‘ಇದಕ್ಕೆ ತದ್ವಿರುದ್ಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಂಬಿ ಆಡಳಿತರೂಢ ಸರ್ಕಾರವಾದ ಬಿಜೆಪಿ ಚುನಾವಣಾ ಕಣಕ್ಕೆ ಇಳಿಯುತ್ತಿದೆ. ಏಕೆಂದರೆ, ಇಲ್ಲಿನ (ಹಿಮಾಚಲ ಪ್ರದೇಶ) ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹಾಗೂ ಅವರ ಸರ್ಕಾರದ ವೈಫಲ್ಯತೆಯ ಬಗ್ಗೆ ಬಿಜೆಪಿಗೆ ತಿಳಿದಿದೆ’ ಎಂದರು. ‘ಮೋದಿಯವರು, ಅಭ್ಯರ್ಥಿಯನ್ನು ನೋಡಬೇಡಿ. ತಮ್ಮನ್ನು ನೋಡಿ ಮತ ಹಾಕುವಂತೆ ಹೇಳುತ್ತಿದ್ದಾರೆ. ಹಿಮಾಚಲ ಪ್ರದೇಶದ ಜನರನ್ನು ಕೀಳಾಗಿ ಕಾಣುವಂತೆಮೋದಿಯವರ ವರ್ತನೆ ಇದೆ. ಚುನಾವಣೆ ಮುಗಿದ ನಂತರ ಪ್ರಧಾನಿ ಇಲ್ಲಿರುವುದಿಲ್ಲ ಎಂದು ಈ ರಾಜ್ಯದ ಜನರಿಗೆ ಗೊತ್ತಿದೆ’ ಎಂದು ತಿಳಿಸಿದರು.