ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ. ಬಂಗಾಳದಲ್ಲಿ ನಿರಾಶ್ರಿತರ ಕೇಂದ್ರ ಸ್ಥಾಪಿಸಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ

Published 13 ಮಾರ್ಚ್ 2024, 9:33 IST
Last Updated 13 ಮಾರ್ಚ್ 2024, 9:33 IST
ಅಕ್ಷರ ಗಾತ್ರ

ಜಲ್‌ಪಾಯಿಗುರಿ, (ಪಶ್ಚಿಮ ಬಂಗಾಳ): ಅಸ್ಸಾಂನಲ್ಲಿ ಇರುವ ಹಾಗೆ ಪಶ್ಚಿಮ ಬಂಗಾಳದಲ್ಲೂ ನಿರಾಶ್ರಿತರ ಶಿಬಿರ ಸ್ಥಾಪಿಸುವುದಕ್ಕೆ ನಾನು ಬಿಡುವುದಿಲ್ಲ. ಸಿಎಎ, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯ ರಾಜಕೀಯ ಗಿಮಿಕ್ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಗೆ (ಎನ್‌ಆರ್‌ಸಿ) ಸಂಬಂಧ ಇದೆ. ಹೀಗಾಗಿ ಅದನ್ನು ನಾನು ವಿರೋಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

‌ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಟೀಕಿಸಿದ ತಮ್ಮ ಸಹೋದರ ಬಬುನ್ ಬ್ಯಾನರ್ಜಿ ವಿರುದ್ದವೂ ವಾಗ್ದಾಳಿ ನಡೆಸಿದ ಮಮತಾ, ಅವರ ಜೊತೆ ಇರುವ ಎಲ್ಲಾ ಸಂಬಂಧಗಳನ್ನು ತ್ಯಜಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

‘ನಾನು ಹಾಗೂ ನನ್ನ ಕುಟುಂಬ ಅವನ ಜೊತೆ ಇರುವ ಎಲ್ಲಾ ಸಂಬಂಧವನ್ನು ತ್ಯಜಿಸಲು ನಿರ್ಧರಿಸಿದ್ದೇವೆ. ದುರಾಸೆ ಇರುವ ಜನರು ನನಗೆ ಇಷ್ಟವಾಗುವುದಿಲ್ಲ. ಅವನು ಹೇಳಿದ್ದನ್ನು ನಾನು ಕೇಳಿಸಿಕೊಂಡಿದ್ದೇನೆ. ಅವನು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದು, ಏನೂ ಬೇಕಾದರೂ ಮಾಡಲಿ. ನನಗೂ ಅವನಿಗೂ ಸಂಬಂಧ ಕಲ್ಪಿಸಬೇಡಿ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT