<p><strong>ಪ್ರಯಾಗರಾಜ್</strong>: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಇಲ್ಲಿನ ಹೈಕೋರ್ಟ್ಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್ನ ಬಾರ್ ಅಸೋಸಿಯೇಷನ್ ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದೆ.</p><p>ಹೈಕೋರ್ಟ್ನ ಗೇಟ್ ಸಂಖ್ಯೆ 3ರಲ್ಲಿ ಜಮಾಯಿಸಿದ್ದ ಪ್ರತಿಭಟನಾ ನಿರತ ವಕೀಲರ ನೇತೃತ್ವ ವಹಿಸಿದ್ದ ಬಾರ್ ಅಸೋಸಿಯೇಷನ್ ಅಧ್ಯಕ್ಷ ಅನಿಲ್ ತಿವಾರಿ, ‘ಈ ಪ್ರತಿಭಟನೆ ಯಾವುದೇ ನ್ಯಾಯಾಲಯ ಅಥವಾ ನ್ಯಾಯಮೂರ್ತಿಗಳ ವಿರುದ್ಧವಲ್ಲ, ನ್ಯಾಯಾಂಗ ವ್ಯವಸ್ಥೆಗೆ ದ್ರೋಹ ಬಗೆದವರ ವಿರುದ್ಧ’ ಎಂದು ಹೇಳಿದ್ದಾರೆ.</p><p>‘ನಮ್ಮ ಹೋರಾಟ ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಮತ್ತು ಪಾರದರ್ಶಕತೆ ಇಲ್ಲದ ವ್ಯವಸ್ಥೆಯ ವಿರುದ್ಧ. ವರ್ಮಾ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕೆಂಬುದಾಗಿದೆ’ ಎಂದಿದ್ದಾರೆ.</p><p>ನ್ಯಾಯಮೂರ್ತಿ ವರ್ಮಾ ಅವರ ವರ್ಗಾವಣೆಗೆ ವಕೀಲರ ಸಂಘ ಸೋಮವಾರ ತನ್ನ ವಿರೋಧವನ್ನು ವ್ಯಕ್ತಪಡಿಸಿತ್ತು. ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿತ್ತು.</p><p>ಈ ವಿಷಯದ ಕುರಿತು ಸಂಘವು ಸಮಗ್ರ ಹೋರಾಟಕ್ಕೆ ಸಿದ್ಧವಾಗಿದೆ ಎಂದು ತಿವಾರಿ ತಿಳಿಸಿದ್ದಾರೆ.</p><p>‘ಆರಂಭದಿಂದಲೂ, ಈ ವಿಷಯವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಇಂದು, ಭಾರತದಾದ್ಯಂತ ವಕೀಲರು ಈ ಹೋರಾಟದಲ್ಲಿ ತೊಡಗಿದ್ದಾರೆ. ಸ್ಪಷ್ಟ ನಿರ್ಣಯ ಬರುವವರೆಗೆ, ಪರಿಣಾಮಗಳು ಏನೇ ಇರಲಿ, ನಾವು ಕೆಲಸವನ್ನು ಪುನರಾರಂಭಿಸುವುದಿಲ್ಲ’ ಎಂದು ಅವರು ಹೇಳಿದ್ದಾರೆ.</p><p>ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸದಿಂದ ಭಾರಿ ಪ್ರಮಾಣದ ಹಣ ಪತ್ತೆಯಾಗಿದ್ದು, ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಲು ಶಿಫಾರಸು ಮಾಡುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ದೃಢಪಡಿಸಿತ್ತು.</p><p>ಕೇಂದ್ರಕ್ಕೆ ಮಾಡಲಾಗಿರುವ ವರ್ಗಾವಣೆ ಶಿಫಾರಸನ್ನು ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಬಹಿರಂಗಪಡಿಸಲಾಗಿದೆ.</p><p>ಮಾರ್ಚ್ 14ರಂದು ರಾತ್ರಿ 11.35ರ ಸುಮಾರಿಗೆ ವರ್ಮಾ ಅವರ ದೆಹಲಿಯ ಲುಟಿಯೆನ್ಸ್ ಪ್ರದೇಶದ ನಿವಾಸದಲ್ಲಿ ಸಂಭವಿಸಿದ ಬೆಂಕಿಯ ಅವಘಡದ ಸಂದರ್ಭ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಯಾಗರಾಜ್</strong>: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಇಲ್ಲಿನ ಹೈಕೋರ್ಟ್ಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್ನ ಬಾರ್ ಅಸೋಸಿಯೇಷನ್ ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದೆ.</p><p>ಹೈಕೋರ್ಟ್ನ ಗೇಟ್ ಸಂಖ್ಯೆ 3ರಲ್ಲಿ ಜಮಾಯಿಸಿದ್ದ ಪ್ರತಿಭಟನಾ ನಿರತ ವಕೀಲರ ನೇತೃತ್ವ ವಹಿಸಿದ್ದ ಬಾರ್ ಅಸೋಸಿಯೇಷನ್ ಅಧ್ಯಕ್ಷ ಅನಿಲ್ ತಿವಾರಿ, ‘ಈ ಪ್ರತಿಭಟನೆ ಯಾವುದೇ ನ್ಯಾಯಾಲಯ ಅಥವಾ ನ್ಯಾಯಮೂರ್ತಿಗಳ ವಿರುದ್ಧವಲ್ಲ, ನ್ಯಾಯಾಂಗ ವ್ಯವಸ್ಥೆಗೆ ದ್ರೋಹ ಬಗೆದವರ ವಿರುದ್ಧ’ ಎಂದು ಹೇಳಿದ್ದಾರೆ.</p><p>‘ನಮ್ಮ ಹೋರಾಟ ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಮತ್ತು ಪಾರದರ್ಶಕತೆ ಇಲ್ಲದ ವ್ಯವಸ್ಥೆಯ ವಿರುದ್ಧ. ವರ್ಮಾ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕೆಂಬುದಾಗಿದೆ’ ಎಂದಿದ್ದಾರೆ.</p><p>ನ್ಯಾಯಮೂರ್ತಿ ವರ್ಮಾ ಅವರ ವರ್ಗಾವಣೆಗೆ ವಕೀಲರ ಸಂಘ ಸೋಮವಾರ ತನ್ನ ವಿರೋಧವನ್ನು ವ್ಯಕ್ತಪಡಿಸಿತ್ತು. ಮಂಗಳವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿತ್ತು.</p><p>ಈ ವಿಷಯದ ಕುರಿತು ಸಂಘವು ಸಮಗ್ರ ಹೋರಾಟಕ್ಕೆ ಸಿದ್ಧವಾಗಿದೆ ಎಂದು ತಿವಾರಿ ತಿಳಿಸಿದ್ದಾರೆ.</p><p>‘ಆರಂಭದಿಂದಲೂ, ಈ ವಿಷಯವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಇಂದು, ಭಾರತದಾದ್ಯಂತ ವಕೀಲರು ಈ ಹೋರಾಟದಲ್ಲಿ ತೊಡಗಿದ್ದಾರೆ. ಸ್ಪಷ್ಟ ನಿರ್ಣಯ ಬರುವವರೆಗೆ, ಪರಿಣಾಮಗಳು ಏನೇ ಇರಲಿ, ನಾವು ಕೆಲಸವನ್ನು ಪುನರಾರಂಭಿಸುವುದಿಲ್ಲ’ ಎಂದು ಅವರು ಹೇಳಿದ್ದಾರೆ.</p><p>ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸದಿಂದ ಭಾರಿ ಪ್ರಮಾಣದ ಹಣ ಪತ್ತೆಯಾಗಿದ್ದು, ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾಯಿಸಲು ಶಿಫಾರಸು ಮಾಡುವ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ದೃಢಪಡಿಸಿತ್ತು.</p><p>ಕೇಂದ್ರಕ್ಕೆ ಮಾಡಲಾಗಿರುವ ವರ್ಗಾವಣೆ ಶಿಫಾರಸನ್ನು ಸುಪ್ರೀಂ ಕೋರ್ಟ್ ವೆಬ್ಸೈಟ್ನಲ್ಲಿ ಬಹಿರಂಗಪಡಿಸಲಾಗಿದೆ.</p><p>ಮಾರ್ಚ್ 14ರಂದು ರಾತ್ರಿ 11.35ರ ಸುಮಾರಿಗೆ ವರ್ಮಾ ಅವರ ದೆಹಲಿಯ ಲುಟಿಯೆನ್ಸ್ ಪ್ರದೇಶದ ನಿವಾಸದಲ್ಲಿ ಸಂಭವಿಸಿದ ಬೆಂಕಿಯ ಅವಘಡದ ಸಂದರ್ಭ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>