<p><strong>ಗುವಾಹಟಿ</strong>: ಈಶಾನ್ಯ ರಾಜ್ಯಗಳಲ್ಲಿಪೌರತ್ವ (ತಿದ್ದುಪಡಿ) ಮಸೂದೆಗೆ (ಸಿಎಬಿ) ಭಾರೀ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಮತ್ತು ತ್ರಿಪುರಾದಲ್ಲಿ ಸೇನಾಪಡೆಯನ್ನು ನಿಯೋಜಿಸಿದ್ದು, ಗುವಾಹಟಿಯಲ್ಲಿ ಕರ್ಫ್ಯೂ ಹೇರಲಾಗಿದೆ.</p>.<p>ಬುಧವಾರ ತ್ರಿಪುರಾದಲ್ಲಿ ಸೇನಾಪಡೆಯ ಎರಡು ತುಕಡಿ ಮತ್ತು ಅಸ್ಸಾಂನ ಬೊನಾಯಿಗಾಂವ್ನಲ್ಲಿ ಒಂದು ತುಕಡಿ ನಿಯೋಜಿಸಲಾಗಿದೆ.</p>.<p><strong>ಇದನ್ನೂ ಓದಿ</strong>:<a href="https://www.prajavani.net/stories/national/northeast-shuts-down-to-oppose-cab-689249.html" target="_blank">ಪೌರತ್ವ ಮಸೂದೆಗೆ ವಿರೋಧ: ಈಶಾನ್ಯ ಭಾರತ ಸ್ಥಗಿತ, ಘರ್ಷಣೆ</a></p>.<p>ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿದ ಬೆನ್ನಲ್ಲೇ ಈಶಾನ್ಯ ರಾಜ್ಯಗಳಲ್ಲಿ ವಿರೋಧದ ದನಿ ಎದ್ದಿತ್ತು. ಮಸೂದೆಯನ್ನು ವಿರೋಧಿಸಿ ನಾರ್ಥ್ ಈಸ್ಟ್ ಸ್ಟೂಡೆಂಟ್ಸ್ ಯೂನಿಯನ್ (ಎನ್ಇಎಸ್ಒ) ಮಂಗಳವಾರಕರೆ ನೀಡಿದ್ದ 11 ಗಂಟೆಗಳ ಬಂದ್ಗೆ ಈಶಾನ್ಯ ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.</p>.<p>ಈ ನಡುವೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ 5000 ಅರೆ ಸೇನಾ ಸಿಬ್ಬಂದಿಗಳನ್ನು ನಿಯೋಜಿಸಿತ್ತು.</p>.<p>ಬುಧವಾರ ಇಲ್ಲಿ ಬಂದ್ ಇರಲಿಲ್ಲ. ಆದರೆ ಸಾವಿರಾರು ಪ್ರತಿಭಟನಾಕಾರರು ಗುವಾಹಟಿ, ಜೋರಟ್, ಗೋಲಾಘಾಟ್, ದಿಬ್ರುಘಡ್, ತಿನ್ಸುಕಿಯ, ಶಿವಸಾಗರ್, ಬೊನಾಯಿಗಾಂವ್, ನಾಗೋನ್ ಮತ್ತು ಸೋನಿತ್ಪುರ್ನಲ್ಲಿ ರಸ್ತೆಗಿಳಿದು ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.</p>.<p>ದಿಸ್ಪುರ್ನಲ್ಲಿ ವಿಧಾನಸಭೆಯ ಹೊರಗಡೆ ಜನರು ಪ್ರತಿಭಟಿಸಿದ್ದು, ಹತ್ತಿರದ ರಸ್ತೆಗಳನ್ನು ವಿದ್ಯಾರ್ಥಿಗಳು ಬಂದ್ ಮಾಡಿದ್ದಾರೆ. ಜನರ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿ ಅಶ್ರುವಾಯು ಪ್ರಹಾರ ಮಾಡಿದ್ದಾರೆ.</p>.<p>ಜಪಾನ್ ಪ್ರತಿನಿಧಿ ಶಿಂಜೊಅಬೆ ಅವರ ಜತೆಗೆ ನರೇಂದ್ರ ಮೋದಿ ಮಾತುಕತೆ ನಡೆಸಲಿದ್ದು ಅದಕ್ಕಾಗಿ ಸಿದ್ಧಪಡಿಸಿದ್ದ ವೇದಿಕೆಯನ್ನು ಭಾನುವಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹಾಳುಗೆಡವಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಈಶಾನ್ಯ ರಾಜ್ಯಗಳಲ್ಲಿಪೌರತ್ವ (ತಿದ್ದುಪಡಿ) ಮಸೂದೆಗೆ (ಸಿಎಬಿ) ಭಾರೀ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಅಸ್ಸಾಂ ಮತ್ತು ತ್ರಿಪುರಾದಲ್ಲಿ ಸೇನಾಪಡೆಯನ್ನು ನಿಯೋಜಿಸಿದ್ದು, ಗುವಾಹಟಿಯಲ್ಲಿ ಕರ್ಫ್ಯೂ ಹೇರಲಾಗಿದೆ.</p>.<p>ಬುಧವಾರ ತ್ರಿಪುರಾದಲ್ಲಿ ಸೇನಾಪಡೆಯ ಎರಡು ತುಕಡಿ ಮತ್ತು ಅಸ್ಸಾಂನ ಬೊನಾಯಿಗಾಂವ್ನಲ್ಲಿ ಒಂದು ತುಕಡಿ ನಿಯೋಜಿಸಲಾಗಿದೆ.</p>.<p><strong>ಇದನ್ನೂ ಓದಿ</strong>:<a href="https://www.prajavani.net/stories/national/northeast-shuts-down-to-oppose-cab-689249.html" target="_blank">ಪೌರತ್ವ ಮಸೂದೆಗೆ ವಿರೋಧ: ಈಶಾನ್ಯ ಭಾರತ ಸ್ಥಗಿತ, ಘರ್ಷಣೆ</a></p>.<p>ಪೌರತ್ವ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿದ ಬೆನ್ನಲ್ಲೇ ಈಶಾನ್ಯ ರಾಜ್ಯಗಳಲ್ಲಿ ವಿರೋಧದ ದನಿ ಎದ್ದಿತ್ತು. ಮಸೂದೆಯನ್ನು ವಿರೋಧಿಸಿ ನಾರ್ಥ್ ಈಸ್ಟ್ ಸ್ಟೂಡೆಂಟ್ಸ್ ಯೂನಿಯನ್ (ಎನ್ಇಎಸ್ಒ) ಮಂಗಳವಾರಕರೆ ನೀಡಿದ್ದ 11 ಗಂಟೆಗಳ ಬಂದ್ಗೆ ಈಶಾನ್ಯ ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.</p>.<p>ಈ ನಡುವೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ 5000 ಅರೆ ಸೇನಾ ಸಿಬ್ಬಂದಿಗಳನ್ನು ನಿಯೋಜಿಸಿತ್ತು.</p>.<p>ಬುಧವಾರ ಇಲ್ಲಿ ಬಂದ್ ಇರಲಿಲ್ಲ. ಆದರೆ ಸಾವಿರಾರು ಪ್ರತಿಭಟನಾಕಾರರು ಗುವಾಹಟಿ, ಜೋರಟ್, ಗೋಲಾಘಾಟ್, ದಿಬ್ರುಘಡ್, ತಿನ್ಸುಕಿಯ, ಶಿವಸಾಗರ್, ಬೊನಾಯಿಗಾಂವ್, ನಾಗೋನ್ ಮತ್ತು ಸೋನಿತ್ಪುರ್ನಲ್ಲಿ ರಸ್ತೆಗಿಳಿದು ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.</p>.<p>ದಿಸ್ಪುರ್ನಲ್ಲಿ ವಿಧಾನಸಭೆಯ ಹೊರಗಡೆ ಜನರು ಪ್ರತಿಭಟಿಸಿದ್ದು, ಹತ್ತಿರದ ರಸ್ತೆಗಳನ್ನು ವಿದ್ಯಾರ್ಥಿಗಳು ಬಂದ್ ಮಾಡಿದ್ದಾರೆ. ಜನರ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿ ಅಶ್ರುವಾಯು ಪ್ರಹಾರ ಮಾಡಿದ್ದಾರೆ.</p>.<p>ಜಪಾನ್ ಪ್ರತಿನಿಧಿ ಶಿಂಜೊಅಬೆ ಅವರ ಜತೆಗೆ ನರೇಂದ್ರ ಮೋದಿ ಮಾತುಕತೆ ನಡೆಸಲಿದ್ದು ಅದಕ್ಕಾಗಿ ಸಿದ್ಧಪಡಿಸಿದ್ದ ವೇದಿಕೆಯನ್ನು ಭಾನುವಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹಾಳುಗೆಡವಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>