<p><strong>ನವದೆಹಲಿ</strong>: ಕೆನಡಾ ಮೂಲದ ಗ್ಯಾಂಗ್ಸ್ಟರ್ ಸತೀಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ನನ್ನು ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈತ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ರೂವಾರಿ ಎಂದು ಆರೋಪಿಸಲಾಗಿದೆ.</p>.<p>ಪಾಕ್ ಮೂಲದ ಏಜೆನ್ಸಿಯೊಂದರ ಬೆಂಬಲವಿದ್ದ ಈತನನ್ನು ಭಯೋತ್ಪಾದನಾ ನಿಗ್ರಹ ಕಾಯ್ದೆ ಯುಎಪಿಎ ಅನ್ವಯ ಭಯೋತ್ಪಾದಕ ಎಂದು ಘೋಷಿಸಿದ್ದು, ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ.</p>.<p>ಹಲವು ಕೊಲೆ ಕೃತ್ಯಗಳಲ್ಲೂ ಭಾಗಿಯಾಗಿದ್ದು, ಮೂಲಭೂತವಾದಿ ಚಿಂತನೆ ಹೊಂದಿದ್ದ. ರಾಷ್ಟ್ರೀಯವಾದಿ ನಾಯಕರಿಗೆ ಕರೆ ಮಾಡಿ ಒತ್ತೆಹಣಕ್ಕೆ ಬೇಡಿಕೆ ಮಂಡಿಸುತ್ತಿದ್ದ. ಅಲ್ಲದೆ, ಕೊಲೆ ಕೃತ್ಯಗಳನ್ನು ನಡೆಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿದ್ದ.</p>.<p>ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಸಂಘಟನೆಯ ಕಾರ್ಯಕರ್ತನಾಗಿದ್ದು ಉನ್ನತದರ್ಜೆಯ ಶಸ್ತ್ರಾಸ್ತ್ರಗಳು, ಸ್ಫೋಟಕಗಳನ್ನು ಡ್ರೋನ್ ಬಳಸಿ ಗಡಿಯಾಚೆಗೆ ಕಳ್ಳಸಾಗಣೆ ಮಾಡಿ ಶಾರ್ಪ್ ಶೂಟರ್ಗಳಿಗೆ ಒದಗಿಸುತ್ತಿದ್ದ ಆರೋಪಗಳು ಈತನ ಮೇಲಿವೆ.</p>.<p>ಮೂಲತಃ ಪಂಜಾಬ್ನ ಶ್ರೀ ಮುಕ್ತಸರ ಸಾಹಿಬ್ನವನಾದ ಈತ ಸದ್ಯ ಕೆನಡಾದ ಬ್ರಾಂಪ್ಟನ್ನಲ್ಲಿ ನೆಲೆಸಿದ್ದಾನೆ. ಈತ ಮತ್ತು ಈತನ ಸಹಚರರು ಪಂಜಾಬ್ನಲ್ಲಿ ಶಾಂತಿ ಸುವ್ಯವಸ್ಥೆ ಸ್ಥಿತಿಯನ್ನು ಕದಡಲು ಯತ್ನಿಸುತ್ತಿದ್ದರು ಎಂದು ಕೇಂದ್ರ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.</p>.<p>ಈತನ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಲ್ಲಿದ್ದು, ಆತನ ಪತ್ತೆಗಾಗಿ ಇಂಟರ್ಪೋಲ್, ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೆನಡಾ ಮೂಲದ ಗ್ಯಾಂಗ್ಸ್ಟರ್ ಸತೀಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ನನ್ನು ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಈತ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ರೂವಾರಿ ಎಂದು ಆರೋಪಿಸಲಾಗಿದೆ.</p>.<p>ಪಾಕ್ ಮೂಲದ ಏಜೆನ್ಸಿಯೊಂದರ ಬೆಂಬಲವಿದ್ದ ಈತನನ್ನು ಭಯೋತ್ಪಾದನಾ ನಿಗ್ರಹ ಕಾಯ್ದೆ ಯುಎಪಿಎ ಅನ್ವಯ ಭಯೋತ್ಪಾದಕ ಎಂದು ಘೋಷಿಸಿದ್ದು, ಕೇಂದ್ರ ಗೃಹ ಸಚಿವಾಲಯ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ.</p>.<p>ಹಲವು ಕೊಲೆ ಕೃತ್ಯಗಳಲ್ಲೂ ಭಾಗಿಯಾಗಿದ್ದು, ಮೂಲಭೂತವಾದಿ ಚಿಂತನೆ ಹೊಂದಿದ್ದ. ರಾಷ್ಟ್ರೀಯವಾದಿ ನಾಯಕರಿಗೆ ಕರೆ ಮಾಡಿ ಒತ್ತೆಹಣಕ್ಕೆ ಬೇಡಿಕೆ ಮಂಡಿಸುತ್ತಿದ್ದ. ಅಲ್ಲದೆ, ಕೊಲೆ ಕೃತ್ಯಗಳನ್ನು ನಡೆಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿದ್ದ.</p>.<p>ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಸಂಘಟನೆಯ ಕಾರ್ಯಕರ್ತನಾಗಿದ್ದು ಉನ್ನತದರ್ಜೆಯ ಶಸ್ತ್ರಾಸ್ತ್ರಗಳು, ಸ್ಫೋಟಕಗಳನ್ನು ಡ್ರೋನ್ ಬಳಸಿ ಗಡಿಯಾಚೆಗೆ ಕಳ್ಳಸಾಗಣೆ ಮಾಡಿ ಶಾರ್ಪ್ ಶೂಟರ್ಗಳಿಗೆ ಒದಗಿಸುತ್ತಿದ್ದ ಆರೋಪಗಳು ಈತನ ಮೇಲಿವೆ.</p>.<p>ಮೂಲತಃ ಪಂಜಾಬ್ನ ಶ್ರೀ ಮುಕ್ತಸರ ಸಾಹಿಬ್ನವನಾದ ಈತ ಸದ್ಯ ಕೆನಡಾದ ಬ್ರಾಂಪ್ಟನ್ನಲ್ಲಿ ನೆಲೆಸಿದ್ದಾನೆ. ಈತ ಮತ್ತು ಈತನ ಸಹಚರರು ಪಂಜಾಬ್ನಲ್ಲಿ ಶಾಂತಿ ಸುವ್ಯವಸ್ಥೆ ಸ್ಥಿತಿಯನ್ನು ಕದಡಲು ಯತ್ನಿಸುತ್ತಿದ್ದರು ಎಂದು ಕೇಂದ್ರ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.</p>.<p>ಈತನ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಲ್ಲಿದ್ದು, ಆತನ ಪತ್ತೆಗಾಗಿ ಇಂಟರ್ಪೋಲ್, ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>