ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ವಿದ್ಯಾರ್ಥಿ ಮೇಲೆ ಬಿಜೆಪಿ ಮುಖಂಡನ ಮಗನಿಂದ ಹಲ್ಲೆ, ಎಫ್‌ಐಆರ್ ದಾಖಲು

Last Updated 18 ಜನವರಿ 2023, 7:28 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಸಹ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಘಟನೆ ಕುರಿತು ಮಹೀಂದ್ರಾ ವಿಶ್ವವಿದ್ಯಾಲಯ ನೀಡಿದ ದೂರಿನ ಆಧಾರದ ಮೇಲೆ ಬಂಡಿ ಭಗೀರಥ್ ಸಾಯಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀರಾಮ್‌ ಮೇಲೆ ಭಗೀರಥ್ ಸಾಯಿ ಹಲ್ಲೆ ನಡೆಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಭಗೀರಥ್ ಸಾಯಿ ಸ್ನೇಹಿತರೊಂದಿಗೆ ಸೇರಿ ಹಾಸ್ಟೆಲ್ ಕೊಠಡಿಯಲ್ಲಿ ಶ್ರೀರಾಮ್‌ನನ್ನು ನಿಂದಿಸಿದ್ದು, ಥಳಿಸಿದ್ದಾರೆ. ಬಳಿಕ ಕಾಲೇಜು ಆವರಣದಲ್ಲಿಯೂ ಶ್ರೀರಾಮ್‌ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶ್ರೀರಾಮ್ ನನ್ನ ಪರಿಚಯಸ್ಥ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಭಗೀರಥ್ ಹೇಳಿಕೊಂಡಿದ್ದಾರೆ.

‘ನಾನು ಯುವತಿಗೆ ಆಕ್ಷೇಪಾರ್ಹ ಸಂದೇಶ ಕಳುಹಿಸಿದ್ದೆ. ಇದೇ ವಿಚಾರವಾಗಿ ಚರ್ಚಿಸಲು ಭಗೀರಥ್‌ ನನ್ನನ್ನು ಸಂಪರ್ಕಿಸಿದ್ದ. ಆಗ ನಾನು ಆತನ ಬಳಿಯೂ ಅನುಚಿತವಾಗಿ ವರ್ತಿಸಿದ್ದರಿಂದ ಭಗೀರಥ್ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ’ ಎಂದು ಶ್ರೀರಾಮ್ ಹೇಳಿಕೆ ನೀಡಿದ್ದಾನೆ.

ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಬಳಿಕ ರಾಜಿ ಮಾಡಿಕೊಂಡಿದ್ದೇವೆ ಎಂದು ಶ್ರೀರಾಮ್ ಹೇಳಿಕೊಂಡಿದ್ದಾರೆ.

ಕೆಸಿಆರ್ ಪಿತೂರಿ ಆರೋಪ: ನನ್ನ ವಿರುದ್ಧ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ಪಿತೂರಿ ನಡೆಸಿದ್ದಾರೆ ಎಂದು ಸಂಜಯ್ ಕುಮಾರ್ ಆರೋಪಿಸಿದ್ದಾರೆ.

‘ವಿದ್ಯಾರ್ಥಿಗಳು ಜಗಳವಾಡುವುದು ಸಹಜ. ತಮ್ಮ ತಪ್ಪಿನ ಅರಿವಾದ ಮೇಲೆ ತಿದ್ದಿಕೊಳ್ಳುತ್ತಾರೆ. ಮಕ್ಕಳನ್ನು ರಾಜಕೀಯದಿಂದ ದೂರವಿಡಬೇಕು. ಕೆಸಿಆರ್‌ ಆದೇಶದ ಮೇರೆಗೆ ವಿಶ್ವವಿದ್ಯಾಲಯ ನನ್ನ ಬಾಯಿ ಮುಚ್ಚಿಸಲು ಮುಂದಾಗಿದೆ’ ಎಂದು ಸಂಜಯ್ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT