‘ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಯಾವುದೇ ಮುಂದಾಲೋಚನೆಯೇ ಇಲ್ಲ. ಇದೇ ಕಾರಣದಿಂದಾಗಿ ಅವರು ಜೂನ್ 12ರಂದು ಮೆಟ್ಟೂರು ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದಾರೆ. ಮೆಟ್ಟೂರು ಜಲಾಶಯದಿಂದ ಬಿಡುಗಡೆ ಮಾಡುವ ನೀರಿನ ಪ್ರಮಾಣವನ್ನು ರಾಜ್ಯ ಸರ್ಕಾರ ತಗ್ಗಿಸಬೇಕಿತ್ತು. ಜತೆಗೆ ರಾಜಕೀಯ ಒತ್ತಡದ ಮುಖಾಂತರ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕಾನೂನು ಪ್ರಕಾರ ಕರ್ನಾಟಕದಿಂದ ರಾಜ್ಯಕ್ಕೆ ಬರಬೇಕಿದ್ದ ನೀರಿನ ಪಾಲನ್ನು ಬಿಡುಗಡೆ ಮಾಡಿಸಿಕೊಳ್ಳಬೇಕಿತ್ತು’ ಎಂದು ಹೇಳಿದ್ದಾರೆ.