<p><strong>ನವದೆಹಲಿ:</strong> ತಮ್ಮ ನಿವಾಸದಲ್ಲಿ ನಗದು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಿಸಿದ್ದ ನ್ಯಾಯಮೂರ್ತಿಗಳ ಸಮಿತಿಯ ವರದಿಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.</p><p>ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆಯಾಗಿರುವ ಪ್ರಕರಣದಲ್ಲಿ ಯಶವಂತ ವರ್ಮಾ ಅವರು ತಪ್ಪಿತಸ್ಥರು ಎಂದು ಸಮಿತಿ ಹೇಳಿತ್ತು. ಈ ಪ್ರಕರಣದಲ್ಲಿ ಸಂಸತ್ತು ನ್ಯಾ. ವರ್ಮಾ ಅವರನ್ನು ವಾಗ್ದಂಡನೆಗೆ ಗುರಿಪಡಿಸಿ, ಪದಚ್ಯುತಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್ನ ಹಿಂದಿನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಒತ್ತಾಯಿಸಿದ್ದರು. ಇದನ್ನು ರದ್ದುಗೊಳಿಸಬೇಕು ಎಂದು ವರ್ಮಾ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.</p><p>ಜುಲೈ 21ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ವರ್ಮಾ ಅವರನ್ನು ವಾಗ್ದಂಡನೆಗೆ ಗುರಿಪಡಿಸಿ, ಅವರನ್ನು ಪದಚ್ಯುತಗೊಳಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.</p><p>‘ಪ್ರಕರಣದ ತನಿಖೆ ನಡೆಸಿದ ಸಮಿತಿಯು ತನ್ನನ್ನು ನಿರ್ದೋಷಿ ಎಂದು ಸಾಬೀತು ಮಾಡಲು ಸಾಕ್ಷಿಗಳನ್ನು ಕೇಳಿಲ್ಲ, ಅವಕಾಶ ನೀಡಿಲ್ಲ. ಸತ್ಯಶೋಧನಾ ಸಮಿತಿಯ ವರದಿಯು ಪೂರ್ವನಿರ್ಧಾರಿತವಾಗಿದೆ. ತನಿಖೆಯು ಪಾರದರ್ಶಕವಾಗಿ ನಡೆದಿಲ್ಲ’ ಎಂದು ವರ್ಮಾ ಅವರು ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ. </p><p>ವರ್ಮಾ ಅವರ ಅರ್ಜಿಯು ಇನ್ನಷ್ಟು ವಿಚಾರಣೆಗೆ ಬರಬೇಕಿದೆ.</p>.<h3>ವರದಿಯಲ್ಲಿ ಏನು ಹೇಳಲಾಗಿದೆ..?</h3><p>ನ್ಯಾ. ವರ್ಮಾ ಮತ್ತವರ ಕುಟುಂಬದವರು ರಹಸ್ಯ ಕೊಠಡಿಯೊಂದರ ಸಂಪೂರ್ಣ ನಿಯಂತ್ರಣ ಹೊಂದಿದ್ದರು. ಅಲ್ಲಿ ದೊಡ್ಡ ಪ್ರಮಾಣದಲ್ಲಿ ಅರ್ಧ ಸುಟ್ಟ ನೋಟುಗಳು ಪತ್ತೆಯಾಗಿವೆ. ಇದರಲ್ಲಿ ಕೃತ್ಯ ಸಾಬೀತಾಗಿದ್ದು, ಅವರನ್ನು ಕರ್ತವ್ಯದಿಂದ ವಜಾಗೊಳಿಸಲು ಇದು ಸಾಕು ಎಂದು ಹೇಳಲಾಗಿದೆ.</p><p>ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನ್ಯಾ. ಶೀಲ್ ನಾಗು ಅವರ ನೇತೃತ್ವದಲ್ಲಿ ಹತ್ತು ದಿನಗಳ ಕಾಲ ತನಿಖೆ ನಡೆಯಿತು. 55 ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಳ್ಳಲಾಯಿತು. ಘಟನಾ ಸ್ಥಳಕ್ಕೂ ಈ ಸಮಿತಿ ಭೇಟಿ ನೀಡಿತ್ತು. </p><p>ಮಾರ್ಚ್ 14ರಂದು ಬೆಳಿಗ್ಗೆ 11.35ರ ಸುಮಾರಿಗೆ ನ್ಯಾ. ವರ್ಮಾ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಬೆಂಕಿ ನಂದಿಸಲು ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಅಪಾರ ಪ್ರಮಾಣದ ನಗದು ಇರುವುದನ್ನು ಪತ್ತೆ ಮಾಡಿದ್ದರು. ಇದು ವ್ಯಾಪಕವಾಗಿ ಹರಿದಾಡಿತು. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಈ ಕುರಿತು ತನಿಖೆಗೆ ಆಗ್ರಹಿಸಿದ್ದರು.</p><p>ಘಟನೆ ನಡೆದ ಸಂದರ್ಭದಲ್ಲಿ ವರ್ಮಾ ಅವರು ದಹೆಲಿ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದರು. ನಂತರ ಅವನ್ನು ಅಲಹಾಬಾದ್ ಹೈಕೋರ್ಟ್ ವರ್ಗಾಯಿಸಲಾಗಿತ್ತು.</p><p>ಸಮಿತಿಯ ವರದಿಯನ್ನು ಆಧರಿಸಿ ಹಿಂದಿನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ವಾಗ್ದಂಡನೆಗೆ ಶಿಫಾರಸು ಮಾಡಿದ್ದರು.</p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಸಭಾ ಸಂಸದ ಬ್ರಿಜ ಲಾಲ್ ನೇತೃತ್ವದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಮತ್ತು ನ್ಯಾಯ ಕುರಿತ ಸಂಸದೀಯ ಸಮಿತಿಯೂ ವಿಚಾರಣೆ ನಡೆಸಿತ್ತು. ಸಮಿತಿ ಎದುರು ಹಾಜರಾದ ನ್ಯಾಯ ಇಲಾಖೆಯ ಕಾರ್ಯದರ್ಶಿ ಘಟನೆಯ ಮಾಹಿತಿ ನೀಡಿದ್ದರು.</p><p>ಈ ಪ್ರಕರಣವು ನ್ಯಾಯಾಂಗ ಕುರಿತಂತೆ ಆತಂಕ ಮೂಡುವಂತೆ ಮಾಡಿದೆ. ನ್ಯಾಯಾಧೀಶರು ಹಾಗೂ ನ್ಯಾಯಮೂರ್ತಿಗಳಿಗೆ ಸಂಬಂಧಿಸಿ ನೀತಿ ಸಂಹಿತೆ ರೂಪಿಸಬೇಕು. ಇದಕ್ಕಾಗಿ ಸಮಗ್ರ ಮಸೂದೆಯೊಂದರ ಅಗತ್ಯವಿದೆ ಎಂಬುದಾಗಿ ಸಮಿತಿ ಸದಸ್ಯರು ಪ್ರತಿಪಾದಿಸಿದ್ದರು.</p><p>ನ್ಯಾಯಮೂರ್ತಿ ವರ್ಮಾ ನಿವಾಸದಲ್ಲಿ ನಗದು ವಶಪಡಿಸಿಕೊಂಡಿರುವುದು ಸತ್ಯ ಎಂಬುದಾಗಿ ಸುಪ್ರೀಂ ಕೋರ್ಟ್ ನೇಮಿಸಿದ್ದ ನ್ಯಾಯಮೂರ್ತಿಗಳ ಸಮಿತಿ ಹೇಳಿದೆ. ಹಾಗಾಗಿ, ನ್ಯಾಯಮೂರ್ತಿ ವರ್ಮಾ ಅವರ ಪದಚ್ಯುತಿಗೆ ಸಂಬಂಧಿಸಿ ಸರ್ಕಾರ ಗೊತ್ತುವಳಿ ಮಂಡಿಸಬೇಕಿತ್ತು ಎಂದು ಸಮಿತಿಯ ಕೆಲ ಸದಸ್ಯರು ಹೇಳಿದ್ದರು.</p>.<h3>ಸಮಿತಿ ಮುಂದಿಟ್ಟ ಪ್ರಶ್ನೆಗಳು</h3><ul><li><p>ನಿವೃತ್ತಿ ನಂತರ ಐದು ವರ್ಷ ಪೂರ್ಣಗೊಳ್ಳುವವರೆಗೆ ನ್ಯಾಯಮೂರ್ತಿಗಳು ಸರ್ಕಾರ ನೀಡುವ ಯಾವುದೇ ಹುದ್ದೆಯನ್ನು ಒಪ್ಪಿಕೊಳ್ಳಬಾರದು</p></li><li><p>ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ಲೆಕ್ಕಪತ್ರವಿಲ್ಲದ ನಗದು ವಶಪಡಿಸಿಕೊಂಡಿರುವುದಕ್ಕೆ ಸಂಬಂಧಿಸಿ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲವೇಕೆ?</p></li><li><p>ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸುವ ಕುರಿತ ಗೊತ್ತುವಳಿ ಮಂಡನೆ ಮಾಡಿಲ್ಲ ಏಕೆ?</p></li><li><p>ಸಣ್ಣ ಪ್ರಮಾಣದ ಭ್ರಷ್ಟಾಚಾರದಲ್ಲಿ ಸರ್ಕಾರಿ ನೌಕರ ತನ್ನ ಉದ್ಯೋಗ ಕಳೆದುಕೊಳ್ಳುತ್ತಾರೆ. ಆದರೆ, ನ್ಯಾಯಾಂಗದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿಯ ನಿವಾಸದಲ್ಲಿ ಲೆಕ್ಕಪತ್ರ ಇಲ್ಲದ ನಗದು ವಶಪಡಿಸಿಕೊಂಡಿದ್ದರೂ, ಕ್ರಮ ಜರುಗಿಸಿಲ್ಲ ಏಕೆ?</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತಮ್ಮ ನಿವಾಸದಲ್ಲಿ ನಗದು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಿಸಿದ್ದ ನ್ಯಾಯಮೂರ್ತಿಗಳ ಸಮಿತಿಯ ವರದಿಯನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.</p><p>ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆಯಾಗಿರುವ ಪ್ರಕರಣದಲ್ಲಿ ಯಶವಂತ ವರ್ಮಾ ಅವರು ತಪ್ಪಿತಸ್ಥರು ಎಂದು ಸಮಿತಿ ಹೇಳಿತ್ತು. ಈ ಪ್ರಕರಣದಲ್ಲಿ ಸಂಸತ್ತು ನ್ಯಾ. ವರ್ಮಾ ಅವರನ್ನು ವಾಗ್ದಂಡನೆಗೆ ಗುರಿಪಡಿಸಿ, ಪದಚ್ಯುತಗೊಳಿಸಬೇಕು ಎಂಬ ಸುಪ್ರೀಂ ಕೋರ್ಟ್ನ ಹಿಂದಿನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಒತ್ತಾಯಿಸಿದ್ದರು. ಇದನ್ನು ರದ್ದುಗೊಳಿಸಬೇಕು ಎಂದು ವರ್ಮಾ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.</p><p>ಜುಲೈ 21ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ವರ್ಮಾ ಅವರನ್ನು ವಾಗ್ದಂಡನೆಗೆ ಗುರಿಪಡಿಸಿ, ಅವರನ್ನು ಪದಚ್ಯುತಗೊಳಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.</p><p>‘ಪ್ರಕರಣದ ತನಿಖೆ ನಡೆಸಿದ ಸಮಿತಿಯು ತನ್ನನ್ನು ನಿರ್ದೋಷಿ ಎಂದು ಸಾಬೀತು ಮಾಡಲು ಸಾಕ್ಷಿಗಳನ್ನು ಕೇಳಿಲ್ಲ, ಅವಕಾಶ ನೀಡಿಲ್ಲ. ಸತ್ಯಶೋಧನಾ ಸಮಿತಿಯ ವರದಿಯು ಪೂರ್ವನಿರ್ಧಾರಿತವಾಗಿದೆ. ತನಿಖೆಯು ಪಾರದರ್ಶಕವಾಗಿ ನಡೆದಿಲ್ಲ’ ಎಂದು ವರ್ಮಾ ಅವರು ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ. </p><p>ವರ್ಮಾ ಅವರ ಅರ್ಜಿಯು ಇನ್ನಷ್ಟು ವಿಚಾರಣೆಗೆ ಬರಬೇಕಿದೆ.</p>.<h3>ವರದಿಯಲ್ಲಿ ಏನು ಹೇಳಲಾಗಿದೆ..?</h3><p>ನ್ಯಾ. ವರ್ಮಾ ಮತ್ತವರ ಕುಟುಂಬದವರು ರಹಸ್ಯ ಕೊಠಡಿಯೊಂದರ ಸಂಪೂರ್ಣ ನಿಯಂತ್ರಣ ಹೊಂದಿದ್ದರು. ಅಲ್ಲಿ ದೊಡ್ಡ ಪ್ರಮಾಣದಲ್ಲಿ ಅರ್ಧ ಸುಟ್ಟ ನೋಟುಗಳು ಪತ್ತೆಯಾಗಿವೆ. ಇದರಲ್ಲಿ ಕೃತ್ಯ ಸಾಬೀತಾಗಿದ್ದು, ಅವರನ್ನು ಕರ್ತವ್ಯದಿಂದ ವಜಾಗೊಳಿಸಲು ಇದು ಸಾಕು ಎಂದು ಹೇಳಲಾಗಿದೆ.</p><p>ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನ್ಯಾ. ಶೀಲ್ ನಾಗು ಅವರ ನೇತೃತ್ವದಲ್ಲಿ ಹತ್ತು ದಿನಗಳ ಕಾಲ ತನಿಖೆ ನಡೆಯಿತು. 55 ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಳ್ಳಲಾಯಿತು. ಘಟನಾ ಸ್ಥಳಕ್ಕೂ ಈ ಸಮಿತಿ ಭೇಟಿ ನೀಡಿತ್ತು. </p><p>ಮಾರ್ಚ್ 14ರಂದು ಬೆಳಿಗ್ಗೆ 11.35ರ ಸುಮಾರಿಗೆ ನ್ಯಾ. ವರ್ಮಾ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಬೆಂಕಿ ನಂದಿಸಲು ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಅಪಾರ ಪ್ರಮಾಣದ ನಗದು ಇರುವುದನ್ನು ಪತ್ತೆ ಮಾಡಿದ್ದರು. ಇದು ವ್ಯಾಪಕವಾಗಿ ಹರಿದಾಡಿತು. ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಈ ಕುರಿತು ತನಿಖೆಗೆ ಆಗ್ರಹಿಸಿದ್ದರು.</p><p>ಘಟನೆ ನಡೆದ ಸಂದರ್ಭದಲ್ಲಿ ವರ್ಮಾ ಅವರು ದಹೆಲಿ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದರು. ನಂತರ ಅವನ್ನು ಅಲಹಾಬಾದ್ ಹೈಕೋರ್ಟ್ ವರ್ಗಾಯಿಸಲಾಗಿತ್ತು.</p><p>ಸಮಿತಿಯ ವರದಿಯನ್ನು ಆಧರಿಸಿ ಹಿಂದಿನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ವಾಗ್ದಂಡನೆಗೆ ಶಿಫಾರಸು ಮಾಡಿದ್ದರು.</p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಸಭಾ ಸಂಸದ ಬ್ರಿಜ ಲಾಲ್ ನೇತೃತ್ವದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಮತ್ತು ನ್ಯಾಯ ಕುರಿತ ಸಂಸದೀಯ ಸಮಿತಿಯೂ ವಿಚಾರಣೆ ನಡೆಸಿತ್ತು. ಸಮಿತಿ ಎದುರು ಹಾಜರಾದ ನ್ಯಾಯ ಇಲಾಖೆಯ ಕಾರ್ಯದರ್ಶಿ ಘಟನೆಯ ಮಾಹಿತಿ ನೀಡಿದ್ದರು.</p><p>ಈ ಪ್ರಕರಣವು ನ್ಯಾಯಾಂಗ ಕುರಿತಂತೆ ಆತಂಕ ಮೂಡುವಂತೆ ಮಾಡಿದೆ. ನ್ಯಾಯಾಧೀಶರು ಹಾಗೂ ನ್ಯಾಯಮೂರ್ತಿಗಳಿಗೆ ಸಂಬಂಧಿಸಿ ನೀತಿ ಸಂಹಿತೆ ರೂಪಿಸಬೇಕು. ಇದಕ್ಕಾಗಿ ಸಮಗ್ರ ಮಸೂದೆಯೊಂದರ ಅಗತ್ಯವಿದೆ ಎಂಬುದಾಗಿ ಸಮಿತಿ ಸದಸ್ಯರು ಪ್ರತಿಪಾದಿಸಿದ್ದರು.</p><p>ನ್ಯಾಯಮೂರ್ತಿ ವರ್ಮಾ ನಿವಾಸದಲ್ಲಿ ನಗದು ವಶಪಡಿಸಿಕೊಂಡಿರುವುದು ಸತ್ಯ ಎಂಬುದಾಗಿ ಸುಪ್ರೀಂ ಕೋರ್ಟ್ ನೇಮಿಸಿದ್ದ ನ್ಯಾಯಮೂರ್ತಿಗಳ ಸಮಿತಿ ಹೇಳಿದೆ. ಹಾಗಾಗಿ, ನ್ಯಾಯಮೂರ್ತಿ ವರ್ಮಾ ಅವರ ಪದಚ್ಯುತಿಗೆ ಸಂಬಂಧಿಸಿ ಸರ್ಕಾರ ಗೊತ್ತುವಳಿ ಮಂಡಿಸಬೇಕಿತ್ತು ಎಂದು ಸಮಿತಿಯ ಕೆಲ ಸದಸ್ಯರು ಹೇಳಿದ್ದರು.</p>.<h3>ಸಮಿತಿ ಮುಂದಿಟ್ಟ ಪ್ರಶ್ನೆಗಳು</h3><ul><li><p>ನಿವೃತ್ತಿ ನಂತರ ಐದು ವರ್ಷ ಪೂರ್ಣಗೊಳ್ಳುವವರೆಗೆ ನ್ಯಾಯಮೂರ್ತಿಗಳು ಸರ್ಕಾರ ನೀಡುವ ಯಾವುದೇ ಹುದ್ದೆಯನ್ನು ಒಪ್ಪಿಕೊಳ್ಳಬಾರದು</p></li><li><p>ನ್ಯಾಯಮೂರ್ತಿ ವರ್ಮಾ ಅವರ ನಿವಾಸದಲ್ಲಿ ಲೆಕ್ಕಪತ್ರವಿಲ್ಲದ ನಗದು ವಶಪಡಿಸಿಕೊಂಡಿರುವುದಕ್ಕೆ ಸಂಬಂಧಿಸಿ ಯಾವ ಕ್ರಮವನ್ನೂ ತೆಗೆದುಕೊಂಡಿಲ್ಲವೇಕೆ?</p></li><li><p>ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸುವ ಕುರಿತ ಗೊತ್ತುವಳಿ ಮಂಡನೆ ಮಾಡಿಲ್ಲ ಏಕೆ?</p></li><li><p>ಸಣ್ಣ ಪ್ರಮಾಣದ ಭ್ರಷ್ಟಾಚಾರದಲ್ಲಿ ಸರ್ಕಾರಿ ನೌಕರ ತನ್ನ ಉದ್ಯೋಗ ಕಳೆದುಕೊಳ್ಳುತ್ತಾರೆ. ಆದರೆ, ನ್ಯಾಯಾಂಗದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿಯ ನಿವಾಸದಲ್ಲಿ ಲೆಕ್ಕಪತ್ರ ಇಲ್ಲದ ನಗದು ವಶಪಡಿಸಿಕೊಂಡಿದ್ದರೂ, ಕ್ರಮ ಜರುಗಿಸಿಲ್ಲ ಏಕೆ?</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>