<p><strong>ನವದೆಹಲಿ: </strong>ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದುನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.</p>.<p>ಎಲ್ಲ ಏಳು ಕ್ಷೇತ್ರಗಳಲ್ಲಿ ಮತಎಣಿಕೆ ಆರಂಭಗೊಂಡಿದ್ದು, ಯಾವ ಪಕ್ಷ ಗೆಲ್ಲಲಿದೆ ಎಂಬುದು ಕುತೂಹಲ ಕೆರಳಿಸಿವೆ. </p>.<p>ಭಾರಿ ಕುತೂಹಲ ಕೆರಳಿಸಿರುವ ತೆಲಂಗಾಣದ ಮುನುಗೋಡ್ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ನಾಲ್ಕನೇ ಸುತ್ತಿನ ಮತ ಎಣಿಕೆಅಂತ್ಯಕ್ಕೆ ಕೋಮಟಿರೆಡ್ಡಿ ರಾಜ್ ಗೋಪಾಲ ರೆಡ್ಡಿ 1,100 ಮತಗಳ ಮುನ್ನಡೆ ಗಳಿಸಿದ್ದಾರೆ.</p>.<p>ಹರಿಯಾಣದ ಆದಂಪುರ ಮತ್ತು ಉತ್ತರ ಪ್ರದೇಶದ ಗೋಲ ಗೋಕರ್ಣನಾಥ ಕ್ಷೇತ್ರದಲ್ಲೂ ಬಿಜೆಪಿ ಮುನ್ನಡೆ ಮುನ್ನಡೆಯಲ್ಲಿದೆ.</p>.<p>ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಆರ್ಜೆಡಿಯ ನೀಲಂ ದೇವಿ ಮುನ್ನಡೆಯಲ್ಲಿದ್ದಾರೆ. ಮಹಾರಾಷ್ಟ್ರದ ಅಂಧೇರಿ ಪೂರ್ವದಲ್ಲಿ ಉದ್ಧವ್ ಠಾಕ್ರೆ ಅವರ ಶಿವ ಸೇನಾದ ನಾಯಕ ಋತುಜ ಲಟಕೆ, 4,277 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.</p>.<p>ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಾದೇಶಿಕ ಪಕ್ಷಗಳು ಸವಾಲೊಡ್ಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದುನಡೆದಿದ್ದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.</p>.<p>ಎಲ್ಲ ಏಳು ಕ್ಷೇತ್ರಗಳಲ್ಲಿ ಮತಎಣಿಕೆ ಆರಂಭಗೊಂಡಿದ್ದು, ಯಾವ ಪಕ್ಷ ಗೆಲ್ಲಲಿದೆ ಎಂಬುದು ಕುತೂಹಲ ಕೆರಳಿಸಿವೆ. </p>.<p>ಭಾರಿ ಕುತೂಹಲ ಕೆರಳಿಸಿರುವ ತೆಲಂಗಾಣದ ಮುನುಗೋಡ್ ಕ್ಷೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. ನಾಲ್ಕನೇ ಸುತ್ತಿನ ಮತ ಎಣಿಕೆಅಂತ್ಯಕ್ಕೆ ಕೋಮಟಿರೆಡ್ಡಿ ರಾಜ್ ಗೋಪಾಲ ರೆಡ್ಡಿ 1,100 ಮತಗಳ ಮುನ್ನಡೆ ಗಳಿಸಿದ್ದಾರೆ.</p>.<p>ಹರಿಯಾಣದ ಆದಂಪುರ ಮತ್ತು ಉತ್ತರ ಪ್ರದೇಶದ ಗೋಲ ಗೋಕರ್ಣನಾಥ ಕ್ಷೇತ್ರದಲ್ಲೂ ಬಿಜೆಪಿ ಮುನ್ನಡೆ ಮುನ್ನಡೆಯಲ್ಲಿದೆ.</p>.<p>ಬಿಹಾರದ ಮೊಕಾಮಾ ಕ್ಷೇತ್ರದಲ್ಲಿ ಆರ್ಜೆಡಿಯ ನೀಲಂ ದೇವಿ ಮುನ್ನಡೆಯಲ್ಲಿದ್ದಾರೆ. ಮಹಾರಾಷ್ಟ್ರದ ಅಂಧೇರಿ ಪೂರ್ವದಲ್ಲಿ ಉದ್ಧವ್ ಠಾಕ್ರೆ ಅವರ ಶಿವ ಸೇನಾದ ನಾಯಕ ಋತುಜ ಲಟಕೆ, 4,277 ಮತಗಳಿಂದ ಮುನ್ನಡೆ ಗಳಿಸಿದ್ದಾರೆ.</p>.<p>ಬಿಹಾರದಲ್ಲಿ ಎರಡು ಮತ್ತು ಮಹಾರಾಷ್ಟ್ರ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಒಡಿಶಾ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು. ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಾದೇಶಿಕ ಪಕ್ಷಗಳು ಸವಾಲೊಡ್ಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>