<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭೆಯ ಐದನೇ ಹಂತದ ಮತದಾನಕ್ಕೆ ಬುಧವಾರ ಪ್ರಚಾರ ಅಂತ್ಯಗೊಂಡಿದೆ. ಏಪ್ರಿಲ್ 17ರಂದು 45 ಕ್ಷೇತ್ರಗಳಿಗೆ ಮತದಾನ ನಿಗದಿಯಾಗಿದೆ.</p>.<p>ಸಂಜೆ 6.30ಕ್ಕೆ ಪ್ರಚಾರ ಕೊನೆಗೊಂಡಿತು. ನಾಲ್ಕನೇ ಹಂತದಲ್ಲಿ ಕೂಚ್ ಬಿಹಾರ್ ಹತ್ಯೆ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು 48 ರಿಂದ 72 ಗಂಟೆಗಳವರೆಗೆ ‘ಮೌನ ಅವಧಿ’ ಇರುತ್ತದೆ ಎಂದು ಪ್ರಕಟಿಸಿದೆ.</p>.<p>ಐದನೇ ಹಂತದಲ್ಲಿ 342 ಅಭ್ಯರ್ಥಿಗಳು ಕಣದಲ್ಲಿದ್ದು, 1.13 ಕೋಟಿ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.ಸಿಲಿಗುರಿ ಮೇಯರ್ ಮತ್ತು ಎಡಪಂಥೀಯ ನಾಯಕ ಅಶೋಕ್ ಭಟ್ಟಾಚಾರ್ಯ, ರಾಜ್ಯ ಸಚಿವ ಬ್ರಾತ್ಯ ಬಸು ಮತ್ತು ಬಿಜೆಪಿಯ ಸಮಿಕ್ ಭಟ್ಟಾಚಾರ್ಯ ಕಣದಲ್ಲಿರುವ ಪ್ರಮುಖರಾಗಿದ್ದಾರೆ.</p>.<p>ಉತ್ತರ ಪರಗಣ ಜಿಲ್ಲೆಯ 16 ಕ್ಷೇತ್ರಗಳು, ಪೂರ್ವ ವರ್ಧಮಾನ್ ಮತ್ತು ನಾದಿಯಾ ವಲಯದ ಎಂಟು ಕ್ಷೇತ್ರ, ಜಲಪೈಗುರಿಯ ಏಳು, ಡಾರ್ಜಿಲಿಂಗ್ ಮತ್ತು ಕಾಲಿಪಾಂಗ್ ಜಿಲ್ಲೆಯ ತಲಾ ಒಂದು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.</p>.<p>ಕೂಚ್ಬಿಹಾರ್ ಘಟನೆಯಿಂದಾಗಿ ಮತಗಟ್ಟೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕೇಂದ್ರೀಯ ಭದ್ರತಾ ಪಡೆಗಳ 853 ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭೆಯ ಐದನೇ ಹಂತದ ಮತದಾನಕ್ಕೆ ಬುಧವಾರ ಪ್ರಚಾರ ಅಂತ್ಯಗೊಂಡಿದೆ. ಏಪ್ರಿಲ್ 17ರಂದು 45 ಕ್ಷೇತ್ರಗಳಿಗೆ ಮತದಾನ ನಿಗದಿಯಾಗಿದೆ.</p>.<p>ಸಂಜೆ 6.30ಕ್ಕೆ ಪ್ರಚಾರ ಕೊನೆಗೊಂಡಿತು. ನಾಲ್ಕನೇ ಹಂತದಲ್ಲಿ ಕೂಚ್ ಬಿಹಾರ್ ಹತ್ಯೆ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು 48 ರಿಂದ 72 ಗಂಟೆಗಳವರೆಗೆ ‘ಮೌನ ಅವಧಿ’ ಇರುತ್ತದೆ ಎಂದು ಪ್ರಕಟಿಸಿದೆ.</p>.<p>ಐದನೇ ಹಂತದಲ್ಲಿ 342 ಅಭ್ಯರ್ಥಿಗಳು ಕಣದಲ್ಲಿದ್ದು, 1.13 ಕೋಟಿ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ.ಸಿಲಿಗುರಿ ಮೇಯರ್ ಮತ್ತು ಎಡಪಂಥೀಯ ನಾಯಕ ಅಶೋಕ್ ಭಟ್ಟಾಚಾರ್ಯ, ರಾಜ್ಯ ಸಚಿವ ಬ್ರಾತ್ಯ ಬಸು ಮತ್ತು ಬಿಜೆಪಿಯ ಸಮಿಕ್ ಭಟ್ಟಾಚಾರ್ಯ ಕಣದಲ್ಲಿರುವ ಪ್ರಮುಖರಾಗಿದ್ದಾರೆ.</p>.<p>ಉತ್ತರ ಪರಗಣ ಜಿಲ್ಲೆಯ 16 ಕ್ಷೇತ್ರಗಳು, ಪೂರ್ವ ವರ್ಧಮಾನ್ ಮತ್ತು ನಾದಿಯಾ ವಲಯದ ಎಂಟು ಕ್ಷೇತ್ರ, ಜಲಪೈಗುರಿಯ ಏಳು, ಡಾರ್ಜಿಲಿಂಗ್ ಮತ್ತು ಕಾಲಿಪಾಂಗ್ ಜಿಲ್ಲೆಯ ತಲಾ ಒಂದು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.</p>.<p>ಕೂಚ್ಬಿಹಾರ್ ಘಟನೆಯಿಂದಾಗಿ ಮತಗಟ್ಟೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕೇಂದ್ರೀಯ ಭದ್ರತಾ ಪಡೆಗಳ 853 ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>