ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಜ್ವಲ ಎಲ್‌ಪಿಜಿ ಸಿಲಿಂಡರ್: ತನಿಖೆಗೆ ಸಿಎಜಿ ಸಲಹೆ

Last Updated 11 ಡಿಸೆಂಬರ್ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ‘ಪ್ರಧಾನಮಂತ್ರಿ ಉಜ್ವಲ ಯೋಜನೆ’ಯಡಿಬಿಪಿಎಲ್ ಕುಟುಂಬಗಳಿಗೆ ಸಬ್ಸಿಡಿ ದರದ ಅಡುಗೆ ಅನಿಲ ಸಿಲಿಂಡರ್ ವಿತರಣೆಯಲ್ಲಿ ದೋಷ ಕಂಡುಬಂದಿದೆ ಎಂದು ಮಹಾಲೇಖಪಾಲರ ವರದಿ (ಸಿಎಜಿ) ತಿಳಿಸಿದೆ.2016-2018ರ ಅವಧಿಯಲ್ಲಿ 2.61 ಲಕ್ಷ ಫಲಾನುಭವಿಯಗಳು ಒಂದೇ ದಿನದಲ್ಲಿ 2ರಿಂದ 20 ಸಿಲಿಂಡರ್‌ಗಳನ್ನು ಖರೀದಿಸಿದ ನಿದರ್ಶನ ಕಂಡುಬಂದಿವೆ.

ಬುಧವಾರ ಸಂಸತ್ತಿನಲ್ಲಿ ಮಂಡನೆಯಾದ ಸಿಎಜಿ ವರದಿಯಲ್ಲಿ ಈ ಅಂಶಗಳು ಉಲ್ಲೇಖವಾಗಿವೆ. ವಾಣಿಜ್ಯ ಉದ್ದೇಶಕ್ಕೆ ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್‌ಗಳು ಬಳಕೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ತನಿಖೆಗೆ ಮುಂದಾಗಬೇಕು ಎಂದು ವರದಿ ಅಭಿಪ್ರಾಯಪಟ್ಟಿದೆ.

‘1,300 ಫಲಾನುಭವಿಗಳು ದಿನಕ್ಕೆ 12 ಸಿಲಿಂಡರ್ ಖರೀದಿಸಿದ ಉದಾಹರಣೆ ಇದೆ. ಒಂದು ಬಾರಿ ಒಂದೇ ಸಿಲಿಂಡರ್ ವಿತರಿಸುವ ವ್ಯಸಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಸರ್ಕಾರಿ ಸ್ವಾಮ್ಯದ ಐಒಸಿಎಲ್ ಹಾಗೂ ಎಚ್‌ಪಿಸಿಎಲ್‌ಕಂಪನಿಗಳು ಸೋತಿವೆ’ ಎಂದು ವರದಿ ಅಭಿಪ್ರಾಯಪಟ್ಟಿದೆ.

ಯೋಜನೆಯಡಿ ಒಂದು ವರ್ಷ ಪೂರೈಸಿರುವ ಗ್ರಾಹಕರ ಪೈಕಿ ಶೇ 17.61ರಷ್ಟು ಮಂದಿ ಎರಡನೇ ಸಿಲಿಂಡರ್ ಪಡೆದಿಲ್ಲ. ಶೇ 33ರಷ್ಟು ಫಲಾನುಭವಿಗಳು ಎರಡೂವರೆ ವರ್ಷಗಳಲ್ಲಿ 1ರಿಂದ 3 ಸಿಲಿಂಡರ್‌ ಮಾತ್ರ ಬಳಕೆ ಮಾಡಿದ್ದಾರೆ. 5 ಕೆ.ಜಿ ತೂಕದ ಸಿಲಿಂಡರ್ ವಿತರಣೆಯೂ ಅಸಮರ್ಪಕವಾಗಿದೆ. 225 ಎಲ್‌ಪಿಜಿ ಸಂಪರ್ಕಗಳು ಅಪ್ರಾಪ್ತ ವಯಸ್ಸಿನವರ ಪಾಲಾಗಿವೆ ಎಂದು ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT