<p><strong>ನವದೆಹಲಿ:</strong> ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಜೂನ್ 19ಕ್ಕೆ ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ತಿಳಿಸಿದೆ. </p><p>ಗುಜರಾತ್ನ ಎರಡು ಮತ್ತು ಕೇರಳ, ಪಂಜಾಬ್ ಹಾಗೂ ಪಶ್ಚಿಮ ಬಂಗಳಾದ ತಲಾ ಒಂದು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. </p><p>ಜೂನ್ 19ಕ್ಕೆ ಮತದಾನ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. </p><p>ನಾಮಪತ್ರ ಸಲ್ಲಿಸಲು ಜೂನ್ 2ರಂದು ಕೊನೆಯ ದಿನಾಂಕವಾಗಿದ್ದು, ಜೂನ್ 3ರಂದು ನಾಮನಿರ್ದೇಶನಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜೂನ್ 5 ಕೊನೆಯ ದಿನಾಂಕವಾಗಿದೆ. </p><p><strong>ಯಾವೆಲ್ಲ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ?</strong></p><ul><li><p>ಗುಜರಾತ್: ಕಢಿ ಮತ್ತು ವಿಸಾವದರ್</p></li><li><p>ಕೇರಳ: ನಿಲಂಬೂರ್</p></li><li><p>ಪಂಜಾಬ್: ಲೂಧಿಯಾನ ಪಶ್ಚಿಮ</p></li><li><p>ಪಶ್ಚಿಮ ಬಂಗಾಳ: ಕಾಳಿಗಂಜ್</p></li></ul><p>ಗುಜರಾತ್ನ ಕಢಿ ಕ್ಷೇತ್ರದಲ್ಲಿ ಶಾಸವ ಕರಸಾನ್ಭಾಯ್ ಸೋಲಂಕಿ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಭಯಾನಿ ಭೂಪೇಂದ್ರಭಾಯ್ ಗಂಡೂಭಾಯ್ ರಾಜೀನಾಮೆ ಬಳಿಕ ತೆರವಾದ ವಿಸಾವದರ್ ಕ್ಷೇತ್ರದಲ್ಲಿ ಚುನಾವಣೆ ನಿಗದಿಯಾಗಿದೆ. </p><p>ಕೇರಳದ ನಿಲಂಬೂರ್ನಲ್ಲಿ ಪಿ.ವಿ. ಅನ್ವರ್ ರಾಜೀನಾಮೆ ಸಲ್ಲಿಸಿದ್ದರು. ಪಂಜಾಬ್ನ ಲೂಧಿಯಾನ ಪಶ್ಚಿಮದಲ್ಲಿ ಗುರುಪ್ರೀತ್ ಬಸ್ಸಿ ಗೋಗಿ ಹಾಗೂ ಪಶ್ಚಿಮ ಬಂಗಾಳದ ಕಾಲಿಗಂಜ್ನಲ್ಲಿ ನಾಸಿರುದ್ದೀನ್ ಅಹಮ್ಮದ್ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ. </p>.Kerala | ಲೈಬೀರಿಯಾ ಹಡಗು ಮುಳುಗಡೆ, ಕಂಟೇನರ್ ಸಮುದ್ರಪಾಲು, ಮತ್ತೆ ಮೂವರ ರಕ್ಷಣೆ.Delhi Rains | ದೆಹಲಿಯಲ್ಲಿ ಭಾರಿ ಮಳೆ, ವಿಮಾನಗಳ ಸಂಚಾರದಲ್ಲಿ ವ್ಯತ್ಯಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಜೂನ್ 19ಕ್ಕೆ ನಿಗದಿಪಡಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ತಿಳಿಸಿದೆ. </p><p>ಗುಜರಾತ್ನ ಎರಡು ಮತ್ತು ಕೇರಳ, ಪಂಜಾಬ್ ಹಾಗೂ ಪಶ್ಚಿಮ ಬಂಗಳಾದ ತಲಾ ಒಂದು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. </p><p>ಜೂನ್ 19ಕ್ಕೆ ಮತದಾನ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. </p><p>ನಾಮಪತ್ರ ಸಲ್ಲಿಸಲು ಜೂನ್ 2ರಂದು ಕೊನೆಯ ದಿನಾಂಕವಾಗಿದ್ದು, ಜೂನ್ 3ರಂದು ನಾಮನಿರ್ದೇಶನಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜೂನ್ 5 ಕೊನೆಯ ದಿನಾಂಕವಾಗಿದೆ. </p><p><strong>ಯಾವೆಲ್ಲ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ?</strong></p><ul><li><p>ಗುಜರಾತ್: ಕಢಿ ಮತ್ತು ವಿಸಾವದರ್</p></li><li><p>ಕೇರಳ: ನಿಲಂಬೂರ್</p></li><li><p>ಪಂಜಾಬ್: ಲೂಧಿಯಾನ ಪಶ್ಚಿಮ</p></li><li><p>ಪಶ್ಚಿಮ ಬಂಗಾಳ: ಕಾಳಿಗಂಜ್</p></li></ul><p>ಗುಜರಾತ್ನ ಕಢಿ ಕ್ಷೇತ್ರದಲ್ಲಿ ಶಾಸವ ಕರಸಾನ್ಭಾಯ್ ಸೋಲಂಕಿ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಭಯಾನಿ ಭೂಪೇಂದ್ರಭಾಯ್ ಗಂಡೂಭಾಯ್ ರಾಜೀನಾಮೆ ಬಳಿಕ ತೆರವಾದ ವಿಸಾವದರ್ ಕ್ಷೇತ್ರದಲ್ಲಿ ಚುನಾವಣೆ ನಿಗದಿಯಾಗಿದೆ. </p><p>ಕೇರಳದ ನಿಲಂಬೂರ್ನಲ್ಲಿ ಪಿ.ವಿ. ಅನ್ವರ್ ರಾಜೀನಾಮೆ ಸಲ್ಲಿಸಿದ್ದರು. ಪಂಜಾಬ್ನ ಲೂಧಿಯಾನ ಪಶ್ಚಿಮದಲ್ಲಿ ಗುರುಪ್ರೀತ್ ಬಸ್ಸಿ ಗೋಗಿ ಹಾಗೂ ಪಶ್ಚಿಮ ಬಂಗಾಳದ ಕಾಲಿಗಂಜ್ನಲ್ಲಿ ನಾಸಿರುದ್ದೀನ್ ಅಹಮ್ಮದ್ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ. </p>.Kerala | ಲೈಬೀರಿಯಾ ಹಡಗು ಮುಳುಗಡೆ, ಕಂಟೇನರ್ ಸಮುದ್ರಪಾಲು, ಮತ್ತೆ ಮೂವರ ರಕ್ಷಣೆ.Delhi Rains | ದೆಹಲಿಯಲ್ಲಿ ಭಾರಿ ಮಳೆ, ವಿಮಾನಗಳ ಸಂಚಾರದಲ್ಲಿ ವ್ಯತ್ಯಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>