<p><strong>ಇಂದೋರ್:</strong> ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ಎಸ್ಎಸ್ ಮುಖಂಡರ ಕಾರ್ಟೂನ್ಗಳನ್ನು ರಚಿಸಿದ್ದನ್ನು ಆಕ್ಷೇಪಿಸಿರುವ ಪ್ರಕರಣದಲ್ಲಿ ಕಾರ್ಟೂನಿಸ್ಟ್ ಹೇಮಂತ್ ಮಾಳವೀಯ ಅವರಿಗೆ ಮಧ್ಯಪ್ರದೇಶ ಹೈಕೋರ್ಟ್ ಜಾಮೀನು ನಿರಾಕರಿಸಿದೆ. </p>.<p>ನಗರದ ಹವ್ಯಾಸಿ ಕಾರ್ಟೂನಿಸ್ಟ್ ಹೇಮಂತ್ ವಿರುದ್ಧ ಸ್ಥಳೀಯ ವಕೀಲ ಹಾಗೂ ಆರ್ಎಸ್ಎಸ್ನ ಕಾರ್ಯಕರ್ತ ವಿನಯ್ ಜೋಷಿ ನೀಡಿದ ದೂರು ಆಧರಿಸಿ ಲಸುಡಿಯಾ ಠಾಣೆಯಲ್ಲಿ ಮೇ ತಿಂಗಳಲ್ಲಿ ಪ್ರಕರಣ ದಾಖಲಾಗಿತ್ತು.</p>.<p class="title">ಹೇಮಂತ್ ಮಾಳವೀಯ ಅವರು ತಮ್ಮ ಕಾರ್ಟೂನ್ನಲ್ಲಿ ಭಗವಾನ್ ಶಿವ, ಆರ್ಎಸ್ಎಸ್, ಮೋದಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬರೆಯುವ ಮೂಲಕ ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಗಾಸಿಯಾಗಿದ್ದು, ಕೋಮು ಸಾಮರಸ್ಯಕ್ಕೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ವಿನಯ್ ತಿಳಿಸಿದ್ದರು.</p>.<p class="title">ಪ್ರಕರಣದ ವಿಚಾರಣೆ ನಡೆಸಿದ ಮಧ್ಯಪ್ರದೇಶ ಹೈಕೋರ್ಟ್ನ ಇಂದೋರ್ ಪೀಠದ ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್, ‘ಇದು ಉದ್ದೇಶಪೂರ್ವಕವಾಗಿ ಜನರ ಧಾರ್ಮಿಕ ನಂಬಿಕೆಗಳನ್ನು ಗಾಸಿಗೊಳಿಸುವ ಪ್ರಯತ್ನವಾಗಿದ್ದು, ವಾಕ್ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ತಿಳಿಸಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.</p>.ಪ್ರಧಾನಿ ಮೋದಿ ಟೀಕಿಸಿ ವ್ಯಂಗ್ಯಚಿತ್ರ: ‘ವಿಕಟನ್’ ವೆಬ್ಸೈಟ್ಗೆ ನಿರ್ಬಂಧ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ಎಸ್ಎಸ್ ಮುಖಂಡರ ಕಾರ್ಟೂನ್ಗಳನ್ನು ರಚಿಸಿದ್ದನ್ನು ಆಕ್ಷೇಪಿಸಿರುವ ಪ್ರಕರಣದಲ್ಲಿ ಕಾರ್ಟೂನಿಸ್ಟ್ ಹೇಮಂತ್ ಮಾಳವೀಯ ಅವರಿಗೆ ಮಧ್ಯಪ್ರದೇಶ ಹೈಕೋರ್ಟ್ ಜಾಮೀನು ನಿರಾಕರಿಸಿದೆ. </p>.<p>ನಗರದ ಹವ್ಯಾಸಿ ಕಾರ್ಟೂನಿಸ್ಟ್ ಹೇಮಂತ್ ವಿರುದ್ಧ ಸ್ಥಳೀಯ ವಕೀಲ ಹಾಗೂ ಆರ್ಎಸ್ಎಸ್ನ ಕಾರ್ಯಕರ್ತ ವಿನಯ್ ಜೋಷಿ ನೀಡಿದ ದೂರು ಆಧರಿಸಿ ಲಸುಡಿಯಾ ಠಾಣೆಯಲ್ಲಿ ಮೇ ತಿಂಗಳಲ್ಲಿ ಪ್ರಕರಣ ದಾಖಲಾಗಿತ್ತು.</p>.<p class="title">ಹೇಮಂತ್ ಮಾಳವೀಯ ಅವರು ತಮ್ಮ ಕಾರ್ಟೂನ್ನಲ್ಲಿ ಭಗವಾನ್ ಶಿವ, ಆರ್ಎಸ್ಎಸ್, ಮೋದಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬರೆಯುವ ಮೂಲಕ ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಗಾಸಿಯಾಗಿದ್ದು, ಕೋಮು ಸಾಮರಸ್ಯಕ್ಕೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ವಿನಯ್ ತಿಳಿಸಿದ್ದರು.</p>.<p class="title">ಪ್ರಕರಣದ ವಿಚಾರಣೆ ನಡೆಸಿದ ಮಧ್ಯಪ್ರದೇಶ ಹೈಕೋರ್ಟ್ನ ಇಂದೋರ್ ಪೀಠದ ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್, ‘ಇದು ಉದ್ದೇಶಪೂರ್ವಕವಾಗಿ ಜನರ ಧಾರ್ಮಿಕ ನಂಬಿಕೆಗಳನ್ನು ಗಾಸಿಗೊಳಿಸುವ ಪ್ರಯತ್ನವಾಗಿದ್ದು, ವಾಕ್ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ತಿಳಿಸಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.</p>.ಪ್ರಧಾನಿ ಮೋದಿ ಟೀಕಿಸಿ ವ್ಯಂಗ್ಯಚಿತ್ರ: ‘ವಿಕಟನ್’ ವೆಬ್ಸೈಟ್ಗೆ ನಿರ್ಬಂಧ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>