<p><strong>ಸಿಲ್ಚಾರ್ (ಅಸ್ಸಾಂ)</strong>: ಅಸ್ಸಾಂನಲ್ಲಿ ಎಪ್ರಿಲ್ 26 ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿರುವ ಕಾರಣ ಅಕ್ರಮ ಒಳನುಸುಳುವಿಕೆ, ಜಾನುವಾರು ಕಳ್ಳಸಾಗಣೆ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಕಛಾರ್ ಜಿಲ್ಲಾ ಆಡಳಿತವು ಬಾಂಗ್ಲಾದೇಶದೊಂದಿಗಿನ 33.6 ಕಿಮೀ ಗಡಿಯಲ್ಲಿ ನಿಷೇಧ ವಿಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಇಂಡೋ-ಬಾಂಗ್ಲಾದೇಶದ ಗಡಿಯ ಒಂದು ಕಿ.ಮೀ ಪ್ರದೇಶದಲ್ಲಿ ರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಆದೇಶವು ತಕ್ಷಣವೇ ಜಾರಿಗೆ ಬರಲಿದ್ದು ಮುಂದಿನ ಎರಡು ತಿಂಗಳವರೆಗೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಸುರ್ಮಾ ನದಿಯಲ್ಲೂ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳುವಂತಿಲ್ಲ, ಮೀನುಗಾರಿಕೆ ನಡೆಸಲು ಅನುಮತಿ ಪಡೆಯಬೇಕು. ಇದಲ್ಲದೇ, ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳು ಅಂತರರಾಷ್ಟ್ರೀಯ ಗಡಿಯ ಐದು ಕಿ.ಮೀ ಒಳಗೆ ಕಟಿಗೋರಾ ಪೊಲೀಸ್ ಅಧಿಕಾರಿ ನೀಡಿದ ಪರವಾನಗಿಯೊಂದಿಗೆ ಮಾತ್ರ ಚಲಿಸಲು ಅನುಮತಿಸಲಾಗುತ್ತದೆ. ಈ ನಿರ್ಬಂಧಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಲ್ಚಾರ್ (ಅಸ್ಸಾಂ)</strong>: ಅಸ್ಸಾಂನಲ್ಲಿ ಎಪ್ರಿಲ್ 26 ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿರುವ ಕಾರಣ ಅಕ್ರಮ ಒಳನುಸುಳುವಿಕೆ, ಜಾನುವಾರು ಕಳ್ಳಸಾಗಣೆ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಕಛಾರ್ ಜಿಲ್ಲಾ ಆಡಳಿತವು ಬಾಂಗ್ಲಾದೇಶದೊಂದಿಗಿನ 33.6 ಕಿಮೀ ಗಡಿಯಲ್ಲಿ ನಿಷೇಧ ವಿಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಇಂಡೋ-ಬಾಂಗ್ಲಾದೇಶದ ಗಡಿಯ ಒಂದು ಕಿ.ಮೀ ಪ್ರದೇಶದಲ್ಲಿ ರಾತ್ರಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಆದೇಶವು ತಕ್ಷಣವೇ ಜಾರಿಗೆ ಬರಲಿದ್ದು ಮುಂದಿನ ಎರಡು ತಿಂಗಳವರೆಗೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಸುರ್ಮಾ ನದಿಯಲ್ಲೂ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳುವಂತಿಲ್ಲ, ಮೀನುಗಾರಿಕೆ ನಡೆಸಲು ಅನುಮತಿ ಪಡೆಯಬೇಕು. ಇದಲ್ಲದೇ, ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳು ಅಂತರರಾಷ್ಟ್ರೀಯ ಗಡಿಯ ಐದು ಕಿ.ಮೀ ಒಳಗೆ ಕಟಿಗೋರಾ ಪೊಲೀಸ್ ಅಧಿಕಾರಿ ನೀಡಿದ ಪರವಾನಗಿಯೊಂದಿಗೆ ಮಾತ್ರ ಚಲಿಸಲು ಅನುಮತಿಸಲಾಗುತ್ತದೆ. ಈ ನಿರ್ಬಂಧಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>