<p><strong>ಹೈದರಾಬಾದ್: </strong>ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಮೈಕ್ ಕಿತ್ತೆಸೆದು, ಭಾಷಣಕ್ಕೆ ಅಡ್ಡಿಪಡಿಸಿದ ಆರೋಪ ಮೇಲೆ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ನಾಯಕ ನಂದ ಕಿಶೋರ್ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಅಸ್ಸಾಂ ಮುಖ್ಯಮಂತ್ರಿಯನ್ನು ಎದುರಿಸಲು ಯತ್ನಿಸಿದ್ದಕ್ಕಾಗಿ ಕಿಶೋರ್ ವಿರುದ್ಧ ಐಪಿಸಿ ಸೆಕ್ಷನ್ 354, 341 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೈದರಾಬಾದ್ನ ಅಬಿಡ್ಸ್ ರಸ್ತೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರಸಾದ್ ರಾವ್ ತಿಳಿಸಿದ್ದಾರೆ.</p>.<p>ಹೈದರಾಬಾದ್ನಲ್ಲಿ ಶುಕ್ರವಾರ ಭಾಗ್ಯನಗರ ಗಣೇಶ ಉತ್ಸವ ಸಮಿತಿ (ಬಿಜಿಯುಎಸ್) ಆಯೋಜಿಸಿದ್ದ ಗಣೇಶ ಮೆರವಣಿಗೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಭಾಗವಹಿಸಿದ್ದರು.</p>.<p>ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಶರ್ಮಾ ಮಾತನಾಡುತ್ತಿದ್ದ ಸಂದರ್ಭದಲ್ಲಿ ಟಿಆರ್ಎಸ್ ನಾಯಕ ನಂದ ಕಿಶೋರ್, ವೇದಿಕೆಯ ಮೇಲೆ ಹೋಗಿ ಮೈಕ್ ಅನ್ನು ಕಿತ್ತೆಸೆದಿದ್ದರು. ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.</p>.<p>ಹಿಮಂತ ಬಿಸ್ವಾ ತಮ್ಮ ಭಾಷಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಟೀಕಿಸಿದ್ದರು. ತೆಲಂಗಾಣದಲ್ಲಿ ಒಂದು ಕುಟುಂಬ (ಕೆಸಿಆರ್) ಮಾತ್ರ ಸಂತೋಷವಾಗಿದೆ ಎಂದು ಆರೋಪಿಸಿದ್ದರು.</p>.<p>ತೆಲಂಗಾಣ ಸರ್ಕಾರದ ವಿರುದ್ಧ ಶರ್ಮಾ ಅವರು ನೀಡಿದ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಂದ ಕಿಶೋರ್, ವೇದಿಕೆ ಮೇಲೆ ಬಂದು ಕೆಸಿಆರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರೆ ಸಹಿಸುವುದಿಲ್ಲ ಎಂದು ಕೂಗಾಡಿದ್ದರು.</p>.<p><strong>ಓದಿ...<a href="https://www.prajavani.net/india-news/trs-member-confronts-assam-cm-himanta-biswa-sarma-by-dismantling-mic-in-hyderabad-970695.html" target="_blank">ತೆಲಂಗಾಣ: ಅಸ್ಸಾಂ ಸಿಎಂ ಮೈಕ್ ಕಿತ್ತೆಸೆದ ಟಿಆರ್ಎಸ್ ನಾಯಕ;ಕೆಲಕಾಲ ಉದ್ವಿಗ್ನತೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಮೈಕ್ ಕಿತ್ತೆಸೆದು, ಭಾಷಣಕ್ಕೆ ಅಡ್ಡಿಪಡಿಸಿದ ಆರೋಪ ಮೇಲೆ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ನಾಯಕ ನಂದ ಕಿಶೋರ್ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಅಸ್ಸಾಂ ಮುಖ್ಯಮಂತ್ರಿಯನ್ನು ಎದುರಿಸಲು ಯತ್ನಿಸಿದ್ದಕ್ಕಾಗಿ ಕಿಶೋರ್ ವಿರುದ್ಧ ಐಪಿಸಿ ಸೆಕ್ಷನ್ 354, 341 ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೈದರಾಬಾದ್ನ ಅಬಿಡ್ಸ್ ರಸ್ತೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರಸಾದ್ ರಾವ್ ತಿಳಿಸಿದ್ದಾರೆ.</p>.<p>ಹೈದರಾಬಾದ್ನಲ್ಲಿ ಶುಕ್ರವಾರ ಭಾಗ್ಯನಗರ ಗಣೇಶ ಉತ್ಸವ ಸಮಿತಿ (ಬಿಜಿಯುಎಸ್) ಆಯೋಜಿಸಿದ್ದ ಗಣೇಶ ಮೆರವಣಿಗೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಭಾಗವಹಿಸಿದ್ದರು.</p>.<p>ರ್ಯಾಲಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಶರ್ಮಾ ಮಾತನಾಡುತ್ತಿದ್ದ ಸಂದರ್ಭದಲ್ಲಿ ಟಿಆರ್ಎಸ್ ನಾಯಕ ನಂದ ಕಿಶೋರ್, ವೇದಿಕೆಯ ಮೇಲೆ ಹೋಗಿ ಮೈಕ್ ಅನ್ನು ಕಿತ್ತೆಸೆದಿದ್ದರು. ಘಟನೆಯಿಂದಾಗಿ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.</p>.<p>ಹಿಮಂತ ಬಿಸ್ವಾ ತಮ್ಮ ಭಾಷಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಟೀಕಿಸಿದ್ದರು. ತೆಲಂಗಾಣದಲ್ಲಿ ಒಂದು ಕುಟುಂಬ (ಕೆಸಿಆರ್) ಮಾತ್ರ ಸಂತೋಷವಾಗಿದೆ ಎಂದು ಆರೋಪಿಸಿದ್ದರು.</p>.<p>ತೆಲಂಗಾಣ ಸರ್ಕಾರದ ವಿರುದ್ಧ ಶರ್ಮಾ ಅವರು ನೀಡಿದ ಹೇಳಿಕೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ನಂದ ಕಿಶೋರ್, ವೇದಿಕೆ ಮೇಲೆ ಬಂದು ಕೆಸಿಆರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದರೆ ಸಹಿಸುವುದಿಲ್ಲ ಎಂದು ಕೂಗಾಡಿದ್ದರು.</p>.<p><strong>ಓದಿ...<a href="https://www.prajavani.net/india-news/trs-member-confronts-assam-cm-himanta-biswa-sarma-by-dismantling-mic-in-hyderabad-970695.html" target="_blank">ತೆಲಂಗಾಣ: ಅಸ್ಸಾಂ ಸಿಎಂ ಮೈಕ್ ಕಿತ್ತೆಸೆದ ಟಿಆರ್ಎಸ್ ನಾಯಕ;ಕೆಲಕಾಲ ಉದ್ವಿಗ್ನತೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>