾಗಿ ನಾನು 121 ಕೆ.ಜಿ ತೂಕದ ಚಿನ್ನವನ್ನು ಕಾಣಿಕೆ ನೀಡುತ್ತಿದ್ದೇನೆ’ ಎಂದು ಉದ್ಯಮಿ ಹೇಳಿದ್ದಾರೆ.</p><p>ತಿರುಪತಿಯ ಉಚಿತ ಅನ್ನದಾನ ಕಾರ್ಯಕ್ರಮಕ್ಕೆ ಬೆಂಗಳೂರಿನ ಉದ್ಯಮಿ ಕಲ್ಯಾಣ ರಾಮನ್ ಕೃಷ್ಣಮೂರ್ತಿ ₹1 ಕೋಟಿ ಹಾಗೂ ಕೆ.ಎಂ. ಶ್ರೀನಿವಾಸ ಮೂರ್ತಿ 148 ಗ್ರಾಂ ತೂಕದ, ಅಂದಾಜು ₹25 ಲಕ್ಷ ಮೌಲ್ಯದ ಚಿನ್ನದ ಪದಕ ಕೊಡುಗೆಯಾಗಿ ನೀಡಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಪ್ರಕಟಣೆಯಲ್ಲಿ ತಿಳಿಸಿತ್ತು.</p>.ಬೆಂಗಳೂರಿನ ಭಕ್ತರಿಂದ ತಿರುಪತಿಗೆ ಚಿನ್ನದ ಲಕ್ಷ್ಮಿ ಪೆಂಡೆಂಟ್, ₹1 ಕೋಟಿ ದೇಣಿಗೆ.ತಿರುಪತಿ ದೇವಸ್ಥಾನಂ | ಹಿಂದೂಗಳಲ್ಲದ ನಾಲ್ವರು ನೌಕರರ ಅಮಾನತು ಮಾಡಿದ ಟಿಟಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>