<p><strong>ನವದೆಹಲಿ:</strong> ಲೋಕಸಭೆ ಚುನಾವಣೆಗೆ ಮುಂಚಿತವಾಗಿ 'ಪೌರತ್ವ ತಿದ್ದುಪಡಿ ಕಾಯ್ದೆ' ಜಾರಿ ಮಾಡಿರುವುದು ಬಿಜೆಪಿಯ ನೀಚ ವೋಟ್ ಬ್ಯಾಂಕ್ ರಾಜಕಾರಣವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ. </p><p>ದೇಶದ ಜನರು ಈ ಕಾನೂನನ್ನು ರದ್ದುಗೊಳಿಸಲು ಬಯಸುತ್ತಾರೆ ಎಂದು ಅವರು ಹೇಳಿದರು. </p><p>ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ 3.5 ಕೋಟಿ ಅಲ್ಪಸಂಖ್ಯಾತರಿದ್ದಾರೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಬಡ ವಲಸಿಗರಿಗೆ ಇಲ್ಲಿ ಮನೆ, ಉದ್ಯೋಗ ನೀಡುವ ಮೂಲಕ ನಮ್ಮ ಜನರ ಜನರ ಹಣವನ್ನು ವ್ಯಯಿಸಲು ಬಯಸುತ್ತದೆ ಎಂದು ಅವರು ಆರೋಪಿಸಿದರು.</p><p>ನೆರೆಯ ರಾಷ್ಟ್ರಗಳ ಅಲ್ಪಸಂಖ್ಯಾತರು ದೇಶದಲ್ಲಿ ನೆಲೆಸುವುದರ ಮೂಲಕ ಬಿಜೆಪಿಗೆ ಚುನಾವಣೆಯಲ್ಲಿ ಲಾಭವಾಗಲಿದೆ. ಸಿಎಎ ಜಾರಿ ಬಿಜೆಪಿಯ ನೀಚ ವೋಟ್ ಬ್ಯಾಂಕ್ ರಾಜಕಾರಣವಾಗಿದೆ ಎಂದು ಅವರು ಹೇಳಿದರು. </p><p>ಈ ಕಾನೂನನ್ನು ಹಿಂಪಡೆಯದಿದ್ದರೆ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಕೇಜ್ರಿವಾಲ್ ಮನವಿ ಮಾಡಿದರು. </p><p>ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಸಿಎಎ ಜಾರಿಗೆ ತರಲಾಗಿದೆ ಎಂದು ಆರೋಪಿಸಲಾಗಿದೆ. </p><p>ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವವನ್ನು ನೀಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭೆ ಚುನಾವಣೆಗೆ ಮುಂಚಿತವಾಗಿ 'ಪೌರತ್ವ ತಿದ್ದುಪಡಿ ಕಾಯ್ದೆ' ಜಾರಿ ಮಾಡಿರುವುದು ಬಿಜೆಪಿಯ ನೀಚ ವೋಟ್ ಬ್ಯಾಂಕ್ ರಾಜಕಾರಣವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ. </p><p>ದೇಶದ ಜನರು ಈ ಕಾನೂನನ್ನು ರದ್ದುಗೊಳಿಸಲು ಬಯಸುತ್ತಾರೆ ಎಂದು ಅವರು ಹೇಳಿದರು. </p><p>ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ 3.5 ಕೋಟಿ ಅಲ್ಪಸಂಖ್ಯಾತರಿದ್ದಾರೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಬಡ ವಲಸಿಗರಿಗೆ ಇಲ್ಲಿ ಮನೆ, ಉದ್ಯೋಗ ನೀಡುವ ಮೂಲಕ ನಮ್ಮ ಜನರ ಜನರ ಹಣವನ್ನು ವ್ಯಯಿಸಲು ಬಯಸುತ್ತದೆ ಎಂದು ಅವರು ಆರೋಪಿಸಿದರು.</p><p>ನೆರೆಯ ರಾಷ್ಟ್ರಗಳ ಅಲ್ಪಸಂಖ್ಯಾತರು ದೇಶದಲ್ಲಿ ನೆಲೆಸುವುದರ ಮೂಲಕ ಬಿಜೆಪಿಗೆ ಚುನಾವಣೆಯಲ್ಲಿ ಲಾಭವಾಗಲಿದೆ. ಸಿಎಎ ಜಾರಿ ಬಿಜೆಪಿಯ ನೀಚ ವೋಟ್ ಬ್ಯಾಂಕ್ ರಾಜಕಾರಣವಾಗಿದೆ ಎಂದು ಅವರು ಹೇಳಿದರು. </p><p>ಈ ಕಾನೂನನ್ನು ಹಿಂಪಡೆಯದಿದ್ದರೆ ಜನರು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಕೇಜ್ರಿವಾಲ್ ಮನವಿ ಮಾಡಿದರು. </p><p>ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಸಿಎಎ ಜಾರಿಗೆ ತರಲಾಗಿದೆ ಎಂದು ಆರೋಪಿಸಲಾಗಿದೆ. </p><p>ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವವನ್ನು ನೀಡಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>