ರಾಜ್ಯದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕು ಹಾಗೂ ಧನಗರ ಸಮುದಾಯವು ತಮಗೆ ನೀಡಲಾಗುತ್ತಿರುವ ಅಲೆಮಾರಿ ಬುಡಕಟ್ಟು ಪ್ರಮಾಣಪತ್ರದ ಬದಲಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡಬೇಕು ಎಂದು ಒತ್ತಾಯಿಸುತ್ತಿರುವ ನಡುವೆಯೇ, ಶಿಕ್ಷಣ ಕ್ಷೇತ್ರದಲ್ಲಿ ಶೇ 5ರಷ್ಟು ಮೀಸಲಾತಿಯನ್ನು ಪುನರ್ ಸ್ಥಾಪಿಸದಿದ್ದರೆ, ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಮುಸ್ಲಿಂ ಸಮುದಾಯ ಎಚ್ಚರಿಕೆ ನೀಡಿದೆ.