ಹೈದರಾಬಾದ್: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಆಗುತ್ತಿರುವ ಹಿನ್ನೆಲೆಯಲ್ಲಿ ಭಕ್ತರೊಬ್ಬರು ಚಿನ್ನ ಲೇಪಿತ ಪಾದುಕೆಗಳನ್ನು ತಲುಪಿಸಲು ರಾಮೇಶ್ವರದಿಂದ ಪಾದಯಾತ್ರೆ ಕೈಗೊಂಡಿದ್ದಾರೆ.
ಮೂಲತಃ ಸೌಂಡ್ ಎಂಜಿನಿಯರ್ ಆಗಿರುವ ಹೈದರಾಬಾದ್ ಮೂಲದ ಚಲ್ಲಾ ಶ್ರೀನಿವಾಸ್ ಶಾಸ್ತ್ರೀ (54) ಎಂಬ ರಾಮ ಭಕ್ತ ಈ ಪಾದಯಾತ್ರೆ ಕೈಗೊಂಡಿರುವವರು.
ಪಂಚಲೋಹಗಳಿಂದ ಮಾಡಿದ ಸಂಪೂರ್ಣ ಚಿನ್ನ ಲೇಪಿತ ಪಾದುಕೆಗಳನ್ನು ಶ್ರೀರಾಮನಿಗೆ ಅರ್ಪಿಸಲು ತೆರಳುತ್ತಿದ್ದೇನೆ. ಪಾದುಕೆ ಸೇರಿ ದೇವಾಲಯಕ್ಕೆ ಸಲ್ಲಿಸುವ ಆಭರಣ, ಪರಿಕರಗಳು ಸುಮಾರು ₹ 65 ಲಕ್ಷ ಬೆಲೆ ಬಾಳುತ್ತವೆ ಎಂದು ಅವರು ತಿಳಿಸಿದ್ದಾರೆ.
ಜುಲೈ 20ರಿಂದ ಪಾದಯಾತ್ರೆ ಪ್ರಾರಂಭಿಸಿರುವ ಶಾಸ್ತ್ರೀ ಅವರು, ಇದೀಗ ಅಯೋಧ್ಯೆಯ ಸನಿಹ ಇದ್ದಾರೆ. ಮಂದಿರ ಜ. 22ರಂದು ಉದ್ಘಾಟನೆಯಾಗುತ್ತಿದ್ದು ಅದಕ್ಕೂ ಮೊದಲೇ ಅಯೋಧ್ಯೆ ತಲುಪಿ ಪಾದುಕೆಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಮುಖಾಂತರ ಟ್ರಸ್ಟ್ಗೆ ಸಲ್ಲಿಸಲಿದ್ದಾರೆ.