<p><strong>ಛತ್ರಪತಿ ಸಂಭಾಜಿನಗರ</strong>: ಜಾತಿಯನ್ನು ಮನಸ್ಸಿನಿಂದ ಅಳಿಸಿ ಹಾಕಿದರೆ ಮಾತ್ರ, ಸಾಮಾಜಿಕ ಆಚರಣೆಗಳಿಂದ ತಾರತಮ್ಯವನ್ನು ತೊಡೆದುಹಾಕಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.</p><p>ಆರ್ಎಸ್ಎಸ್ನ ಶತಮಾನೋತ್ಸವದ ಹಿನ್ನೆಲೆಯಲ್ಲಿ ಛತ್ರಪತಿ ಸಂಭಾಜಿನಗರದಲ್ಲಿ ಆಯೋಜಿಸಿದ್ದ 'ಜನ ಸಂಘೋಷ್ಠಿ' ಕಾರ್ಯಕ್ರಮದಲ್ಲಿ ಮಾತನಾಡಿರುವ ಭಾಗವತ್, 'ಜಾತಿ ಎಂಬುದು ಈ ಹಿಂದೆ ವೃತ್ತಿಯೊಂದಿಗೆ ಸಂಬಂಧ ಹೊಂದಿತ್ತು. ಕಾಲಾನಂತರದಲ್ಲಿ ಅದು ಸಾಮಾಜಿಕ ವ್ಯವಸ್ಥೆಯಾಗಿ ಬೇರೂರಿ, ತಾರತಮ್ಯಕ್ಕೆ ಕಾರಣವಾಗಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>'ತಾರತಮ್ಯ ಕೊನೆಗೊಳಿಸಲು, ಜಾತಿಯನ್ನು ಮನಸ್ಸುಗಳಿಂದ ಕಿತ್ತೆಸೆಯಬೇಕಿದೆ. ಆ ಕೆಲಸವನ್ನು ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮಾಡಿದರೆ, ಮುಂದಿನ 10 – 12 ವರ್ಷಗಳಲ್ಲಿ ತಾರತಮ್ಯ ನಿರ್ಮೂಲನೆಯಾಗಲಿದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಸಾರ್ವಜನಿಕರ ಪ್ರಶ್ನೆಗಳಿಗೂ ಉತ್ತರಿಸಿದ ಭಾಗವತ್, 'ಸಮಾಜವನ್ನೂ ಮುನ್ನಡೆಸುತ್ತಾ, ಭಾರತವನ್ನು ಪರಮ ವೈಭವದತ್ತ ಕೊಂಡೊಯ್ಯುವ ಗುರಿ ಆರ್ಎಸ್ಎಸ್ನದ್ದು' ಎಂದು ತಿಳಿಸಿದ್ದಾರೆ.</p><p>ಸಂಘವು ಪ್ರತಿಯೊಬ್ಬರ ವ್ಯಕ್ತಿತ್ವ ರೂಪಿಸುವ ಮೂಲಕ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತದೆ. ಈ ಸಂಘಟನೆಯಲ್ಲಿ ಯಾವ ಸ್ಪರ್ಧೆಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p><p>'ಸಂಘವನ್ನು ಅರ್ಥ ಮಾಡಿಕೊಳ್ಳಲು ಬಯಸುವವರು ಶಾಖೆಗಳಿಗೆ ಬರಬೇಕು' ಎಂದು ಆಹ್ವಾನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ರಪತಿ ಸಂಭಾಜಿನಗರ</strong>: ಜಾತಿಯನ್ನು ಮನಸ್ಸಿನಿಂದ ಅಳಿಸಿ ಹಾಕಿದರೆ ಮಾತ್ರ, ಸಾಮಾಜಿಕ ಆಚರಣೆಗಳಿಂದ ತಾರತಮ್ಯವನ್ನು ತೊಡೆದುಹಾಕಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.</p><p>ಆರ್ಎಸ್ಎಸ್ನ ಶತಮಾನೋತ್ಸವದ ಹಿನ್ನೆಲೆಯಲ್ಲಿ ಛತ್ರಪತಿ ಸಂಭಾಜಿನಗರದಲ್ಲಿ ಆಯೋಜಿಸಿದ್ದ 'ಜನ ಸಂಘೋಷ್ಠಿ' ಕಾರ್ಯಕ್ರಮದಲ್ಲಿ ಮಾತನಾಡಿರುವ ಭಾಗವತ್, 'ಜಾತಿ ಎಂಬುದು ಈ ಹಿಂದೆ ವೃತ್ತಿಯೊಂದಿಗೆ ಸಂಬಂಧ ಹೊಂದಿತ್ತು. ಕಾಲಾನಂತರದಲ್ಲಿ ಅದು ಸಾಮಾಜಿಕ ವ್ಯವಸ್ಥೆಯಾಗಿ ಬೇರೂರಿ, ತಾರತಮ್ಯಕ್ಕೆ ಕಾರಣವಾಗಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>'ತಾರತಮ್ಯ ಕೊನೆಗೊಳಿಸಲು, ಜಾತಿಯನ್ನು ಮನಸ್ಸುಗಳಿಂದ ಕಿತ್ತೆಸೆಯಬೇಕಿದೆ. ಆ ಕೆಲಸವನ್ನು ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮಾಡಿದರೆ, ಮುಂದಿನ 10 – 12 ವರ್ಷಗಳಲ್ಲಿ ತಾರತಮ್ಯ ನಿರ್ಮೂಲನೆಯಾಗಲಿದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ಸಾರ್ವಜನಿಕರ ಪ್ರಶ್ನೆಗಳಿಗೂ ಉತ್ತರಿಸಿದ ಭಾಗವತ್, 'ಸಮಾಜವನ್ನೂ ಮುನ್ನಡೆಸುತ್ತಾ, ಭಾರತವನ್ನು ಪರಮ ವೈಭವದತ್ತ ಕೊಂಡೊಯ್ಯುವ ಗುರಿ ಆರ್ಎಸ್ಎಸ್ನದ್ದು' ಎಂದು ತಿಳಿಸಿದ್ದಾರೆ.</p><p>ಸಂಘವು ಪ್ರತಿಯೊಬ್ಬರ ವ್ಯಕ್ತಿತ್ವ ರೂಪಿಸುವ ಮೂಲಕ ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತದೆ. ಈ ಸಂಘಟನೆಯಲ್ಲಿ ಯಾವ ಸ್ಪರ್ಧೆಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p><p>'ಸಂಘವನ್ನು ಅರ್ಥ ಮಾಡಿಕೊಳ್ಳಲು ಬಯಸುವವರು ಶಾಖೆಗಳಿಗೆ ಬರಬೇಕು' ಎಂದು ಆಹ್ವಾನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>