<p><strong>ಚೆನ್ನೈ</strong>: ಜಾತಿಯೇ ತಮ್ಮ 'ದೊಡ್ಡ' ರಾಜಕೀಯ ಪ್ರತಿಸ್ಪರ್ಧಿ ಎಂದು ಬಹುಭಾಷಾ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಭಾನುವಾರ ಹೇಳಿದ್ದಾರೆ.</p>.<p>ಮಕ್ಕಳ್ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್, ಇಲ್ಲಿನ "ನೀಲಂ ಬುಕ್ಸ್" ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದರು. </p>.<p>‘ನನ್ನ ದೊಡ್ಡ ಪ್ರತಿಸ್ಪರ್ಧಿ ಹಾಗೂ ರಾಜಕೀಯ ಪ್ರತಿಸ್ಪರ್ಧಿ ಎರಡೂ ಜಾತಿಯೇ ಆಗಿದೆ. ನಾನು 21 ವರ್ಷ ವಯಸ್ಸಿನಿಂದಲೂ ಇದನ್ನು ಹೇಳುತ್ತಿದ್ದೇನೆ. ನಾನು ಈಗಲೂ ಹೇಳುತ್ತಿದ್ದೇನೆ, ನನ್ನ ಅಭಿಪ್ರಾಯವು ಎಂದಿಗೂ ಬದಲಾಗಿಲ್ಲ’ ಎಂದು ಕಮಲ್ ಹೇಳಿದ್ದಾರೆ.</p>.<p>‘ಚಕ್ರದ ನಂತರ ಮಾನವ ಮಾಡಿದ ಅತಿದೊಡ್ಡ ಆವಿಷ್ಕಾರ ದೇವರು. ಆದರೆ, ನಮ್ಮದೇ ಸೃಷ್ಟಿಯು ಒಂದು ವೇಳೆ ನಮ್ಮ ಮೇಲೆಯೇ ದಾಳಿ ಮಾಡಿದರೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.</p>.<p>ನಿರ್ದೇಶಕ ರಂಜಿತ್ ಅವರು ಮಾತನಾಡಿ, ನೀಲಂ ಪುಸ್ತಕ ಮಳಿಗೆಯನ್ನು ಸ್ಥಾಪಿಸಿದ ಉದ್ದೇಶ ರಾಜಕೀಯವನ್ನು ಅರ್ಥಮಾಡಿಕೊಳ್ಳುವ ಪುಸ್ತಕಗಳನ್ನು ಹೊರತರುವುದಾಗಿದೆ ಎಂದು ಹೇಳಿದ್ದಾರೆ. </p>.<p>ಇವನ್ನೂ ಓದಿ: <a href="https://www.prajavani.net/india-news/aap-protests-outside-bjp-headquarters-over-adani-issue-1014658.html" itemprop="url">ಅದಾನಿ ಪ್ರಕರಣ: ತನಿಖೆಗೆ ಒತ್ತಾಯಿಸಿ ಬಿಜೆಪಿ ಕಚೇರಿ ಎದುರು ಎಎಪಿ ಪ್ರತಿಭಟನೆ </a></p>.<p> <a href="https://www.prajavani.net/india-news/jammu-and-kashmir-wanted-employment-love-but-got-bjps-bulldozer-rahul-gandhi-1014653.html" itemprop="url">ಕಾಶ್ಮೀರದ ಜನತೆಗೆ ಪ್ರೀತಿ ಬೇಕಿದೆ- ಸಿಕ್ಕಿದ್ದೇನು? ಬಿಜೆಪಿಯ ಬುಲ್ಡೋಜರ್: ರಾಹುಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಜಾತಿಯೇ ತಮ್ಮ 'ದೊಡ್ಡ' ರಾಜಕೀಯ ಪ್ರತಿಸ್ಪರ್ಧಿ ಎಂದು ಬಹುಭಾಷಾ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಭಾನುವಾರ ಹೇಳಿದ್ದಾರೆ.</p>.<p>ಮಕ್ಕಳ್ ನೀದಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್, ಇಲ್ಲಿನ "ನೀಲಂ ಬುಕ್ಸ್" ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದರು. </p>.<p>‘ನನ್ನ ದೊಡ್ಡ ಪ್ರತಿಸ್ಪರ್ಧಿ ಹಾಗೂ ರಾಜಕೀಯ ಪ್ರತಿಸ್ಪರ್ಧಿ ಎರಡೂ ಜಾತಿಯೇ ಆಗಿದೆ. ನಾನು 21 ವರ್ಷ ವಯಸ್ಸಿನಿಂದಲೂ ಇದನ್ನು ಹೇಳುತ್ತಿದ್ದೇನೆ. ನಾನು ಈಗಲೂ ಹೇಳುತ್ತಿದ್ದೇನೆ, ನನ್ನ ಅಭಿಪ್ರಾಯವು ಎಂದಿಗೂ ಬದಲಾಗಿಲ್ಲ’ ಎಂದು ಕಮಲ್ ಹೇಳಿದ್ದಾರೆ.</p>.<p>‘ಚಕ್ರದ ನಂತರ ಮಾನವ ಮಾಡಿದ ಅತಿದೊಡ್ಡ ಆವಿಷ್ಕಾರ ದೇವರು. ಆದರೆ, ನಮ್ಮದೇ ಸೃಷ್ಟಿಯು ಒಂದು ವೇಳೆ ನಮ್ಮ ಮೇಲೆಯೇ ದಾಳಿ ಮಾಡಿದರೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.</p>.<p>ನಿರ್ದೇಶಕ ರಂಜಿತ್ ಅವರು ಮಾತನಾಡಿ, ನೀಲಂ ಪುಸ್ತಕ ಮಳಿಗೆಯನ್ನು ಸ್ಥಾಪಿಸಿದ ಉದ್ದೇಶ ರಾಜಕೀಯವನ್ನು ಅರ್ಥಮಾಡಿಕೊಳ್ಳುವ ಪುಸ್ತಕಗಳನ್ನು ಹೊರತರುವುದಾಗಿದೆ ಎಂದು ಹೇಳಿದ್ದಾರೆ. </p>.<p>ಇವನ್ನೂ ಓದಿ: <a href="https://www.prajavani.net/india-news/aap-protests-outside-bjp-headquarters-over-adani-issue-1014658.html" itemprop="url">ಅದಾನಿ ಪ್ರಕರಣ: ತನಿಖೆಗೆ ಒತ್ತಾಯಿಸಿ ಬಿಜೆಪಿ ಕಚೇರಿ ಎದುರು ಎಎಪಿ ಪ್ರತಿಭಟನೆ </a></p>.<p> <a href="https://www.prajavani.net/india-news/jammu-and-kashmir-wanted-employment-love-but-got-bjps-bulldozer-rahul-gandhi-1014653.html" itemprop="url">ಕಾಶ್ಮೀರದ ಜನತೆಗೆ ಪ್ರೀತಿ ಬೇಕಿದೆ- ಸಿಕ್ಕಿದ್ದೇನು? ಬಿಜೆಪಿಯ ಬುಲ್ಡೋಜರ್: ರಾಹುಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>