‘ಹೀಗಾಗಿ, ಈ ವಿಚಾರವಾಗಿ ಎಲ್ಲ ಆಯಾಮಗಳನ್ನು ಅರಿಯುವ ಮೊದಲೇ ಒಂದು ತೀರ್ಮಾನಕ್ಕೆ ಬರುವ ಕೆಲಸ ಆಗುತ್ತಿದೆ ಎಂದು ನಾವು ಹೇಳುತ್ತಿದ್ದೇವೆ’ ಎಂದು ಅವರು ವಾರದ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಮೂವರು ಭಾರತೀಯರ ಮೇಲೆ ಕೆನಡಾದ ಅಧಿಕಾರಿಗಳು ನಿಜ್ಜರ್ ಹತ್ಯೆಯ ಆರೋಪ ಹೊರಿಸಿದ್ದಾರೆ. ಈ ಮೂವರು ವಿದ್ಯಾರ್ಥಿ ವೀಸಾ ಪಡೆದು ಕೆನಡಾ ಪ್ರವೇಶಿಸಿದ್ದರು ಎಂದು ವರದಿಯಾಗಿದೆ.