<p><strong>ಅಹಮದಾಬಾದ್:</strong> ‘ಪ್ರಧಾನಿ ನರೇಂದ್ರ ಮೋದಿ ಅವರ ‘ಮನದ ಮಾತು’ ಬಾನುಲಿ ಕಾರ್ಯಕ್ರಮದ ನೂರು ಕಂತುಗಳಿಗೆ ಕೇಂದ್ರ ಸರ್ಕಾರವು ಇದುವರೆಗೆ ತೆರಿಗೆ ಪಾವತಿದಾರರ ₹830 ಕೋಟಿ ಖರ್ಚು ಮಾಡಿದೆ’ ಎಂದು ಆರೋಪಿಸಿ ಟ್ವೀಟ್ ಮಾಡಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಗುಜರಾತ್ ಘಟಕ ಅಧ್ಯಕ್ಷ ಈಸುಧಾನ್ ಗಡವಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>‘ಯಾವುದೇ ಸಾಕ್ಷ್ಯಗಳಿಲ್ಲದೆ ಆರೋಪ ಮಾಡಿರುವುದಕ್ಕೆ ಈಸುಧಾನ್ ಅವರ ವಿರುದ್ಧ ಅಹಮದಾಬಾದ್ನ ಸೈಬರ್ ಕ್ರೈಂ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಸುಧಾನ್ ಅವರು ಈ ಟ್ವೀಟ್ ಅನ್ನು ಬಳಿಕ ಅಳಿಸಿದ್ದಾರೆ.</p>.<p>‘ಸುಳ್ಳು ಎಫ್ಐಆರ್ಗಳ ಮೂಲಕ ಆಡಳಿತಾರೂಢ ಬಿಜೆಪಿಯು ಎಎಪಿ ನಾಯಕರ ಮೇಲೆ ದೌರ್ಜನ್ಯ ಎಸಗುತ್ತಿದೆ’ ಎಂದು ಎಎಪಿ ಆರೋಪಿಸಿದೆ.</p>.<p>ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆಯ ಟ್ವಿಟರ್ ಖಾತೆಯು ಈಸುಧಾನ್ ಅವರ ಟ್ವೀಟ್ನ ಸ್ಕ್ರೀನ್ ಶಾಟ್ ಅನ್ನು ಲಗತ್ತಿಸಿ, ಈ ಟ್ವೀಟ್ನಲ್ಲಿ ಹೇಳಲಾಗಿರುವ ವಿಚಾರಗಳು ಸುಳ್ಳು ಎಂದಿತ್ತು.</p>.<p>‘ಟ್ವೀಟ್ ಮಾಡಿದ್ದಕ್ಕಾಗಿ ಈಸುಧಾನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದರಿಂದ ಬಿಜೆಪಿಗೆ ಎಎಪಿ ಬಗ್ಗೆ ಎಷ್ಟು ಭಯವಿದೆ ಎಂಬುದು ವ್ಯಕ್ತವಾಗುತ್ತಿದೆ. ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ’ ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಗೋಪಾಲ್ ಇಟಾಲಿಯಾ ಹೇಳಿದ್ದಾರೆ.</p>.<p>ಪ್ರಧಾನಿ ಮೋದಿ ಅವರ ‘ಮನದ ಮಾತು’ ಸರಣಿಯ 100ನೇ ಕಂತು ಭಾನುವಾರ ಪ್ರಸಾರವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ‘ಪ್ರಧಾನಿ ನರೇಂದ್ರ ಮೋದಿ ಅವರ ‘ಮನದ ಮಾತು’ ಬಾನುಲಿ ಕಾರ್ಯಕ್ರಮದ ನೂರು ಕಂತುಗಳಿಗೆ ಕೇಂದ್ರ ಸರ್ಕಾರವು ಇದುವರೆಗೆ ತೆರಿಗೆ ಪಾವತಿದಾರರ ₹830 ಕೋಟಿ ಖರ್ಚು ಮಾಡಿದೆ’ ಎಂದು ಆರೋಪಿಸಿ ಟ್ವೀಟ್ ಮಾಡಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಗುಜರಾತ್ ಘಟಕ ಅಧ್ಯಕ್ಷ ಈಸುಧಾನ್ ಗಡವಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>‘ಯಾವುದೇ ಸಾಕ್ಷ್ಯಗಳಿಲ್ಲದೆ ಆರೋಪ ಮಾಡಿರುವುದಕ್ಕೆ ಈಸುಧಾನ್ ಅವರ ವಿರುದ್ಧ ಅಹಮದಾಬಾದ್ನ ಸೈಬರ್ ಕ್ರೈಂ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಸುಧಾನ್ ಅವರು ಈ ಟ್ವೀಟ್ ಅನ್ನು ಬಳಿಕ ಅಳಿಸಿದ್ದಾರೆ.</p>.<p>‘ಸುಳ್ಳು ಎಫ್ಐಆರ್ಗಳ ಮೂಲಕ ಆಡಳಿತಾರೂಢ ಬಿಜೆಪಿಯು ಎಎಪಿ ನಾಯಕರ ಮೇಲೆ ದೌರ್ಜನ್ಯ ಎಸಗುತ್ತಿದೆ’ ಎಂದು ಎಎಪಿ ಆರೋಪಿಸಿದೆ.</p>.<p>ಪಿಐಬಿ ಫ್ಯಾಕ್ಟ್ ಚೆಕ್ ವೇದಿಕೆಯ ಟ್ವಿಟರ್ ಖಾತೆಯು ಈಸುಧಾನ್ ಅವರ ಟ್ವೀಟ್ನ ಸ್ಕ್ರೀನ್ ಶಾಟ್ ಅನ್ನು ಲಗತ್ತಿಸಿ, ಈ ಟ್ವೀಟ್ನಲ್ಲಿ ಹೇಳಲಾಗಿರುವ ವಿಚಾರಗಳು ಸುಳ್ಳು ಎಂದಿತ್ತು.</p>.<p>‘ಟ್ವೀಟ್ ಮಾಡಿದ್ದಕ್ಕಾಗಿ ಈಸುಧಾನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಇದರಿಂದ ಬಿಜೆಪಿಗೆ ಎಎಪಿ ಬಗ್ಗೆ ಎಷ್ಟು ಭಯವಿದೆ ಎಂಬುದು ವ್ಯಕ್ತವಾಗುತ್ತಿದೆ. ನಾವು ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ’ ಎಂದು ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಗೋಪಾಲ್ ಇಟಾಲಿಯಾ ಹೇಳಿದ್ದಾರೆ.</p>.<p>ಪ್ರಧಾನಿ ಮೋದಿ ಅವರ ‘ಮನದ ಮಾತು’ ಸರಣಿಯ 100ನೇ ಕಂತು ಭಾನುವಾರ ಪ್ರಸಾರವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>