ಈ ಹೇಳಿಕೆಗೆ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿರುವ ಪ್ರಿಯಾಂಕಾ ಗಾಂಧಿ, 'ಇಂತಹ ನಡವಳಿಕೆಯಿಂದ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮಗೆ ಸಾಧ್ಯವಿದೆಯೇ? ಮಹಿಳಾ ಆಯೋಗದ ಸದಸ್ಯರು ಅತ್ಯಾಚಾರಕ್ಕೆ ಒಳಗಾದವರನ್ನು ದೂಷಿಸುತ್ತಿದ್ದಾರೆ. ಸಂತ್ರಸ್ತೆಯ ಮರಣೋತ್ತರ ಫಲಿತಾಂಶವನ್ನು ಯಾರು ಸೋರಿಕೆ ಮಾಡಿದ್ದಾರೆ ಎಂಬುದರ ಬಗ್ಗೆ ಬುಡಾನ್ ಆಡಳಿತವು ತಲೆಕೆಡಿಸಿಕೊಂಡಿದೆ' ಎಂದು ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿರುವ ಮತ್ತೊಂದು ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿರುವ ಪ್ರಿಯಾಂಕಾ, 'ಈ ಆಡಳಿತ ವ್ಯವಸ್ಥೆಯು ಮಹಿಳೆಯರಿಗೆ ಮಾಡಿರುವ ಅವಮಾನವನ್ನು ಎಂದಿಗೂ ಕ್ಷಮಿಸಲಾಗದು' ಎಂದು ಹೇಳಿದ್ದಾರೆ.