<p><strong>ನವದೆಹಲಿ</strong>: ರಾಸಾಯನಿಕ ಗೊಬ್ಬರಗಳ ಉಪಯೋಗ ಕಡಿಮೆ ಮಾಡಿ, ಪರ್ಯಾಯ ರಸಗೊಬ್ಬರಗಳ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಉತ್ತೇಜಿಸುವುದಕ್ಕಾಗಿ ‘ಪಿಎಂ–ಪ್ರಣಾಮ್’ ಎಂಬ ನೂತನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.</p>.<p>ಅಲ್ಲದೇ, ಪ್ರತಿ ಕ್ವಿಂಟಲ್ ಕಬ್ಬಿಗೆ ನೀಡುವ ಎಫ್ಆರ್ಪಿಯನ್ನು ₹ 10ರಷ್ಟು ಹೆಚ್ಚಿಸುವುದಕ್ಕೆ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು ಅನುಮೋದನೆ ನೀಡಿದೆ.</p>.<p>ಕೇಂದ್ರ ರಸಗೊಬ್ಬರ ಸಚಿವ ಮನ್ಸುಖ್ ಮಾಂಡವಿಯಾ, ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>‘ಭೂಮಿಯಲ್ಲಿನ ಪೋಷಕಾಂಶಗಳ ಪ್ರಮಾಣ ಹೆಚ್ಚಿಸುವುದು ಹಾಗೂ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಸಂಕ್ಷಿಪ್ತವಾಗಿ ‘ಪಿಎಂ–ಪ್ರಣಾಮ್’ (ಪಿಎಂ ಪ್ರೊಗ್ರಾಂ ಫಾರ್ ರಿಸ್ಟೋರೇಷನ್, ಅವೇರ್ನೆಸ್, ಜನರೇಷನ್, ನೌರಿಷ್ಮೆಂಟ್ ಅಂಡ್ ಅಮಿಲಿಯೋರೇಷನ್ ಆಫ್ ಮದರ್ ಅರ್ತ್) ಎಂದು ಕರೆಯಲಾಗುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಬಜೆಟ್ ಮಂಡನೆ ವೇಳೆ ಈ ಯೋಜನೆಯನ್ನು ಘೋಷಿಸಿದ್ದರು.</p>.<p>‘ಪರ್ಯಾಯ ಗೊಬ್ಬರಗಳನ್ನು ಬಳಕೆಯನ್ನು ಉತ್ತೇಜಿಸುವ ಹಾಗೂ ರಾಸಾಯನಿಕ ಗೊಬ್ಬರದ ಬಳಕೆಯನ್ನು ಕಡಿಮೆ ಮಾಡುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುವುದು’ ಎಂದು ಸಚಿವ ಮಾಂಡವಿಯಾ ಹೇಳಿದರು.</p>.<p>‘ರಾಜ್ಯವೊಂದು 10 ಲಕ್ಷ ಟನ್ ರಸಗೊಬ್ಬರ ಬಳಸುತ್ತದೆ ಎಂದು ಭಾವಿಸೋಣ. ಈ ಪ್ರಮಾಣವನ್ನು 3 ಲಕ್ಷ ಟನ್ಗೆ ಇಳಿಸಿದಲ್ಲಿ ಸಬ್ಸಿಡಿಯಲ್ಲಿ ₹ 3 ಸಾವಿರ ಕೋಟಿ ರೂಪಾಯಿ ಉಳಿತಾಯ ಮಾಡಿದಂತಾಗುತ್ತದೆ. ಈ ಹಣದ ಪೈಕಿ ಕೇಂದ್ರ ಸರ್ಕಾರವು ಶೇ 50ರಷ್ಟು ಅಂದರೆ, ₹ 1,500 ಕೋಟಿಯನ್ನು ರಾಜ್ಯಗಳಿಗೆ ನೀಡುತ್ತದೆ. ಈ ಹಣವನ್ನು ಪರ್ಯಾಯ ಗೊಬ್ಬರಗಳ ಬಳಕೆಯನ್ನು ಉತ್ತೇಜಿಸುವುದಕ್ಕಾಗಿ ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯಗಳು ಬಳಕೆ ಮಾಡಿಕೊಳ್ಳಬೇಕು’ ಎಂದು ಮಾಂಡವಿಯಾ ವಿವರಿಸಿದರು.</p>.<p>ಹೆಚ್ಚಳ: ಬರುವ ಅಕ್ಟೋಬರ್ನಿಂದ ಆರಂಭವಾಗುವ ಹಂಗಾಮಿಗೆ ಅನ್ವಯಿಸುವಂತೆ, ಕಬ್ಬಿಗೆ ನೀಡುವ ಎಫ್ಆರ್ಪಿಯಲ್ಲಿ ₹ 10 ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದಾಗಿ ಪ್ರತಿ ಕ್ವಿಂಟಲ್ಗೆ ನೀಡುವ ಎಫ್ಆರ್ಪಿ ₹ 315 ಆಗಲಿದೆ ಎಂದು ಸಚಿವ ಅನುರಾಗ್ ಠಾಕೂರ್ ವಿವರಿಸಿದರು.</p>.<p>ಪ್ರಧಾನಿ ನರೇಂದ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಠಾಕೂರ್ ಹೇಳಿದರು.</p>.<p>‘ಕಳೆದ ವರ್ಷ ಪ್ರತಿ ಕ್ವಿಂಟಲ್ ಕಬ್ಬಿಗೆ ₹ 305 ಎಫ್ಆರ್ಪಿ ನಿಗದಿ ಮಾಡಲಾಗಿತ್ತು. ಈಗ, ₹ 315ಕ್ಕೆ ಹೆಚ್ಚಿಸಲಾಗಿದೆ. ಕಳೆದ ಸಾಲಿಗೆ ಹೋಲಿಸಿದಲ್ಲಿ ಶೇ 3.28ರಷ್ಟು ಹೆಚ್ಚಳ ಮಾಡಿದಂತಾಗಿದೆ’ ಎಂದು ಹೇಳಿದರು. </p>.<p><strong>ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ </strong></p><p>ಮಸೂದೆಗೆ ಅಸ್ತು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ನೀಡುವ ಉದ್ದೇಶದ ‘ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆ–2023’ಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಸಂಪುಟ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಸಚಿವ ಅನುರಾಗ್ ಠಾಕೂರ್ ‘ಬರುವ ಸಂಸತ್ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು. ಮಸೂದೆ ಅಂಗೀಕಾರ ದೊರೆತ ನಂತರ ವಿಜ್ಞಾನ ಮತ್ತು ಎಂಜಿನಿಯರಿಂಗ್ ಸಂಶೋಧನಾ ಮಂಡಳಿ ಕಾಯ್ದೆ2008 ರದ್ದಾಗುವುದು’ ಎಂದು ಹೇಳಿದರು. ‘2027–28ರವರೆಗೆ ಸಂಶೋಧನೆಗಾಗಿ ಕೇಂದ್ರ ಸರ್ಕಾರ ₹ 50 ಸಾವಿರ ಕೋಟಿ ತೆಗೆದಿರಿಸಿದೆ. ಈ ಪೈಕಿ ಮುಂದಿನ ಐದು ವರ್ಷಗಳ ವರೆಗೆ ₹ 14 ಸಾವಿರ ಕೋಟಿಯನ್ನು ಸರ್ಕಾರವೇ ಒದಗಿಸುವುದು. ಉಳಿದ ಮೊತ್ತವನ್ನು ಸಾರ್ವಜನಿಕ ಉದ್ದಿಮೆಗಳು ಕೈಗಾರಿಕೆಗಳು ಪ್ರತಿಷ್ಠಾನಗಳು ಅಂತರರಾಷ್ಟ್ರೀಯ ಸಂಶೋಧನಾ ಸಂಘಟನೆಗಳಿಂದ ಸಂಗ್ರಹಿಸಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಸಾಯನಿಕ ಗೊಬ್ಬರಗಳ ಉಪಯೋಗ ಕಡಿಮೆ ಮಾಡಿ, ಪರ್ಯಾಯ ರಸಗೊಬ್ಬರಗಳ ಬಳಕೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಉತ್ತೇಜಿಸುವುದಕ್ಕಾಗಿ ‘ಪಿಎಂ–ಪ್ರಣಾಮ್’ ಎಂಬ ನೂತನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.</p>.<p>ಅಲ್ಲದೇ, ಪ್ರತಿ ಕ್ವಿಂಟಲ್ ಕಬ್ಬಿಗೆ ನೀಡುವ ಎಫ್ಆರ್ಪಿಯನ್ನು ₹ 10ರಷ್ಟು ಹೆಚ್ಚಿಸುವುದಕ್ಕೆ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು ಅನುಮೋದನೆ ನೀಡಿದೆ.</p>.<p>ಕೇಂದ್ರ ರಸಗೊಬ್ಬರ ಸಚಿವ ಮನ್ಸುಖ್ ಮಾಂಡವಿಯಾ, ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>‘ಭೂಮಿಯಲ್ಲಿನ ಪೋಷಕಾಂಶಗಳ ಪ್ರಮಾಣ ಹೆಚ್ಚಿಸುವುದು ಹಾಗೂ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಸಂಕ್ಷಿಪ್ತವಾಗಿ ‘ಪಿಎಂ–ಪ್ರಣಾಮ್’ (ಪಿಎಂ ಪ್ರೊಗ್ರಾಂ ಫಾರ್ ರಿಸ್ಟೋರೇಷನ್, ಅವೇರ್ನೆಸ್, ಜನರೇಷನ್, ನೌರಿಷ್ಮೆಂಟ್ ಅಂಡ್ ಅಮಿಲಿಯೋರೇಷನ್ ಆಫ್ ಮದರ್ ಅರ್ತ್) ಎಂದು ಕರೆಯಲಾಗುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು ಬಜೆಟ್ ಮಂಡನೆ ವೇಳೆ ಈ ಯೋಜನೆಯನ್ನು ಘೋಷಿಸಿದ್ದರು.</p>.<p>‘ಪರ್ಯಾಯ ಗೊಬ್ಬರಗಳನ್ನು ಬಳಕೆಯನ್ನು ಉತ್ತೇಜಿಸುವ ಹಾಗೂ ರಾಸಾಯನಿಕ ಗೊಬ್ಬರದ ಬಳಕೆಯನ್ನು ಕಡಿಮೆ ಮಾಡುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡುವುದು’ ಎಂದು ಸಚಿವ ಮಾಂಡವಿಯಾ ಹೇಳಿದರು.</p>.<p>‘ರಾಜ್ಯವೊಂದು 10 ಲಕ್ಷ ಟನ್ ರಸಗೊಬ್ಬರ ಬಳಸುತ್ತದೆ ಎಂದು ಭಾವಿಸೋಣ. ಈ ಪ್ರಮಾಣವನ್ನು 3 ಲಕ್ಷ ಟನ್ಗೆ ಇಳಿಸಿದಲ್ಲಿ ಸಬ್ಸಿಡಿಯಲ್ಲಿ ₹ 3 ಸಾವಿರ ಕೋಟಿ ರೂಪಾಯಿ ಉಳಿತಾಯ ಮಾಡಿದಂತಾಗುತ್ತದೆ. ಈ ಹಣದ ಪೈಕಿ ಕೇಂದ್ರ ಸರ್ಕಾರವು ಶೇ 50ರಷ್ಟು ಅಂದರೆ, ₹ 1,500 ಕೋಟಿಯನ್ನು ರಾಜ್ಯಗಳಿಗೆ ನೀಡುತ್ತದೆ. ಈ ಹಣವನ್ನು ಪರ್ಯಾಯ ಗೊಬ್ಬರಗಳ ಬಳಕೆಯನ್ನು ಉತ್ತೇಜಿಸುವುದಕ್ಕಾಗಿ ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯಗಳು ಬಳಕೆ ಮಾಡಿಕೊಳ್ಳಬೇಕು’ ಎಂದು ಮಾಂಡವಿಯಾ ವಿವರಿಸಿದರು.</p>.<p>ಹೆಚ್ಚಳ: ಬರುವ ಅಕ್ಟೋಬರ್ನಿಂದ ಆರಂಭವಾಗುವ ಹಂಗಾಮಿಗೆ ಅನ್ವಯಿಸುವಂತೆ, ಕಬ್ಬಿಗೆ ನೀಡುವ ಎಫ್ಆರ್ಪಿಯಲ್ಲಿ ₹ 10 ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದಾಗಿ ಪ್ರತಿ ಕ್ವಿಂಟಲ್ಗೆ ನೀಡುವ ಎಫ್ಆರ್ಪಿ ₹ 315 ಆಗಲಿದೆ ಎಂದು ಸಚಿವ ಅನುರಾಗ್ ಠಾಕೂರ್ ವಿವರಿಸಿದರು.</p>.<p>ಪ್ರಧಾನಿ ನರೇಂದ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಠಾಕೂರ್ ಹೇಳಿದರು.</p>.<p>‘ಕಳೆದ ವರ್ಷ ಪ್ರತಿ ಕ್ವಿಂಟಲ್ ಕಬ್ಬಿಗೆ ₹ 305 ಎಫ್ಆರ್ಪಿ ನಿಗದಿ ಮಾಡಲಾಗಿತ್ತು. ಈಗ, ₹ 315ಕ್ಕೆ ಹೆಚ್ಚಿಸಲಾಗಿದೆ. ಕಳೆದ ಸಾಲಿಗೆ ಹೋಲಿಸಿದಲ್ಲಿ ಶೇ 3.28ರಷ್ಟು ಹೆಚ್ಚಳ ಮಾಡಿದಂತಾಗಿದೆ’ ಎಂದು ಹೇಳಿದರು. </p>.<p><strong>ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ </strong></p><p>ಮಸೂದೆಗೆ ಅಸ್ತು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ನೀಡುವ ಉದ್ದೇಶದ ‘ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆ–2023’ಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಸಂಪುಟ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಸಚಿವ ಅನುರಾಗ್ ಠಾಕೂರ್ ‘ಬರುವ ಸಂಸತ್ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು. ಮಸೂದೆ ಅಂಗೀಕಾರ ದೊರೆತ ನಂತರ ವಿಜ್ಞಾನ ಮತ್ತು ಎಂಜಿನಿಯರಿಂಗ್ ಸಂಶೋಧನಾ ಮಂಡಳಿ ಕಾಯ್ದೆ2008 ರದ್ದಾಗುವುದು’ ಎಂದು ಹೇಳಿದರು. ‘2027–28ರವರೆಗೆ ಸಂಶೋಧನೆಗಾಗಿ ಕೇಂದ್ರ ಸರ್ಕಾರ ₹ 50 ಸಾವಿರ ಕೋಟಿ ತೆಗೆದಿರಿಸಿದೆ. ಈ ಪೈಕಿ ಮುಂದಿನ ಐದು ವರ್ಷಗಳ ವರೆಗೆ ₹ 14 ಸಾವಿರ ಕೋಟಿಯನ್ನು ಸರ್ಕಾರವೇ ಒದಗಿಸುವುದು. ಉಳಿದ ಮೊತ್ತವನ್ನು ಸಾರ್ವಜನಿಕ ಉದ್ದಿಮೆಗಳು ಕೈಗಾರಿಕೆಗಳು ಪ್ರತಿಷ್ಠಾನಗಳು ಅಂತರರಾಷ್ಟ್ರೀಯ ಸಂಶೋಧನಾ ಸಂಘಟನೆಗಳಿಂದ ಸಂಗ್ರಹಿಸಲಾಗುವುದು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>