<p><strong>ನವದೆಹಲಿ</strong>: ರಾಷ್ಟ್ರಪತಿಯವರು ತೀರ್ಮಾನ ಕೈಗೊಳ್ಳುವುದಕ್ಕೆ ನ್ಯಾಯಾಂಗವು ಕಾಲಮಿತಿ ವಿಧಿಸಿರುವುದಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಸಂಸತ್ತಿಗೂ ಮಿಗಿಲಾಗಿರುವ ವರ್ತಿನೆ’ಯನ್ನು ಪ್ರಶ್ನಿಸಿರುವ ಅವರು, ಪ್ರಜಾತಾಂತ್ರಿಕ ಶಕ್ತಿಗಳನ್ನು ಗುರಿಯಾಗಿಸಿಕೊಂಡು ಸುಪ್ರೀಂ ಕೋರ್ಟ್ ‘ಅಣ್ವಸ್ತ್ರ ಕ್ಷಿಪಣಿ’ ಪ್ರಯೋಗಿಸುವಂತಿಲ್ಲ’ ಎಂದಿದ್ದಾರೆ.</p>.<p>ರಾಜ್ಯಸಭೆಯ ತರಬೇತಿನಿರತರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ರಾಷ್ಟ್ರಪತಿಯವರ ಪರಿಶೀಲನೆಗೆ ಕಳುಹಿಸುವ ಮಸೂದೆಗಳ ವಿಚಾರವಾಗಿ ಮೂರು ತಿಂಗಳಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಕೆಲವೇ ದಿನಗಳಲ್ಲಿ ಈ ಮಾತು ಬಂದಿದೆ.</p>.<p>‘ಕಾನೂನು ರೂಪಿಸುವ, ಕಾರ್ಯಾಂಗದ ಕೆಲಸಗಳನ್ನು ಮಾಡುವ, ಸಂಸತ್ತಿಗಿಂತ ಮಿಗಿಲಾಗಿ ವರ್ತಿಸುವ ಮತ್ತು ಯಾವ ಉತ್ತರದಾಯಿತ್ವವೂ ಇರದ ನ್ಯಾಯಮೂರ್ತಿಗಳನ್ನು ನಾವು ಹೊಂದಿದ್ದೇವೆ. ಏಕೆಂದರೆ ದೇಶದ ಕಾನೂನು ಅವರಿಗೆ ಅನ್ವಯವಾಗುವುದಿಲ್ಲ’ ಎಂದು ಧನಕರ್ ಹೇಳಿದ್ದಾರೆ.</p>.<p>ಸುಪ್ರೀಂ ಕೋರ್ಟ್ಗೆ ವಿಶೇಷ ಅಧಿಕಾರ ಒದಗಿಸುವ ಸಂವಿಧಾನದ 142ನೆಯ ವಿಧಿಯನ್ನು ಧನಕರ್ ಅವರು, ‘ನ್ಯಾಯಾಂಗಕ್ಕೆ ಪ್ರಜಾತಾಂತ್ರಿಕ ಶಕ್ತಿಗಳ ವಿರುದ್ಧ ಪ್ರಯೋಗಿಸಲು ಸದಾ ಸಿಗುವ ಅಣ್ವಸ್ತ್ರ ಕ್ಷಿಪಣಿ’ ಎಂದು ವ್ಯಾಖ್ಯಾನಿಸಿದ್ದಾರೆ.</p>.<p>ತನ್ನೆದುರು ಬಂದ ಯಾವುದೇ ಪ್ರಕರಣದಲ್ಲಿ ‘ಪರಿಪೂರ್ಣ ನ್ಯಾಯವನ್ನು ನೀಡಲು’ ಆದೇಶ ಹೊರಡಿಸುವ ಅಧಿಕಾರವನ್ನು ಈ ವಿಧಿಯು ಸುಪ್ರೀಂ ಕೋರ್ಟ್ಗೆ ನೀಡುತ್ತದೆ.</p>.<p>‘ಈಚಿನ ತೀರ್ಪೊಂದರಲ್ಲಿ ರಾಷ್ಟ್ರಪತಿಯವರಿಗೆ ಒಂದು ನಿರ್ದೇಶನ ಇದೆ. ನಾವು ಎತ್ತ ಸಾಗುತ್ತಿದ್ದೇವೆ? ದೇಶದಲ್ಲಿ ಏನಾಗುತ್ತಿದೆ? ನಾವು ಬಹಳ ಸೂಕ್ಷ್ಮವಾಗಿ ಇರಬೇಕು. ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೋ ಬೇಡವೋ ಎಂಬ ಪ್ರಶ್ನೆ ಇದಲ್ಲ. ಈ ಬಗೆಯ ಪ್ರಜಾತಂತ್ರವನ್ನು ನಾವು ಯಾವತ್ತೂ ಬಯಸಿರಲಿಲ್ಲ...’ ಎಂದು ಧನಕರ್ ಹೇಳಿದ್ದಾರೆ.</p>.<p>‘ರಾಷ್ಟ್ರಪತಿಯವರ ಸ್ಥಾನವು ಬಹಳ ಉನ್ನತವಾದುದು. ರಾಷ್ಟ್ರಪತಿಯವರು ಸಂವಿಧಾನವನ್ನು ರಕ್ಷಿಸಲು ಪ್ರತಿಜ್ಞೆ ಸ್ವೀಕರಿಸಿರುತ್ತಾರೆ. ಸಚಿವರು, ಉಪ ರಾಷ್ಟ್ರಪತಿ, ಸಂಸದರು ಮತ್ತು ನ್ಯಾಯಮೂರ್ತಿಗಳು ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳುವ ಪ್ರತಿಜ್ಞೆ ಸ್ವೀಕರಿಸಿರುತ್ತಾರೆ’ ಎಂದಿದ್ದಾರೆ.</p>.<p>ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಅಧಿಕಾರ ವ್ಯಾಪ್ತಿಯನ್ನು ಪ್ರತ್ಯೇಕಿಸುವ ತತ್ವದ ಬಗ್ಗೆಯೂ ಉಲ್ಲೇಖಿಸಿರುವ ಧನಕರ್, ‘ಸಂಸತ್ತಿನಲ್ಲಿ ನೀವು ಪ್ರಶ್ನಿಸಬಹುದು... ಆದರೆ ನ್ಯಾಯಾಂಗವು ಕಾರ್ಯಾಂಗದ ಆಡಳಿತ ನಡೆಸಿದರೆ ನೀವು ಪ್ರಶ್ನೆ ಹೇಗೆ ಕೇಳುತ್ತೀರಿ? ಚುನಾವಣೆಗಳಲ್ಲಿ ಯಾರನ್ನು ಹೊಣೆ ಮಾಡುವಿರಿ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರಪತಿಯವರು ತೀರ್ಮಾನ ಕೈಗೊಳ್ಳುವುದಕ್ಕೆ ನ್ಯಾಯಾಂಗವು ಕಾಲಮಿತಿ ವಿಧಿಸಿರುವುದಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಸಂಸತ್ತಿಗೂ ಮಿಗಿಲಾಗಿರುವ ವರ್ತಿನೆ’ಯನ್ನು ಪ್ರಶ್ನಿಸಿರುವ ಅವರು, ಪ್ರಜಾತಾಂತ್ರಿಕ ಶಕ್ತಿಗಳನ್ನು ಗುರಿಯಾಗಿಸಿಕೊಂಡು ಸುಪ್ರೀಂ ಕೋರ್ಟ್ ‘ಅಣ್ವಸ್ತ್ರ ಕ್ಷಿಪಣಿ’ ಪ್ರಯೋಗಿಸುವಂತಿಲ್ಲ’ ಎಂದಿದ್ದಾರೆ.</p>.<p>ರಾಜ್ಯಸಭೆಯ ತರಬೇತಿನಿರತರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ರಾಷ್ಟ್ರಪತಿಯವರ ಪರಿಶೀಲನೆಗೆ ಕಳುಹಿಸುವ ಮಸೂದೆಗಳ ವಿಚಾರವಾಗಿ ಮೂರು ತಿಂಗಳಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಕೆಲವೇ ದಿನಗಳಲ್ಲಿ ಈ ಮಾತು ಬಂದಿದೆ.</p>.<p>‘ಕಾನೂನು ರೂಪಿಸುವ, ಕಾರ್ಯಾಂಗದ ಕೆಲಸಗಳನ್ನು ಮಾಡುವ, ಸಂಸತ್ತಿಗಿಂತ ಮಿಗಿಲಾಗಿ ವರ್ತಿಸುವ ಮತ್ತು ಯಾವ ಉತ್ತರದಾಯಿತ್ವವೂ ಇರದ ನ್ಯಾಯಮೂರ್ತಿಗಳನ್ನು ನಾವು ಹೊಂದಿದ್ದೇವೆ. ಏಕೆಂದರೆ ದೇಶದ ಕಾನೂನು ಅವರಿಗೆ ಅನ್ವಯವಾಗುವುದಿಲ್ಲ’ ಎಂದು ಧನಕರ್ ಹೇಳಿದ್ದಾರೆ.</p>.<p>ಸುಪ್ರೀಂ ಕೋರ್ಟ್ಗೆ ವಿಶೇಷ ಅಧಿಕಾರ ಒದಗಿಸುವ ಸಂವಿಧಾನದ 142ನೆಯ ವಿಧಿಯನ್ನು ಧನಕರ್ ಅವರು, ‘ನ್ಯಾಯಾಂಗಕ್ಕೆ ಪ್ರಜಾತಾಂತ್ರಿಕ ಶಕ್ತಿಗಳ ವಿರುದ್ಧ ಪ್ರಯೋಗಿಸಲು ಸದಾ ಸಿಗುವ ಅಣ್ವಸ್ತ್ರ ಕ್ಷಿಪಣಿ’ ಎಂದು ವ್ಯಾಖ್ಯಾನಿಸಿದ್ದಾರೆ.</p>.<p>ತನ್ನೆದುರು ಬಂದ ಯಾವುದೇ ಪ್ರಕರಣದಲ್ಲಿ ‘ಪರಿಪೂರ್ಣ ನ್ಯಾಯವನ್ನು ನೀಡಲು’ ಆದೇಶ ಹೊರಡಿಸುವ ಅಧಿಕಾರವನ್ನು ಈ ವಿಧಿಯು ಸುಪ್ರೀಂ ಕೋರ್ಟ್ಗೆ ನೀಡುತ್ತದೆ.</p>.<p>‘ಈಚಿನ ತೀರ್ಪೊಂದರಲ್ಲಿ ರಾಷ್ಟ್ರಪತಿಯವರಿಗೆ ಒಂದು ನಿರ್ದೇಶನ ಇದೆ. ನಾವು ಎತ್ತ ಸಾಗುತ್ತಿದ್ದೇವೆ? ದೇಶದಲ್ಲಿ ಏನಾಗುತ್ತಿದೆ? ನಾವು ಬಹಳ ಸೂಕ್ಷ್ಮವಾಗಿ ಇರಬೇಕು. ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಬೇಕೋ ಬೇಡವೋ ಎಂಬ ಪ್ರಶ್ನೆ ಇದಲ್ಲ. ಈ ಬಗೆಯ ಪ್ರಜಾತಂತ್ರವನ್ನು ನಾವು ಯಾವತ್ತೂ ಬಯಸಿರಲಿಲ್ಲ...’ ಎಂದು ಧನಕರ್ ಹೇಳಿದ್ದಾರೆ.</p>.<p>‘ರಾಷ್ಟ್ರಪತಿಯವರ ಸ್ಥಾನವು ಬಹಳ ಉನ್ನತವಾದುದು. ರಾಷ್ಟ್ರಪತಿಯವರು ಸಂವಿಧಾನವನ್ನು ರಕ್ಷಿಸಲು ಪ್ರತಿಜ್ಞೆ ಸ್ವೀಕರಿಸಿರುತ್ತಾರೆ. ಸಚಿವರು, ಉಪ ರಾಷ್ಟ್ರಪತಿ, ಸಂಸದರು ಮತ್ತು ನ್ಯಾಯಮೂರ್ತಿಗಳು ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳುವ ಪ್ರತಿಜ್ಞೆ ಸ್ವೀಕರಿಸಿರುತ್ತಾರೆ’ ಎಂದಿದ್ದಾರೆ.</p>.<p>ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದ ಅಧಿಕಾರ ವ್ಯಾಪ್ತಿಯನ್ನು ಪ್ರತ್ಯೇಕಿಸುವ ತತ್ವದ ಬಗ್ಗೆಯೂ ಉಲ್ಲೇಖಿಸಿರುವ ಧನಕರ್, ‘ಸಂಸತ್ತಿನಲ್ಲಿ ನೀವು ಪ್ರಶ್ನಿಸಬಹುದು... ಆದರೆ ನ್ಯಾಯಾಂಗವು ಕಾರ್ಯಾಂಗದ ಆಡಳಿತ ನಡೆಸಿದರೆ ನೀವು ಪ್ರಶ್ನೆ ಹೇಗೆ ಕೇಳುತ್ತೀರಿ? ಚುನಾವಣೆಗಳಲ್ಲಿ ಯಾರನ್ನು ಹೊಣೆ ಮಾಡುವಿರಿ’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>