<p><strong>ಪಳನಿ</strong>: ದೇವಾಲಯದಲ್ಲಿ ಸಾರ್ವಜನಿಕ ಘೋಷಣೆಗಳನ್ನು ಹೊರಡಿಸುವುದಕ್ಕಾಗಿ ಅಳವಡಿಸಿರುವ ಧ್ವನಿವರ್ಧಕದಲ್ಲಿ ನಟ, ರಾಜಕಾರಣಿ ವಿಜಯ್ ಅವರ ಸಿನಿಮಾ ಹಾಡನ್ನು ಪ್ರಸಾರ ಮಾಡಿದ ಅಪರಿಚಿತ ಯುವಕನ ವಿರುದ್ಧ ಪಳನಿಯ ದಂಡಾಯುಧಪಾಣಿ ದೇವಸ್ಥಾನ ಆಡಳಿತವು ಪೊಲೀಸರಿಗೆ ಶುಕ್ರವಾರ ದೂರು ನೀಡಿದೆ.</p><p>ಬೆಟ್ಟದ ತಪ್ಪಲಿನಲ್ಲಿರುವ ದೇಗುಲಕ್ಕೆ ತೆರಳುವ 'ಆನೆ ಹಾದಿ' ಪ್ರದೇಶದಲ್ಲಿ ಯಾತ್ರಿಕರು ತೆರಳುವ ವೇಳೆ ಗೀತೆ ಪ್ರಸಾರವಾಗಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿವಾದ ಸೃಷ್ಟಿಯಾಗಿದೆ.</p><p>ಯುವಕನು ಧ್ವನಿವರ್ಧಕ ವ್ಯವಸ್ಥೆ ಇರುವಲ್ಲಿಗೆ ಭದ್ರತಾ ಸಿಬ್ಬಂದಿ ಇಲ್ಲದ ಹೊತ್ತಲ್ಲಿ ಅನುಮತಿ ಪಡೆಯದೆ ತೆರಳಿದ್ದ. ಆ ವೇಳೆ, ತನ್ನ ಮೊಬೈಲ್ ಮೂಲಕ ಹಾಡನ್ನು ಪ್ಲೇ ಮಾಡಿದ್ದಾನೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.</p><p>ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 299ರ (ಧಾರ್ಮಿಕ ಭಾವನೆಗೆ ಧಕ್ಕೆ) ಅಡಿಯಲ್ಲಿ ಫೆಬ್ರುವರಿ 12ರಂದು ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.</p><p>ದೇವಾಲಯದ ಆಡಳಿತ, ಭದ್ರತಾ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿ ಆಂತರಿಕ ತನಿಖೆಗೆ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಳನಿ</strong>: ದೇವಾಲಯದಲ್ಲಿ ಸಾರ್ವಜನಿಕ ಘೋಷಣೆಗಳನ್ನು ಹೊರಡಿಸುವುದಕ್ಕಾಗಿ ಅಳವಡಿಸಿರುವ ಧ್ವನಿವರ್ಧಕದಲ್ಲಿ ನಟ, ರಾಜಕಾರಣಿ ವಿಜಯ್ ಅವರ ಸಿನಿಮಾ ಹಾಡನ್ನು ಪ್ರಸಾರ ಮಾಡಿದ ಅಪರಿಚಿತ ಯುವಕನ ವಿರುದ್ಧ ಪಳನಿಯ ದಂಡಾಯುಧಪಾಣಿ ದೇವಸ್ಥಾನ ಆಡಳಿತವು ಪೊಲೀಸರಿಗೆ ಶುಕ್ರವಾರ ದೂರು ನೀಡಿದೆ.</p><p>ಬೆಟ್ಟದ ತಪ್ಪಲಿನಲ್ಲಿರುವ ದೇಗುಲಕ್ಕೆ ತೆರಳುವ 'ಆನೆ ಹಾದಿ' ಪ್ರದೇಶದಲ್ಲಿ ಯಾತ್ರಿಕರು ತೆರಳುವ ವೇಳೆ ಗೀತೆ ಪ್ರಸಾರವಾಗಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿವಾದ ಸೃಷ್ಟಿಯಾಗಿದೆ.</p><p>ಯುವಕನು ಧ್ವನಿವರ್ಧಕ ವ್ಯವಸ್ಥೆ ಇರುವಲ್ಲಿಗೆ ಭದ್ರತಾ ಸಿಬ್ಬಂದಿ ಇಲ್ಲದ ಹೊತ್ತಲ್ಲಿ ಅನುಮತಿ ಪಡೆಯದೆ ತೆರಳಿದ್ದ. ಆ ವೇಳೆ, ತನ್ನ ಮೊಬೈಲ್ ಮೂಲಕ ಹಾಡನ್ನು ಪ್ಲೇ ಮಾಡಿದ್ದಾನೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.</p><p>ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 299ರ (ಧಾರ್ಮಿಕ ಭಾವನೆಗೆ ಧಕ್ಕೆ) ಅಡಿಯಲ್ಲಿ ಫೆಬ್ರುವರಿ 12ರಂದು ಪ್ರಕರಣ ದಾಖಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.</p><p>ದೇವಾಲಯದ ಆಡಳಿತ, ಭದ್ರತಾ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿ ಆಂತರಿಕ ತನಿಖೆಗೆ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>