ನಿದ್ರಾಹೀನತೆಯಿಂದ ಬಳಲುತ್ತಿದ್ದ ವಿಜಯಕುಮಾರ್ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಅವರ ಆತ್ಮಹತ್ಯೆಗೆ ಕೆಲಸದ ಒತ್ತಡವೂ ಕಾರಣ ಇದೆ ಎಂದು ಹೇಳಲಾಗುತ್ತಿದೆ.
2009 ರ ಬ್ಯಾಚ್ನ ತಮಿಳುನಾಡು ಕೇಡರ್ನ ಐಪಿಎಸ್ ಅಧಿಕಾರಿಯಾಗಿದ್ದ ವಿಜಯಕುಮಾರ್ ಅವರು ಕಡಲೂರು, ಕಾಂಚಿಪುರಂ, ತಿರುವರೂರು, ನಾಗಪಟ್ಟಿಣಂ ಜಿಲ್ಲೆಗಳ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.
ಕೊಯಮತ್ತೂರು ವಲಯಕ್ಕೆ ಡೆಪ್ಯೂಟಿ ಐಜಿಪಿಯಾಗಿ ಬರುವ ಮೊದಲು ಚೆನ್ನೈನ ಅಣ್ಣಾ ನಗರ್ ಡಿಸಿಪಿಯಾಗಿದ್ದರು. ಅವರ ದುರಂತ ಸಾವಿಗೆ ಸಿಎಂ ಎಂಕೆ ಸ್ಟಾಲಿನ್ ಅವರು ಆಘಾತ ವ್ಯಕ್ತಪಡಿಸಿದ್ದು, ತಮಿಳುನಾಡು ಪೊಲೀಸ್ ಇಲಾಖೆಗೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ.
ಇನ್ನು ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಈ ಕುರಿತು ಪ್ರತಿಕ್ರಿಯಿಸಿ, ‘ಒಬ್ಬ ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದ ವಿಜಯಕುಮಾರ್ ಅವರಿಂದ ನಾನು ಸಾಕಷ್ಟು ಕಲಿತಿದ್ದೆ. ಅವರ ಈ ನಿರ್ಧಾರ ನನಗೆ ತೀವ್ರ ಆಘಾತವನ್ನುಂಟುಮಾಡಿದೆ. ನಾವು ಈ ಘಟನೆಯನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಅವರ ಸಾವಿನ ಬಗ್ಗೆ ರಾಜ್ಯ ಸರ್ಕಾರ ಉನ್ನತ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.