<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಬುಧವಾರ ಆದೇಶಿಸಿದೆ.</p>.<p>ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ. ಕೃಷಿ ಭೂಮಿಯನ್ನು ಮತ್ಸ್ಯ ಕೃಷಿಗಾಗಿ ಜಲಮೂಲವಾಗಿ ಅಕ್ರಮವಾಗಿ ಬದಲಾಯಿಸಿದ ಆರೋಪದ ಬಗ್ಗೆಯೂ ಸಮಗ್ರ ವರದಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಗನಂ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಿರ್ದೇಶನ ನೀಡಿತು.</p>.<p>ಪ್ರಕರಣದ ಬಗ್ಗೆ ಸಿಬಿಐನಿಂದ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಕೋರ್ಟ್ ಹೇಳಿತು.</p>.<p>ಪ್ರಕರಣದ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿ, ಅಂದು ಸಿಬಿಐ ಸಮಗ್ರ ವರದಿ ಸಲ್ಲಿಸಬೇಕು ಎಂದು ತಿಳಿಸಿತು. </p>.<p>ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರಿಗೆ ಸಂಬಂಧಿಸಿದ ಪ್ರದೇಶಗಳ ಮೇಲೆ ಜನವರಿ 5ರಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಗುಂಪೊಂದು ಅಧಿಕಾರಿಗಳ ಮೇಲೆ ಆಕ್ರಮಣ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಸಂದೇಶ್ಖಾಲಿಯಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಬುಧವಾರ ಆದೇಶಿಸಿದೆ.</p>.<p>ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿದೆ. ಕೃಷಿ ಭೂಮಿಯನ್ನು ಮತ್ಸ್ಯ ಕೃಷಿಗಾಗಿ ಜಲಮೂಲವಾಗಿ ಅಕ್ರಮವಾಗಿ ಬದಲಾಯಿಸಿದ ಆರೋಪದ ಬಗ್ಗೆಯೂ ಸಮಗ್ರ ವರದಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಗನಂ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಿರ್ದೇಶನ ನೀಡಿತು.</p>.<p>ಪ್ರಕರಣದ ಬಗ್ಗೆ ಸಿಬಿಐನಿಂದ ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಕೋರ್ಟ್ ಹೇಳಿತು.</p>.<p>ಪ್ರಕರಣದ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿ, ಅಂದು ಸಿಬಿಐ ಸಮಗ್ರ ವರದಿ ಸಲ್ಲಿಸಬೇಕು ಎಂದು ತಿಳಿಸಿತು. </p>.<p>ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರಿಗೆ ಸಂಬಂಧಿಸಿದ ಪ್ರದೇಶಗಳ ಮೇಲೆ ಜನವರಿ 5ರಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಗುಂಪೊಂದು ಅಧಿಕಾರಿಗಳ ಮೇಲೆ ಆಕ್ರಮಣ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>