ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಅಮರಿಂದರ್ ಸಿಂಗ್ ಅವರು ಈಚೆಗಷ್ಟೇ ಲಂಡನ್ನಿಂದ ಹಿಂತಿರುಗಿದ್ದಾರೆ. ಅಲ್ಲಿಂದ ಬಂದ ಬಳಿಕ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಸೆ.12ರಂದು ಶಾ ಅವರೊಂದಿಗಿನ ಭೇಟಿಯಲ್ಲಿರಾಷ್ಟ್ರೀಯ ಭದ್ರತೆ, ಪಂಜಾಬ್ನಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ- ಭಯೋತ್ಪಾದನೆಯ ಪ್ರಕರಣಗಳು ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿ, ಭವಿಷ್ಯದ ಮಾರ್ಗಸೂಚಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಅವರು ಚರ್ಚೆ ನಡೆಸಿದ್ದರು.