<p><strong>ನವದೆಹಲಿ</strong>: ನಿಯಂತ್ರಿತ ಬೆಲೆಯಲ್ಲಿ ಮನೆಗಳಿಗೆ ಅಡುಗೆ ಅನಿಲ ಸಿಲಿಂಡರ್ಗಳನ್ನು ಪೂರೈಸಿದ್ದಕ್ಕಾಗಿ ಸರ್ಕಾರಿ ಸ್ವಾಮ್ಯದ ಮೂರು ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂಗೆ ಪರಿಹಾರವಾಗಿ ₹30,000 ಕೋಟಿ ನೀಡುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ.</p>.<p>ಪ್ರಸ್ತುತ ಭೌಗೋಳಿಕ ರಾಜಕೀಯ ಸನ್ನಿವೇಶಗಳು, ತೈಲ ಮತ್ತು ಅನಿಲ ವಲಯದಲ್ಲಿನ ಅನಿಶ್ಚಿತತೆ ಗಮನದಲ್ಲಿಟ್ಟುಕೊಂಡು ಈ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಾರ್ತಾ ಹಾಗೂ ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗಾರರಿಗೆ ತಿಳಿಸಿದರು. ರಷ್ಯಾದಿಂದ ಕಚ್ಚಾ ತೈಲ ಖರೀದಿ ನಿಲ್ಲಿಸುವಂತೆ ಅಮೆರಿಕ ಒತ್ತಡ ಹೇರುತ್ತಿರುವುದರಿಂದ ಭಾರತದಲ್ಲಿ ಇಂಧನ ಬೆಲೆಗಳು ಹೆಚ್ಚಳವಾಗುವ ನಿರೀಕ್ಷೆ ಇದೆ. </p>.<p>ಕಳೆದ 15 ತಿಂಗಳುಗಳಲ್ಲಿ ಕಡಿಮೆ ಬೆಲೆಗೆ ಎಲ್ಪಿಜಿ ಮಾರಾಟ ಮಾಡಿರುವುದರಿಂದ ಉಂಟಾದ ನಷ್ಟ ಸರಿದೂಗಿಸಲು ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳಿಗೆ 12 ಕಂತುಗಳಲ್ಲಿ ಈ ಮೊತ್ತ ಪಾವತಿಸಲಾಗುವುದು.</p>.<p>2024-25ರಲ್ಲಿ ಎಲ್ಪಿಜಿಯ ಅಂತರರಾಷ್ಟ್ರೀಯ ಬೆಲೆ ಗರಿಷ್ಠ ಮಟ್ಟದಲ್ಲಿದ್ದವು. ಆದಾಗ್ಯೂ, ದೇಶದಲ್ಲಿ ಎಲ್ಪಿಜಿ ಬೆಲೆ ಹೆಚ್ಚಳವಾಗದಂತೆ ನೋಡಿಕೊಳ್ಳಲಾಗಿತ್ತು. ಇದರಿಂದಾಗಿ, ಮೂರು ಕಂಪನಿಗಳು ಗಮನಾರ್ಹ ನಷ್ಟ ಅನುಭವಿಸಿದ್ದವು. ಈ ಸಬ್ಸಿಡಿಯಿಂದಾಗಿ ಕಚ್ಚಾ ತೈಲ ಮತ್ತು ಎಲ್ಪಿಜಿ ಖರೀದಿ, ಸಾಲ ಮರುಪಾವತಿ ಮತ್ತು ಬಂಡವಾಳ ವೆಚ್ಚದಂತಹ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಕಂಪನಿಗಳಿಗೆ ಅನುಕೂಲವಾಗಲಿದೆ. ಇದರಿಂದಾಗಿ ದೇಶದಾದ್ಯಂತ ಮನೆಗಳಿಗೆ ಎಲ್ಪಿಜಿ ಸಿಲಿಂಡರ್ಗಳ ನಿರಂತರ ಪೂರೈಕೆ ಖಚಿತಪಡಿಸಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು. </p>.<p><strong>ಉಜ್ವಲ ಯೋಜನೆಗೆ ₹12,000 ಕೋಟಿ</strong></p>.<p>2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ₹12,000 ಕೋಟಿ ಸಬ್ಸಿಡಿ ನೀಡಲು ಸಂಪುಟ ಅನುಮೋದಿಸಿದೆ.</p>.<p>ದೇಶದಾದ್ಯಂತ ಬಡ ಕುಟುಂಬಗಳ ವಯಸ್ಕ ಮಹಿಳೆಯರಿಗೆ ಉಚಿತ ಏಲ್ಪಿಜಿ ಸಂಪರ್ಕ ಒದಗಿಸಲು ಈ ಯೋಜನೆಯನ್ನು 2016ರ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿತ್ತು. ಈ ಯೋಜನೆಯಡಿ ದೇಶದಲ್ಲಿ 10.33 ಕೋಟಿ ಸಂಪರ್ಕಗಳಿವೆ.</p>.<p>ಈ ಯೋಜನೆಯ ಫಲಾನುಭವಿಗಳಿಗೆ 14.2 ಕೆಜಿ ಸಿಲಿಂಡರ್ಗೆ ವರ್ಷಕ್ಕೆ 9 ಪುನರ್ ಭರ್ತಿಗೊಳಿಸುವಿಕೆ (ಮತ್ತು 5 ಕೆ.ಜಿ ಸಿಲಿಂಡರ್ಗೆ ಅನುಗುಣವಾದ ಅನುಪಾತದಲ್ಲಿ) ₹300 ಸಬ್ಸಿಡಿ ನೀಡುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ವೈಷ್ಣವ್ ತಿಳಿಸಿದರು. </p>.<p>ಭಾರತವು ತನ್ನ ಎಲ್ಪಿಜಿಯ ಅಗತ್ಯದ ಸುಮಾರು 60 ಪ್ರತಿಶತವನ್ನು ಆಮದು ಮಾಡಿಕೊಳ್ಳುತ್ತದೆ.</p>.<p><strong>ತಾಂತ್ರಿಕ ಸಂಸ್ಥೆಗಳ ಸುಧಾರಣೆಗೆ ಅನುದಾನ</strong></p>.<p>175 ಎಂಜಿನಿಯರಿಂಗ್ ಸಂಸ್ಥೆಗಳು ಮತ್ತು 100 ಪಾಲಿಟೆಕ್ನಿಕ್ಗಳನ್ನು ಒಳಗೊಂಡಿರುವ 275 ತಾಂತ್ರಿಕ ಸಂಸ್ಥೆಗಳಲ್ಲಿ ಬಹುಶಿಸ್ತೀಯ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಸಂಶೋಧನಾ ಸುಧಾರಣೆ ಯೋಜನೆ ಅನುಷ್ಠಾನಗೊಳಿಸುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ಕೊಟ್ಟಿದೆ. </p>.<p>ಈ ಯೋಜನೆಗೆ 2025-26 ರಿಂದ 2029-30ರವರೆಗೆ ₹4,200 ಕೋಟಿ ವೆಚ್ಚ ಮಾಡಲಾಗುತ್ತದೆ. ಇದರಲ್ಲಿ ₹2,100 ಕೋಟಿಯನ್ನು ವಿಶ್ವ ಬ್ಯಾಂಕ್ನಿಂದ ಸಾಲ ಪಡೆಯಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಿಯಂತ್ರಿತ ಬೆಲೆಯಲ್ಲಿ ಮನೆಗಳಿಗೆ ಅಡುಗೆ ಅನಿಲ ಸಿಲಿಂಡರ್ಗಳನ್ನು ಪೂರೈಸಿದ್ದಕ್ಕಾಗಿ ಸರ್ಕಾರಿ ಸ್ವಾಮ್ಯದ ಮೂರು ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂಗೆ ಪರಿಹಾರವಾಗಿ ₹30,000 ಕೋಟಿ ನೀಡುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ.</p>.<p>ಪ್ರಸ್ತುತ ಭೌಗೋಳಿಕ ರಾಜಕೀಯ ಸನ್ನಿವೇಶಗಳು, ತೈಲ ಮತ್ತು ಅನಿಲ ವಲಯದಲ್ಲಿನ ಅನಿಶ್ಚಿತತೆ ಗಮನದಲ್ಲಿಟ್ಟುಕೊಂಡು ಈ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಾರ್ತಾ ಹಾಗೂ ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗಾರರಿಗೆ ತಿಳಿಸಿದರು. ರಷ್ಯಾದಿಂದ ಕಚ್ಚಾ ತೈಲ ಖರೀದಿ ನಿಲ್ಲಿಸುವಂತೆ ಅಮೆರಿಕ ಒತ್ತಡ ಹೇರುತ್ತಿರುವುದರಿಂದ ಭಾರತದಲ್ಲಿ ಇಂಧನ ಬೆಲೆಗಳು ಹೆಚ್ಚಳವಾಗುವ ನಿರೀಕ್ಷೆ ಇದೆ. </p>.<p>ಕಳೆದ 15 ತಿಂಗಳುಗಳಲ್ಲಿ ಕಡಿಮೆ ಬೆಲೆಗೆ ಎಲ್ಪಿಜಿ ಮಾರಾಟ ಮಾಡಿರುವುದರಿಂದ ಉಂಟಾದ ನಷ್ಟ ಸರಿದೂಗಿಸಲು ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳಿಗೆ 12 ಕಂತುಗಳಲ್ಲಿ ಈ ಮೊತ್ತ ಪಾವತಿಸಲಾಗುವುದು.</p>.<p>2024-25ರಲ್ಲಿ ಎಲ್ಪಿಜಿಯ ಅಂತರರಾಷ್ಟ್ರೀಯ ಬೆಲೆ ಗರಿಷ್ಠ ಮಟ್ಟದಲ್ಲಿದ್ದವು. ಆದಾಗ್ಯೂ, ದೇಶದಲ್ಲಿ ಎಲ್ಪಿಜಿ ಬೆಲೆ ಹೆಚ್ಚಳವಾಗದಂತೆ ನೋಡಿಕೊಳ್ಳಲಾಗಿತ್ತು. ಇದರಿಂದಾಗಿ, ಮೂರು ಕಂಪನಿಗಳು ಗಮನಾರ್ಹ ನಷ್ಟ ಅನುಭವಿಸಿದ್ದವು. ಈ ಸಬ್ಸಿಡಿಯಿಂದಾಗಿ ಕಚ್ಚಾ ತೈಲ ಮತ್ತು ಎಲ್ಪಿಜಿ ಖರೀದಿ, ಸಾಲ ಮರುಪಾವತಿ ಮತ್ತು ಬಂಡವಾಳ ವೆಚ್ಚದಂತಹ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಕಂಪನಿಗಳಿಗೆ ಅನುಕೂಲವಾಗಲಿದೆ. ಇದರಿಂದಾಗಿ ದೇಶದಾದ್ಯಂತ ಮನೆಗಳಿಗೆ ಎಲ್ಪಿಜಿ ಸಿಲಿಂಡರ್ಗಳ ನಿರಂತರ ಪೂರೈಕೆ ಖಚಿತಪಡಿಸಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು. </p>.<p><strong>ಉಜ್ವಲ ಯೋಜನೆಗೆ ₹12,000 ಕೋಟಿ</strong></p>.<p>2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ₹12,000 ಕೋಟಿ ಸಬ್ಸಿಡಿ ನೀಡಲು ಸಂಪುಟ ಅನುಮೋದಿಸಿದೆ.</p>.<p>ದೇಶದಾದ್ಯಂತ ಬಡ ಕುಟುಂಬಗಳ ವಯಸ್ಕ ಮಹಿಳೆಯರಿಗೆ ಉಚಿತ ಏಲ್ಪಿಜಿ ಸಂಪರ್ಕ ಒದಗಿಸಲು ಈ ಯೋಜನೆಯನ್ನು 2016ರ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿತ್ತು. ಈ ಯೋಜನೆಯಡಿ ದೇಶದಲ್ಲಿ 10.33 ಕೋಟಿ ಸಂಪರ್ಕಗಳಿವೆ.</p>.<p>ಈ ಯೋಜನೆಯ ಫಲಾನುಭವಿಗಳಿಗೆ 14.2 ಕೆಜಿ ಸಿಲಿಂಡರ್ಗೆ ವರ್ಷಕ್ಕೆ 9 ಪುನರ್ ಭರ್ತಿಗೊಳಿಸುವಿಕೆ (ಮತ್ತು 5 ಕೆ.ಜಿ ಸಿಲಿಂಡರ್ಗೆ ಅನುಗುಣವಾದ ಅನುಪಾತದಲ್ಲಿ) ₹300 ಸಬ್ಸಿಡಿ ನೀಡುವ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ವೈಷ್ಣವ್ ತಿಳಿಸಿದರು. </p>.<p>ಭಾರತವು ತನ್ನ ಎಲ್ಪಿಜಿಯ ಅಗತ್ಯದ ಸುಮಾರು 60 ಪ್ರತಿಶತವನ್ನು ಆಮದು ಮಾಡಿಕೊಳ್ಳುತ್ತದೆ.</p>.<p><strong>ತಾಂತ್ರಿಕ ಸಂಸ್ಥೆಗಳ ಸುಧಾರಣೆಗೆ ಅನುದಾನ</strong></p>.<p>175 ಎಂಜಿನಿಯರಿಂಗ್ ಸಂಸ್ಥೆಗಳು ಮತ್ತು 100 ಪಾಲಿಟೆಕ್ನಿಕ್ಗಳನ್ನು ಒಳಗೊಂಡಿರುವ 275 ತಾಂತ್ರಿಕ ಸಂಸ್ಥೆಗಳಲ್ಲಿ ಬಹುಶಿಸ್ತೀಯ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಸಂಶೋಧನಾ ಸುಧಾರಣೆ ಯೋಜನೆ ಅನುಷ್ಠಾನಗೊಳಿಸುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ಕೊಟ್ಟಿದೆ. </p>.<p>ಈ ಯೋಜನೆಗೆ 2025-26 ರಿಂದ 2029-30ರವರೆಗೆ ₹4,200 ಕೋಟಿ ವೆಚ್ಚ ಮಾಡಲಾಗುತ್ತದೆ. ಇದರಲ್ಲಿ ₹2,100 ಕೋಟಿಯನ್ನು ವಿಶ್ವ ಬ್ಯಾಂಕ್ನಿಂದ ಸಾಲ ಪಡೆಯಲಾಗುತ್ತದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>