<p><strong>ನವದೆಹಲಿ/ಭುವನೇಶ್ವರ:</strong> ಒಡಿಶಾ ಮೂಲದ ಡಿಸ್ಟಿಲರಿ ಕಂಪನಿಗೆ ಸೇರಿದ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿಯಲ್ಲಿ ಸಿಕ್ಕ ಹಣ ₹300 ಕೋಟಿ ದಾಟಿದ್ದು, ದೇಶದಲ್ಲಿ ಯಾವುದೇ ತನಿಖಾ ಸಂಸ್ಥೆ ಒಂದೇ ದಾಳಿಯಲ್ಲಿ ವಶಪಡಿಸಿಕೊಂಡ ದೊಡ್ಡ ಮೊತ್ತದ ನಗದು ಇದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ಡಿಸೆಂಬರ್ 6ರಿಂದ ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೇಡ್ ಮತ್ತು ಅದರ ಪ್ರವರ್ತಕರು, ಇತರರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಆರಂಭಿಸಿದ್ದರು. ತೆರಿಗೆ ವಂಚನೆ ಮತ್ತು ಅಕ್ರಮ ವ್ಯವಹಾರದ ಆರೋಪದ ಮೇಲೆ 5 ದಿನಗಳಿಂದ ಮ್ಯಾರಥಾನ್ ದಾಳಿ ನಡೆಯುತ್ತಿದೆ.</p><p>ಈಗಾಗಲೇ ₹300 ಕೋಟಿಗೂ ಅಧಿಕ ಹಣ ಎಣಿಕೆ ಮಾಡಲಾಗಿದ್ದು, ಎಣಿಕೆ ಮುಂದುವರಿದಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.</p><p>ವಶಪಡಿಸಿಕೊಂಡಿರುವ ನಗದು ಡಿಸ್ಟಿಲರಿ ಸಂಸ್ಥೆ, ವಿತರಕರು ಮತ್ತು ಇತರರು ದೇಶದಲ್ಲಿ ಕ್ಯಾಶ್ ಮೂಲದ ನಡೆಸಿದ ವ್ಯಾಪಾರದಿಂದ ಗಳಿಸಿದ ಲೆಕ್ಕರಹಿತ ಹಣ ಎಂದು ಆದಾಯ ಇಲಾಖೆ ಅಭಿಪ್ರಾಯಪಟ್ಟಿದೆ.</p><p>ಇದು ಒಂದೇ ಸಮೂಹ ಮತ್ತು ಅದಕ್ಕೆ ಸಂಬಂಧಿಸಿದ ಘಟಕಗಳ ವಿರುದ್ಧದ ಕ್ರಮದ ಭಾಗವಾಗಿ ದೇಶದಲ್ಲಿ ತನಿಖಾ ಏಜೆನ್ಸಿಯೊಂದು ವಶಪಡಿಸಿಕೊಂಡ ಅತಿ ಹೆಚ್ಚಿನ ಪ್ರಮಾಣದ ನಗದಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಈ ಹಿಂದೆ 2019ರಲ್ಲಿ ಜಿಎಸ್ಟಿ ಗುಪ್ತಚರ ಸಿಬ್ಬಂದಿ ಕಾನ್ಪುರ ಮೂಲದ ಉದ್ಯಮಿಯ ಮೇಲೆ ದಾಳಿ ನಡೆಸಿ ₹257 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದರು. ಜುಲೈ 2018ರಲ್ಲಿ ತಮಿಳುನಾಡಿನಲ್ಲಿ ರಸ್ತೆ ನಿರ್ಮಾಣ ಸಂಸ್ಥೆಯ ವಿರುದ್ಧ ನಡೆದ ದಾಳಿಯಲ್ಲಿ ₹163 ಕೋಟಿ ವಶಪಡಿಸಿಕೊಳ್ಳಲಾಗಿತ್ತು.</p><p>ಜಾರ್ಖಂಡ್ನ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹು ಅವರ ರಾಂಚಿಯ ಸ್ಥಳಗಳು ಮತ್ತು ಇತರ ಸ್ಥಳಗಳಲ್ಲಿಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.</p><p>ಸಾಹು ಮನೆಯಿಂದ ಎಷ್ಟು ಪ್ರಮಾಣದ ನಗದು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಭುವನೇಶ್ವರ:</strong> ಒಡಿಶಾ ಮೂಲದ ಡಿಸ್ಟಿಲರಿ ಕಂಪನಿಗೆ ಸೇರಿದ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿಯಲ್ಲಿ ಸಿಕ್ಕ ಹಣ ₹300 ಕೋಟಿ ದಾಟಿದ್ದು, ದೇಶದಲ್ಲಿ ಯಾವುದೇ ತನಿಖಾ ಸಂಸ್ಥೆ ಒಂದೇ ದಾಳಿಯಲ್ಲಿ ವಶಪಡಿಸಿಕೊಂಡ ದೊಡ್ಡ ಮೊತ್ತದ ನಗದು ಇದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ಡಿಸೆಂಬರ್ 6ರಿಂದ ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೇಡ್ ಮತ್ತು ಅದರ ಪ್ರವರ್ತಕರು, ಇತರರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಆರಂಭಿಸಿದ್ದರು. ತೆರಿಗೆ ವಂಚನೆ ಮತ್ತು ಅಕ್ರಮ ವ್ಯವಹಾರದ ಆರೋಪದ ಮೇಲೆ 5 ದಿನಗಳಿಂದ ಮ್ಯಾರಥಾನ್ ದಾಳಿ ನಡೆಯುತ್ತಿದೆ.</p><p>ಈಗಾಗಲೇ ₹300 ಕೋಟಿಗೂ ಅಧಿಕ ಹಣ ಎಣಿಕೆ ಮಾಡಲಾಗಿದ್ದು, ಎಣಿಕೆ ಮುಂದುವರಿದಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.</p><p>ವಶಪಡಿಸಿಕೊಂಡಿರುವ ನಗದು ಡಿಸ್ಟಿಲರಿ ಸಂಸ್ಥೆ, ವಿತರಕರು ಮತ್ತು ಇತರರು ದೇಶದಲ್ಲಿ ಕ್ಯಾಶ್ ಮೂಲದ ನಡೆಸಿದ ವ್ಯಾಪಾರದಿಂದ ಗಳಿಸಿದ ಲೆಕ್ಕರಹಿತ ಹಣ ಎಂದು ಆದಾಯ ಇಲಾಖೆ ಅಭಿಪ್ರಾಯಪಟ್ಟಿದೆ.</p><p>ಇದು ಒಂದೇ ಸಮೂಹ ಮತ್ತು ಅದಕ್ಕೆ ಸಂಬಂಧಿಸಿದ ಘಟಕಗಳ ವಿರುದ್ಧದ ಕ್ರಮದ ಭಾಗವಾಗಿ ದೇಶದಲ್ಲಿ ತನಿಖಾ ಏಜೆನ್ಸಿಯೊಂದು ವಶಪಡಿಸಿಕೊಂಡ ಅತಿ ಹೆಚ್ಚಿನ ಪ್ರಮಾಣದ ನಗದಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಈ ಹಿಂದೆ 2019ರಲ್ಲಿ ಜಿಎಸ್ಟಿ ಗುಪ್ತಚರ ಸಿಬ್ಬಂದಿ ಕಾನ್ಪುರ ಮೂಲದ ಉದ್ಯಮಿಯ ಮೇಲೆ ದಾಳಿ ನಡೆಸಿ ₹257 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದರು. ಜುಲೈ 2018ರಲ್ಲಿ ತಮಿಳುನಾಡಿನಲ್ಲಿ ರಸ್ತೆ ನಿರ್ಮಾಣ ಸಂಸ್ಥೆಯ ವಿರುದ್ಧ ನಡೆದ ದಾಳಿಯಲ್ಲಿ ₹163 ಕೋಟಿ ವಶಪಡಿಸಿಕೊಳ್ಳಲಾಗಿತ್ತು.</p><p>ಜಾರ್ಖಂಡ್ನ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹು ಅವರ ರಾಂಚಿಯ ಸ್ಥಳಗಳು ಮತ್ತು ಇತರ ಸ್ಥಳಗಳಲ್ಲಿಯೂ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.</p><p>ಸಾಹು ಮನೆಯಿಂದ ಎಷ್ಟು ಪ್ರಮಾಣದ ನಗದು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>