<p>ನವದೆಹಲಿ: ಪಂಜಾಬ್ನ ಕಾಂಗ್ರೆಸ್ನಲ್ಲಿನ ಆಂತರಿಕ ಕಚ್ಚಾಟವು ತಾರಕಕ್ಕೇರಿದ್ದು, ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.</p>.<p>ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಅವರನ್ನು ನೇಮಕ ಮಾಡಿದ ಬಳಿಕ ಅಮರಿಂದರ್ ಇದೇ ಮೊದಲ ಬಾರಿಗೆ ಸೋನಿಯಾ ಅವರನ್ನು ಭೇಟಿ ಮಾಡಿದ್ದಾರೆ.</p>.<p>ಅಧ್ಯಕ್ಷರಾಗಿ ನೇಮಕವಾದ ಬಳಿಕವೂ ಸಿಧು ಅವರು ಪಂಜಾಬ್ ಸರ್ಕಾರದ ವಿರುದ್ಧದ ಆರೋಪಗಳನ್ನು ಮುಂದುವರಿಸಿದ್ದು, ರಾಜ್ಯದಲ್ಲಿನ ಡ್ರಗ್ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಈ ಬಗ್ಗೆ ವರದಿಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ವಿಧಾನಸಭೆಯಲ್ಲಿ ನಿರ್ಣಯ ತರುವ ಬಗ್ಗೆಯೂ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸಿಧು ಸರ್ಕಾರದ ಮೇಲೆ ನಿರಂತರ ವಾಗ್ದಾಳಿ ನಡೆಸುತ್ತಿರುವ ಅಮರಿಂದರ್ ಅವರಿಗೆ ಅತೃಪ್ತಿ ಇದೆ ಎಂದು ತಿಳಿದುಬಂದಿದೆ.</p>.<p>ಸೋನಿಯಾ ಅವರ ಜತೆಗಿನ ಸಭೆಯಲ್ಲಿ ರಾಜ್ಯ ಸಂಪುಟ ಪುನರ್ ರಚನೆ ಹಾಗೂ ಅದರಲ್ಲಿ ಸೇರಿಸಬೇಕಾದ ಸಂಭಾವ್ಯ ಅಭ್ಯರ್ಥಿಗಳ ಕುರಿತು ಹಾಗೂ ಮುಂಬರುವ ಚುನಾವಣೆಯ ಕುರಿತು ಅಮರಿಂದರ್ ಚರ್ಚಿಸಿದ್ದಾರೆ ಎನ್ನಲಾಗಿದೆ.</p>.<p>ಸೋನಿಯಾ ಅವರನ್ನು ಭೇಟಿಯಾಗಿ ಒಂದು ತಾಸು ಸಭೆ ನಡೆಸಿರುವ ಕುರಿತು ಅಮರಿಂದರ್ ಅವರ ಮಾಧ್ಯಮ ಸಲಹೆಗಾರ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಪಂಜಾಬ್ನ ಕಾಂಗ್ರೆಸ್ನಲ್ಲಿನ ಆಂತರಿಕ ಕಚ್ಚಾಟವು ತಾರಕಕ್ಕೇರಿದ್ದು, ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.</p>.<p>ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಅವರನ್ನು ನೇಮಕ ಮಾಡಿದ ಬಳಿಕ ಅಮರಿಂದರ್ ಇದೇ ಮೊದಲ ಬಾರಿಗೆ ಸೋನಿಯಾ ಅವರನ್ನು ಭೇಟಿ ಮಾಡಿದ್ದಾರೆ.</p>.<p>ಅಧ್ಯಕ್ಷರಾಗಿ ನೇಮಕವಾದ ಬಳಿಕವೂ ಸಿಧು ಅವರು ಪಂಜಾಬ್ ಸರ್ಕಾರದ ವಿರುದ್ಧದ ಆರೋಪಗಳನ್ನು ಮುಂದುವರಿಸಿದ್ದು, ರಾಜ್ಯದಲ್ಲಿನ ಡ್ರಗ್ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಈ ಬಗ್ಗೆ ವರದಿಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ವಿಧಾನಸಭೆಯಲ್ಲಿ ನಿರ್ಣಯ ತರುವ ಬಗ್ಗೆಯೂ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಸಿಧು ಸರ್ಕಾರದ ಮೇಲೆ ನಿರಂತರ ವಾಗ್ದಾಳಿ ನಡೆಸುತ್ತಿರುವ ಅಮರಿಂದರ್ ಅವರಿಗೆ ಅತೃಪ್ತಿ ಇದೆ ಎಂದು ತಿಳಿದುಬಂದಿದೆ.</p>.<p>ಸೋನಿಯಾ ಅವರ ಜತೆಗಿನ ಸಭೆಯಲ್ಲಿ ರಾಜ್ಯ ಸಂಪುಟ ಪುನರ್ ರಚನೆ ಹಾಗೂ ಅದರಲ್ಲಿ ಸೇರಿಸಬೇಕಾದ ಸಂಭಾವ್ಯ ಅಭ್ಯರ್ಥಿಗಳ ಕುರಿತು ಹಾಗೂ ಮುಂಬರುವ ಚುನಾವಣೆಯ ಕುರಿತು ಅಮರಿಂದರ್ ಚರ್ಚಿಸಿದ್ದಾರೆ ಎನ್ನಲಾಗಿದೆ.</p>.<p>ಸೋನಿಯಾ ಅವರನ್ನು ಭೇಟಿಯಾಗಿ ಒಂದು ತಾಸು ಸಭೆ ನಡೆಸಿರುವ ಕುರಿತು ಅಮರಿಂದರ್ ಅವರ ಮಾಧ್ಯಮ ಸಲಹೆಗಾರ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>