ನಾನು ಈಗ ರಾಜಕೀಯದಿಂದ ದೂರ ಸರಿದಿದ್ದೇನೆ.ನಾನು ಎಲ್ಲ ಪಕ್ಷದವರೊಂದಿಗೆ ಇದ್ದೇನೆ ಆದರೆ ನಾನು ಯಾವ ಪಕ್ಷದೊಂದಿಗೂ ಇಲ್ಲ ಎಂದು ಎನ್ಡಿಟಿವಿ ಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರುಹೇಳಿದ್ದಾರೆ.
ಯಾವುದೇ ಕಾರಣ, ವಿವರಣೆ ನೀಡದೆಯೇ ಪ್ರಧಾನಿ ಮೋದಿಯವರನ್ನು ಟೀಕಿಸುವುದು ನಮ್ಮ ಹಕ್ಕು ಎಂದು ಹೇಳಿದ ಬಾಬಾ, ಮರುಗಳಿಗೆಯಲ್ಲಿಯೇ ಪ್ರಧಾನಿ ಮೋದಿ ಉತ್ತಮ ಕೆಲಸ ಮಾಡಿದ್ದಾರೆ.ಸ್ವಚ್ಛ ಭಾರತ ಅಭಿಯಾನವನ್ನು ಮಾಡಿದ್ದಾರೆ. ಯಾವುದೇ ದೊಡ್ಡ ಹಗರಣಗಳನ್ನು ಮಾಡಲು ಬಿಡಲಿಲ್ಲ ಎಂದಿದ್ದಾರೆ.
ಸರ್ಕಾರ ಇಂಧನಕ್ಕೂ ಜಿಎಸ್ಟಿ ಅನ್ವಯ ಮಾಡಬೇಕು. ಆದರೆ ತೆರಿಗೆ ಶೇ.28ಕ್ಕಿಂತ ಹೆಚ್ಚಿರಬಾರದು.ಆದಾಯದಲ್ಲಿನ ನಷ್ಟ ದೇಶದ ಪ್ರಗತಿಯನ್ನು ಬಾಧಿಸಬಾರದು.ಶ್ರೀಮಂತರ ಮೇಲೆ ನಾವು ತೆರಿಗೆ ಹಾಕಬೇಕು ಎಂದ ಬಾಬಾ ಅವರಲ್ಲಿ
ಅದು ಹೇಗೆ ನೀವು ಪೆಟ್ರೋಲ್ ದರವನ್ನು ಕಡಿಮೆ ಮಾಡುತ್ತೀರಿ ಎಂದು ಕೇಳಿದಾಗ, ಸರ್ಕಾರ ನನಗೆ ಅವಕಾಶ ನೀಡಿದರೆ ಮತ್ತು ತೆರಿಗೆಯಲ್ಲಿ ಕಡಿತ ಮಾಡಿದರೆ ನಾನು ಪೆಟ್ರೋಲ್, ಡೀಸೆಲ್ ಲೀಟರ್ಗೆ ₹30-₹40 ಮಾಡಬಲ್ಲೆ ಎಂದಿದ್ದಾರೆ.