ಅಹಮದಾಬಾದ್: ‘ಪ್ರಧಾನಿ ನರೇಂದ್ರ ಮೋದಿ ಅವರ ‘ಮನದ ಮಾತು’ ಬಾನುಲಿ ಕಾರ್ಯಕ್ರಮದ ನೂರು ಕಂತುಗಳಿಗೆ ಕೇಂದ್ರ ಸರ್ಕಾರವು ಇದುವರೆಗೆ ತೆರಿಗೆ ಪಾವತಿದಾರರ ₹830 ಕೋಟಿ ಖರ್ಚು ಮಾಡಿದೆ’ ಎಂದು ಆರೋಪಿಸಿ ಟ್ವೀಟ್ ಮಾಡಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಗುಜರಾತ್ ಘಟಕ ಅಧ್ಯಕ್ಷ ಈಸುಧಾನ್ ಗಡವಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.