<p><strong>ಜೈಪುರ:</strong> ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p><p>ಇಲ್ಲಿನ ಧೋಲ್ಪುರದಲ್ಲಿ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಪರಿಚಯಿಸಿರುವ ಅಗ್ನಿಪಥ್ ಯೋಜನೆಯನ್ನು ಟೀಕಿಸಿದರು. ಇದು ದೇಶವನ್ನು ರಕ್ಷಿಸಲು ಬಯಸಿರುವ ಲಕ್ಷಾಂತರ ಯುವಕರ ಕನಸುಗಳನ್ನು ಛಿದ್ರಗೊಳಿಸಿದೆ ಎಂದರು.</p>.Rajasthan Elections 2023: ನಾವು ಒಗ್ಗೂಡಿದ್ದೇವೆ ಎಂದ ರಾಹುಲ್ ಗಾಂಧಿ.Rajasthan Elections: ಕಾಂಗ್ರೆಸ್ನಿಂದ 7 ಗ್ಯಾರಂಟಿ; ಯಜಮಾನಿಗೆ '₹10' ಸಾವಿರ .<p>ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ಕಾಂಗ್ರೆಸ್ ಮೊದಲು ಜಾತಿ ಗಣತಿ ಮಾಡಲಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ರಾಷ್ಟ್ರಮಟ್ಟದಲ್ಲೂ ಜಾತಿ ಗಣತಿ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. </p><p>ದೇಶದ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಜನರು ತಮ್ಮ ಸಂಖ್ಯೆಯನ್ನು ತಿಳಿದುಕೊಳ್ಳಲು ಜಾತಿ ಗಣತಿ ಅಗತ್ಯವಾಗಿದೆ ಎಂದರು. </p><p>ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಒಬಿಸಿ ಎಂದು ಕರೆದುಕೊಳ್ಳುತ್ತಿದ್ದರು, ಆದರೆ ನಾನು ಜಾತಿ ಗಣತಿಗೆ ಒತ್ತಾಯಿಸಿದ ತಕ್ಷಣ, ಅವರು ದೇಶದಲ್ಲಿ ಒಂದೇ ಜಾತಿ ಇದೆ ಎಂದು ಹೇಳಲು ಪ್ರಾರಂಭಿಸಿದ್ದಾರೆ ಎಂದು ಪ್ರಧಾನಿ ಮೋದಿ ಅವರನ್ನು ಟೀಕಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p><p>ಇಲ್ಲಿನ ಧೋಲ್ಪುರದಲ್ಲಿ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಪರಿಚಯಿಸಿರುವ ಅಗ್ನಿಪಥ್ ಯೋಜನೆಯನ್ನು ಟೀಕಿಸಿದರು. ಇದು ದೇಶವನ್ನು ರಕ್ಷಿಸಲು ಬಯಸಿರುವ ಲಕ್ಷಾಂತರ ಯುವಕರ ಕನಸುಗಳನ್ನು ಛಿದ್ರಗೊಳಿಸಿದೆ ಎಂದರು.</p>.Rajasthan Elections 2023: ನಾವು ಒಗ್ಗೂಡಿದ್ದೇವೆ ಎಂದ ರಾಹುಲ್ ಗಾಂಧಿ.Rajasthan Elections: ಕಾಂಗ್ರೆಸ್ನಿಂದ 7 ಗ್ಯಾರಂಟಿ; ಯಜಮಾನಿಗೆ '₹10' ಸಾವಿರ .<p>ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ, ಕಾಂಗ್ರೆಸ್ ಮೊದಲು ಜಾತಿ ಗಣತಿ ಮಾಡಲಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ರಾಷ್ಟ್ರಮಟ್ಟದಲ್ಲೂ ಜಾತಿ ಗಣತಿ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಹೇಳಿದರು. </p><p>ದೇಶದ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಜನರು ತಮ್ಮ ಸಂಖ್ಯೆಯನ್ನು ತಿಳಿದುಕೊಳ್ಳಲು ಜಾತಿ ಗಣತಿ ಅಗತ್ಯವಾಗಿದೆ ಎಂದರು. </p><p>ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಒಬಿಸಿ ಎಂದು ಕರೆದುಕೊಳ್ಳುತ್ತಿದ್ದರು, ಆದರೆ ನಾನು ಜಾತಿ ಗಣತಿಗೆ ಒತ್ತಾಯಿಸಿದ ತಕ್ಷಣ, ಅವರು ದೇಶದಲ್ಲಿ ಒಂದೇ ಜಾತಿ ಇದೆ ಎಂದು ಹೇಳಲು ಪ್ರಾರಂಭಿಸಿದ್ದಾರೆ ಎಂದು ಪ್ರಧಾನಿ ಮೋದಿ ಅವರನ್ನು ಟೀಕಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>