<p><strong>ಕೋಲ್ಕತ್ತ</strong>: ನ್ಯಾಯಾಂಗದ ಬಗ್ಗೆ ತಮಗೆ ಅತ್ಯಂತ ಗೌರವವಿದೆ. ಆದರೆ, ಶಾಲಾ ಶಿಕ್ಷಕರ ನೇಮಕಾತಿಗಳನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.</p><p>ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 25,753 ಶಿಕ್ಷಕರು ಮತ್ತು ಇತರೆ ಸಿಬ್ಬಂದಿ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.</p><p>ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೂ ಮಾನವೀಯ ದೃಷ್ಟಿಕೋನದಿಂದ ನಾನು ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಮಮತಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p><p>ಆದರೂ, ಎಲ್ಲ ಕಾನೂನು ಆಯ್ಕೆಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರವು ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ಬದ್ಧವಾಗಿರುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.</p><p>ನಾವು ತೀರ್ಪನ್ನು ಒಪ್ಪಿಕೊಳ್ಳಬೇಕು ಮತ್ತು ಕಾನೂನಿನ ಅನ್ವಯ ಸಾಧ್ಯವಿರುವ ಎಲ್ಲವನ್ನೂ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.</p><p>ರಾಜ್ಯದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ. </p><p>ವ್ಯಾಪಂ ಪ್ರಕರಣದಲ್ಲಿ ಎಷ್ಟು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಬಿಜೆಪಿ, ಪಶ್ಚಿಮ ಬಂಗಾಳದ ಶಿಕ್ಷಣ ವ್ಯವಸ್ಥೆಯ ಕುಸಿತವನ್ನು ಬಯಸುತ್ತದೆಯೇ ಎಂದೂ ಕೇಳಿದ್ದಾರೆ.</p><p>ಇದೇವೇಳೆ, ಉದ್ಯೋಗ ಕಳೆದುಕೊಂಡವರನ್ನು ಭೇಟಿ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾನು ಅವರಿಗೆ ಭರವಸೆ ಕಳೆದುಕೊಳ್ಳಬೇಡಿ ಎಂದು ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ.</p> .WB | 25,753 ಶಿಕ್ಷಕರ ನೇಮಕಾತಿ ವಜಾ: ಹೈಕೋರ್ಟ್ ಆದೇಶ ಎತ್ತಿ ಹಿಡಿದ 'ಸುಪ್ರೀಂ'.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ನ್ಯಾಯಾಂಗದ ಬಗ್ಗೆ ತಮಗೆ ಅತ್ಯಂತ ಗೌರವವಿದೆ. ಆದರೆ, ಶಾಲಾ ಶಿಕ್ಷಕರ ನೇಮಕಾತಿಗಳನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.</p><p>ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 25,753 ಶಿಕ್ಷಕರು ಮತ್ತು ಇತರೆ ಸಿಬ್ಬಂದಿ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.</p><p>ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೂ ಮಾನವೀಯ ದೃಷ್ಟಿಕೋನದಿಂದ ನಾನು ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಮಮತಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p><p>ಆದರೂ, ಎಲ್ಲ ಕಾನೂನು ಆಯ್ಕೆಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರವು ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ಬದ್ಧವಾಗಿರುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.</p><p>ನಾವು ತೀರ್ಪನ್ನು ಒಪ್ಪಿಕೊಳ್ಳಬೇಕು ಮತ್ತು ಕಾನೂನಿನ ಅನ್ವಯ ಸಾಧ್ಯವಿರುವ ಎಲ್ಲವನ್ನೂ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.</p><p>ರಾಜ್ಯದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ ಎಂದು ಬ್ಯಾನರ್ಜಿ ತಿಳಿಸಿದ್ದಾರೆ. </p><p>ವ್ಯಾಪಂ ಪ್ರಕರಣದಲ್ಲಿ ಎಷ್ಟು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಬಿಜೆಪಿ, ಪಶ್ಚಿಮ ಬಂಗಾಳದ ಶಿಕ್ಷಣ ವ್ಯವಸ್ಥೆಯ ಕುಸಿತವನ್ನು ಬಯಸುತ್ತದೆಯೇ ಎಂದೂ ಕೇಳಿದ್ದಾರೆ.</p><p>ಇದೇವೇಳೆ, ಉದ್ಯೋಗ ಕಳೆದುಕೊಂಡವರನ್ನು ಭೇಟಿ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾನು ಅವರಿಗೆ ಭರವಸೆ ಕಳೆದುಕೊಳ್ಳಬೇಡಿ ಎಂದು ಸಾಂತ್ವನ ಹೇಳುತ್ತೇನೆ ಎಂದಿದ್ದಾರೆ.</p> .WB | 25,753 ಶಿಕ್ಷಕರ ನೇಮಕಾತಿ ವಜಾ: ಹೈಕೋರ್ಟ್ ಆದೇಶ ಎತ್ತಿ ಹಿಡಿದ 'ಸುಪ್ರೀಂ'.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>