ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rajasthan Election: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ- ರಾಹುಲ್ ಗಾಂಧಿ

Published 22 ನವೆಂಬರ್ 2023, 10:41 IST
Last Updated 22 ನವೆಂಬರ್ 2023, 10:41 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇಲ್ಲಿನ ಧೋಲ್‌ಪುರದಲ್ಲಿ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಪರಿಚಯಿಸಿರುವ ಅಗ್ನಿಪಥ್‌ ಯೋಜನೆಯನ್ನು ಟೀಕಿಸಿದರು. ಇದು ದೇಶವನ್ನು ರಕ್ಷಿಸಲು ಬಯಸಿರುವ ಲಕ್ಷಾಂತರ ಯುವಕರ ಕನಸುಗಳನ್ನು ಛಿದ್ರಗೊಳಿಸಿದೆ ಎಂದರು.

ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ಕಾಂಗ್ರೆಸ್‌ ಮೊದಲು ಜಾತಿ ಗಣತಿ ಮಾಡಲಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ರಾಷ್ಟ್ರಮಟ್ಟದಲ್ಲೂ ಜಾತಿ ಗಣತಿ ಮಾಡಲಾಗುವುದು ಎಂದು ರಾಹುಲ್‌ ಗಾಂಧಿ ಹೇಳಿದರು. 

ದೇಶದ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಜನರು ತಮ್ಮ ಸಂಖ್ಯೆಯನ್ನು ತಿಳಿದುಕೊಳ್ಳಲು ಜಾತಿ ಗಣತಿ ಅಗತ್ಯವಾಗಿದೆ ಎಂದರು.  

ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಒಬಿಸಿ ಎಂದು ಕರೆದುಕೊಳ್ಳುತ್ತಿದ್ದರು, ಆದರೆ ನಾನು ಜಾತಿ ಗಣತಿಗೆ ಒತ್ತಾಯಿಸಿದ ತಕ್ಷಣ, ಅವರು ದೇಶದಲ್ಲಿ ಒಂದೇ ಜಾತಿ ಇದೆ ಎಂದು ಹೇಳಲು ಪ್ರಾರಂಭಿಸಿದ್ದಾರೆ ಎಂದು ಪ್ರಧಾನಿ ಮೋದಿ ಅವರನ್ನು ಟೀಕಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT