ಕೋಲ್ಕತ್ತ/ಢಾಕಾ : ‘ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ಹತ್ಯೆ ಪ್ರಕರಣದಲ್ಲಿ ಉದ್ಯಮಿ ಅಖ್ತರುಜ್ಜಮಾಂ ಶಾಹಿನ್ ಅವರು ಪ್ರಮುಖ ಶಂಕಿತ ವ್ಯಕ್ತಿಯಾಗಿದ್ದು, ಅವರನ್ನು ವಿಚಾರಣೆಗೆ ಗುರಿಪಡಿಸಲು ಭಾರತ ಹಾಗೂ ಅಮೆರಿಕದ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ‘ ಎಂದು ಬಾಂಗ್ಲಾದೇಶದ ಗೃಹ ಸಚಿವ ಅಸದುಜ್ಜಮಾಂ ಖಾನ್ ಹೇಳಿದ್ದಾರೆ.