ಚೆನ್ನೈ: ತಮಿಳುನಾಡಿನ ಖ್ಯಾತ ನಟ, ಡಿಎಂಡಿಕೆ ಸಂಸ್ಥಾಪಕ ವಿಜಯಕಾಂತ್ ಅವರು ಇಂದು ಮೃತಪಟ್ಟಿದ್ದು, ನೆಚ್ಚಿನ ನಾಯಕನ ಅಗಲಿಕೆಗೆ ಅಭಿಮಾನಿಗಳು ಕಣ್ಣೀರಾದರು.
ನಟನ ಪಾರ್ಥಿವ ಶರೀರವನ್ನು ಚೆನ್ನೈನ ಕೊಯಂಬೀಡುನಲ್ಲಿರುವ ಪಕ್ಷದ ಪ್ರಧಾನ ಕಚೇರಿಯ ಆವರಣದಲ್ಲಿ ಇರಿಸಿದ್ದು, ಅಂತಿಮ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಸ್ಥಳದತ್ತ ಧಾವಿಸುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ನಟ ರಜನಿಕಾಂತ್, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಹಲವಾರು ಗಣ್ಯರು ಪಾರ್ಥಿವ ಶರೀರದ ದರ್ಶನ ಪಡೆದಿದ್ದಾರೆ. ಪತ್ನಿ ಪ್ರೇಮಲತಾ ಅವರಿಗೆ ಸಾಂತ್ವನ ಹೇಳಿದ್ದಾರೆ.
ಶುಕ್ರವಾರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಡೆಸಲು ಕುಟುಂಬ ನಿರ್ಧರಿಸಿದೆ.