<p><strong>ನವದೆಹಲಿ:</strong> ಜಾತಿಗಣತಿ ನಡೆಸುವ ವಿಚಾರದಲ್ಲಿ ಕಾಲಮಿತಿ ನಿಗದಿಪಡಿಸುವ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೋರಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.</p><p>ಜಾತಿಗಣತಿ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಹತಾಶರಾಗಿ ಯು–ಟರ್ನ್’ ಹೊಡೆದಿದ್ದು, ಈ ವಿಚಾರದಲ್ಲಿ ಸರ್ಕಾರದ ನೀತಿಯೂ ಅಧಿಕೃತವಾಗಿ ಬದಲಾಗಿದೆಯೇ ಎಂಬುದನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ. </p><p>‘ಜಾತಿ ಗಣತಿ ವಿಚಾರದಲ್ಲಿ ಏಕಾಏಕಿ ಹತಾಶರಾಗಿ ಪ್ರಧಾನಿ ಯುಟರ್ನ್ ಹೊಡೆದಿದ್ದಾರೆ’ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹೇಳಿದ್ದಾರೆ.</p><p>‘2024ರ ಏಪ್ರಿಲ್ 28ರಂದು ಟಿವಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ, ‘ಜಾತಿಗಣತಿ ಕುರಿತು ಬೇಡಿಕೆ ಇಡುತ್ತಿರುವವರೆಲ್ಲರೂ ‘ಅರ್ಬನ್ ನಕ್ಸಲರು’ ಎಂದು ಪ್ರಧಾನಿ ಮೋದಿ ಟೀಕಿಸಿದ್ದರು. 2021ರ ಜುಲೈ 20ರಂದು ಸಂಸತ್ತಿನಲ್ಲಿ ಲಿಖಿತವಾಗಿ ಉತ್ತರ ನೀಡಿದ್ದ ಕೇಂದ್ರ ಗೃಹ ಸಚಿವಾಲಯ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊರತಾಗಿ ಎಲ್ಲ ಸಮುದಾಯಗಳ ಜಾತಿಗಣತಿ ಸರ್ಕಾರದ ನೀತಿಯ ಭಾಗವಾಗಿಲ್ಲ ಎಂದು ಸ್ಪಷ್ಟಪಡಿಸಿತ್ತು’ ಎಂದಿದ್ದಾರೆ.</p><p>‘ಕಳೆದ 11 ವರ್ಷಗಳಲ್ಲಿ ಸತತ ವಿರೋಧಿಸಿ, ಕಾಂಗ್ರೆಸ್ ಪಕ್ಷದ ಬೇಡಿಕೆಯನ್ನು ತಿರಸ್ಕರಿಸಿದ್ದ ಕೇಂದ್ರದ ಬಿಜೆಪಿ ಸರ್ಕಾರ, ಕೊನೆಗೂ ಬೇಡಿಕೆ ಈಡೇರಿಸಲು ಸಮ್ಮತಿ ನೀಡಿದೆ. ಮುಂದಿನ ಜನಗಣತಿ ವೇಳೆ ಜಾತಿಗಣತಿಯನ್ನು ಸೇರ್ಪಡೆಗೊಳಿಸುವುದಾಗಿ ತಿಳಿಸಿದೆ. ಈ ವಿಷಯದಲ್ಲಿ ಸರ್ಕಾರದ ಉದ್ದೇಶ ಏನು ಎಂಬುದನ್ನು ಮಾಹಿತಿ ನೀಡಿಲ್ಲ. ಅಲ್ಲದೇ, ಹಣಕಾಸು ಹಂಚಿಕೆಯನ್ನು ಮಾಡಿಲ್ಲ’ ಎಂದು ರಮೇಶ್ ನೆನಪಿಸಿದ್ದಾರೆ. </p><p>ಮೀಸಲಾತಿಯಲ್ಲಿ ಈಗಿರುವ ಶೇಕಡಾ 50 ಮಿತಿಯನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದ್ದು, ಸಂವಿಧಾನ ವಿಧಿ 15 (5) ತುರ್ತಾಗಿ ಜಾರಿ ಮಾಡುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಒಬಿಸಿ, ದಲಿತ, ಆದಿವಾಸಿ ಸಮುದಾಯಗಳಿಗೂ ಮೀಸಲಾತಿ ಜಾರಿಗೆ ತರಬೇಕು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜಾತಿಗಣತಿ ನಡೆಸುವ ವಿಚಾರದಲ್ಲಿ ಕಾಲಮಿತಿ ನಿಗದಿಪಡಿಸುವ ಬದ್ಧತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೋರಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.</p><p>ಜಾತಿಗಣತಿ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಹತಾಶರಾಗಿ ಯು–ಟರ್ನ್’ ಹೊಡೆದಿದ್ದು, ಈ ವಿಚಾರದಲ್ಲಿ ಸರ್ಕಾರದ ನೀತಿಯೂ ಅಧಿಕೃತವಾಗಿ ಬದಲಾಗಿದೆಯೇ ಎಂಬುದನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ. </p><p>‘ಜಾತಿ ಗಣತಿ ವಿಚಾರದಲ್ಲಿ ಏಕಾಏಕಿ ಹತಾಶರಾಗಿ ಪ್ರಧಾನಿ ಯುಟರ್ನ್ ಹೊಡೆದಿದ್ದಾರೆ’ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹೇಳಿದ್ದಾರೆ.</p><p>‘2024ರ ಏಪ್ರಿಲ್ 28ರಂದು ಟಿವಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ, ‘ಜಾತಿಗಣತಿ ಕುರಿತು ಬೇಡಿಕೆ ಇಡುತ್ತಿರುವವರೆಲ್ಲರೂ ‘ಅರ್ಬನ್ ನಕ್ಸಲರು’ ಎಂದು ಪ್ರಧಾನಿ ಮೋದಿ ಟೀಕಿಸಿದ್ದರು. 2021ರ ಜುಲೈ 20ರಂದು ಸಂಸತ್ತಿನಲ್ಲಿ ಲಿಖಿತವಾಗಿ ಉತ್ತರ ನೀಡಿದ್ದ ಕೇಂದ್ರ ಗೃಹ ಸಚಿವಾಲಯ, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊರತಾಗಿ ಎಲ್ಲ ಸಮುದಾಯಗಳ ಜಾತಿಗಣತಿ ಸರ್ಕಾರದ ನೀತಿಯ ಭಾಗವಾಗಿಲ್ಲ ಎಂದು ಸ್ಪಷ್ಟಪಡಿಸಿತ್ತು’ ಎಂದಿದ್ದಾರೆ.</p><p>‘ಕಳೆದ 11 ವರ್ಷಗಳಲ್ಲಿ ಸತತ ವಿರೋಧಿಸಿ, ಕಾಂಗ್ರೆಸ್ ಪಕ್ಷದ ಬೇಡಿಕೆಯನ್ನು ತಿರಸ್ಕರಿಸಿದ್ದ ಕೇಂದ್ರದ ಬಿಜೆಪಿ ಸರ್ಕಾರ, ಕೊನೆಗೂ ಬೇಡಿಕೆ ಈಡೇರಿಸಲು ಸಮ್ಮತಿ ನೀಡಿದೆ. ಮುಂದಿನ ಜನಗಣತಿ ವೇಳೆ ಜಾತಿಗಣತಿಯನ್ನು ಸೇರ್ಪಡೆಗೊಳಿಸುವುದಾಗಿ ತಿಳಿಸಿದೆ. ಈ ವಿಷಯದಲ್ಲಿ ಸರ್ಕಾರದ ಉದ್ದೇಶ ಏನು ಎಂಬುದನ್ನು ಮಾಹಿತಿ ನೀಡಿಲ್ಲ. ಅಲ್ಲದೇ, ಹಣಕಾಸು ಹಂಚಿಕೆಯನ್ನು ಮಾಡಿಲ್ಲ’ ಎಂದು ರಮೇಶ್ ನೆನಪಿಸಿದ್ದಾರೆ. </p><p>ಮೀಸಲಾತಿಯಲ್ಲಿ ಈಗಿರುವ ಶೇಕಡಾ 50 ಮಿತಿಯನ್ನು ತೆಗೆದುಹಾಕಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದ್ದು, ಸಂವಿಧಾನ ವಿಧಿ 15 (5) ತುರ್ತಾಗಿ ಜಾರಿ ಮಾಡುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಒಬಿಸಿ, ದಲಿತ, ಆದಿವಾಸಿ ಸಮುದಾಯಗಳಿಗೂ ಮೀಸಲಾತಿ ಜಾರಿಗೆ ತರಬೇಕು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>