<p><strong>ತಿರುವಂತನಂತಪುರ(ಕೇರಳ)</strong>: ತೆಲಂಗಾಣ ಸುರಂಗ ಕುಸಿತ ಕಾರ್ಯಾಚರಣೆಯಲ್ಲಿ ಕೇರಳದ ಕೆಡಾವರ್ ನಾಯಿಗಳು ಪಾಲ್ಗೊಳ್ಳಲಿವೆ ಎಂದು ಕೇರಳ ಸರ್ಕಾರ ಗುರುವಾರ ತಿಳಿಸಿದೆ.</p><p>ನಾಪತ್ತೆಯಾದವರು ಹಾಗೂ ಮನುಷ್ಯರ ಶವಗಳನ್ನು ಪತ್ತೆಹಚ್ಚಲು ವಿಶೇಷವಾಗಿ ತರಬೇತಿ ಪಡೆದ ನಾಯಿಗಳಿವು.</p><p>ಕೆಡಾವರ್ ನಾಯಿಗಳು ಮತ್ತು ಅವುಗಳನ್ನು ನಿಭಾಯಿಸುವ ಅಧಿಕಾರಿಗಳು ಗುರುವಾರ ಬೆಳಗ್ಗೆ ಹೈದರಾಬಾದ್ಗೆ ತೆರಳಿದ್ದಾರೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p><p>ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮನವಿಯ ಮೇರೆಗೆ ರಕ್ಷಣಾ ಕಾರ್ಯಾಚರಣೆಗೆ ನಾಯಿಗಳನ್ನು ಕಳುಹಿಸಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ವಿಷಯದಲ್ಲಿ ಸಹಾಯವನ್ನು ಕೋರಿದೆ ಎಂದು ಅದು ತಿಳಿಸಿದೆ.</p><p>ಫೆಬ್ರುವರಿ 22ರಂದು ಶ್ರೀಶೈಲಂ ಎಡೆ ದಂಡೆ ಕಾಲುವೆ ಕಾಮಗಾರಿ ನಡೆಯುತ್ತಿರುವ ವೇಳೆ ಸಂಭವಿಸಿದ ಅವಘಡದಲ್ಲಿ 8 ಕಾರ್ಮಿಕರು ಅಪಾಯದಲ್ಲಿ ಸಿಲುಕಿಕೊಂಡಿದ್ದರು. ಈವೆರೆಗೂ ಅವರನ್ನು ಪತ್ತೆ ಮಾಡಿ ಹೊರಗೆ ತರಲು ಸಾಧ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವಂತನಂತಪುರ(ಕೇರಳ)</strong>: ತೆಲಂಗಾಣ ಸುರಂಗ ಕುಸಿತ ಕಾರ್ಯಾಚರಣೆಯಲ್ಲಿ ಕೇರಳದ ಕೆಡಾವರ್ ನಾಯಿಗಳು ಪಾಲ್ಗೊಳ್ಳಲಿವೆ ಎಂದು ಕೇರಳ ಸರ್ಕಾರ ಗುರುವಾರ ತಿಳಿಸಿದೆ.</p><p>ನಾಪತ್ತೆಯಾದವರು ಹಾಗೂ ಮನುಷ್ಯರ ಶವಗಳನ್ನು ಪತ್ತೆಹಚ್ಚಲು ವಿಶೇಷವಾಗಿ ತರಬೇತಿ ಪಡೆದ ನಾಯಿಗಳಿವು.</p><p>ಕೆಡಾವರ್ ನಾಯಿಗಳು ಮತ್ತು ಅವುಗಳನ್ನು ನಿಭಾಯಿಸುವ ಅಧಿಕಾರಿಗಳು ಗುರುವಾರ ಬೆಳಗ್ಗೆ ಹೈದರಾಬಾದ್ಗೆ ತೆರಳಿದ್ದಾರೆ ಎಂದು ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.</p><p>ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮನವಿಯ ಮೇರೆಗೆ ರಕ್ಷಣಾ ಕಾರ್ಯಾಚರಣೆಗೆ ನಾಯಿಗಳನ್ನು ಕಳುಹಿಸಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ವಿಷಯದಲ್ಲಿ ಸಹಾಯವನ್ನು ಕೋರಿದೆ ಎಂದು ಅದು ತಿಳಿಸಿದೆ.</p><p>ಫೆಬ್ರುವರಿ 22ರಂದು ಶ್ರೀಶೈಲಂ ಎಡೆ ದಂಡೆ ಕಾಲುವೆ ಕಾಮಗಾರಿ ನಡೆಯುತ್ತಿರುವ ವೇಳೆ ಸಂಭವಿಸಿದ ಅವಘಡದಲ್ಲಿ 8 ಕಾರ್ಮಿಕರು ಅಪಾಯದಲ್ಲಿ ಸಿಲುಕಿಕೊಂಡಿದ್ದರು. ಈವೆರೆಗೂ ಅವರನ್ನು ಪತ್ತೆ ಮಾಡಿ ಹೊರಗೆ ತರಲು ಸಾಧ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>