<p class="title"><strong>ನವದೆಹಲಿ: </strong>ಜಾರ್ಖಂಡ್ನ ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಹಂಚಿಕೊಳ್ಳುವವರಿಗೆ ಕೇಂದ್ರ ತನಿಖಾ ದಳವು (ಸಿಬಿಐ) ₹ 5 ಲಕ್ಷ ಬಹುಮಾನ ನೀಡುವುದಾಗಿ ಭಾನುವಾರ ಘೋಷಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿ ಮುಖ್ಯವಾದ ಮಾಹಿತಿಯನ್ನು ಹೊಂದಿದ್ದರೆ ಸಿಬಿಐನ ವಿಶೇಷ ಅಪರಾಧ ತಂಡದೊಂದಿಗೆ ಮಾಹಿತಿ ಹಂಚಿಕೊಳ್ಳಬಹುದು. ಧನಬಾದ್ ಸಿಎಸ್ಐಆರ್ ಸತ್ಕರ್ ಅತಿಥಿಗೃಹದಲ್ಲಿ ದೂರವಾಣಿ ಸಂಖ್ಯೆಗಳಾದ 7827728856, 011-24368640 ಮತ್ತು 24368641 ಮೂಲಕವೂ ಮಾಹಿತಿ ಹಂಚಿಕೊಳ್ಳಬಹುದು. ಅಪರಾಧಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ನೀಡುವ ವ್ಯಕ್ತಿಗೆ ₹ 5 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದೂ ಸಿಬಿಐ ಹೇಳಿದೆ.</p>.<p>ಜುಲೈ 28ರಂದು ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಉತ್ತಮ್ ಆನಂದ್ ಅವರಿಗೆ ಹಿಂದಿನಿಂದ ಬಂದ ಆಟೋರಿಕ್ಷಾವೊಂದು ಡಿಕ್ಕಿ ಹೊಡೆದಿತ್ತು. ಆಸ್ಪತ್ರೆಗೆ ಸೇರಿಸುವ ಮುನ್ನವೇ ಉತ್ತಮ್ ಅವರು ಸಾವನ್ನಪ್ಪಿದ್ದರು. ಇದು ಅಪಘಾತವಲ್ಲ, ಪೂರ್ವನಿಯೋಜಿತ ಹತ್ಯೆ ಎನ್ನುವ ಆರೋಪಗಳು ಕೇಳಿಬಂದಿದ್ದರಿಂದ ಪ್ರಕರಣದ ವಿಚಾರಣೆಯನ್ನು ಸಿಬಿಐ ನಡೆಸುತ್ತಿದೆ.</p>.<p class="bodytext">ಪ್ರಕರಣದ ಆರೋಪಿಗಳಾದ ಆಟೋರಿಕ್ಷಾ ಚಾಲಕ ಲಖನ್ ವರ್ಮಾ ಮತ್ತು ಆತನ ಸಹಚರ ರಾಹುಲ್ ವರ್ಮಾ ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡಿದೆ.</p>.<p class="bodytext"><a href="https://www.prajavani.net/karnataka-news/education-minister-bc-nagesh-has-ordered-an-inquiry-into-the-death-of-the-student-857975.html" itemprop="url">ವಿದ್ಯಾರ್ಥಿ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಜಾರ್ಖಂಡ್ನ ಧನಬಾದ್ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿ ಹಂಚಿಕೊಳ್ಳುವವರಿಗೆ ಕೇಂದ್ರ ತನಿಖಾ ದಳವು (ಸಿಬಿಐ) ₹ 5 ಲಕ್ಷ ಬಹುಮಾನ ನೀಡುವುದಾಗಿ ಭಾನುವಾರ ಘೋಷಿಸಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿ ಮುಖ್ಯವಾದ ಮಾಹಿತಿಯನ್ನು ಹೊಂದಿದ್ದರೆ ಸಿಬಿಐನ ವಿಶೇಷ ಅಪರಾಧ ತಂಡದೊಂದಿಗೆ ಮಾಹಿತಿ ಹಂಚಿಕೊಳ್ಳಬಹುದು. ಧನಬಾದ್ ಸಿಎಸ್ಐಆರ್ ಸತ್ಕರ್ ಅತಿಥಿಗೃಹದಲ್ಲಿ ದೂರವಾಣಿ ಸಂಖ್ಯೆಗಳಾದ 7827728856, 011-24368640 ಮತ್ತು 24368641 ಮೂಲಕವೂ ಮಾಹಿತಿ ಹಂಚಿಕೊಳ್ಳಬಹುದು. ಅಪರಾಧಕ್ಕೆ ಸಂಬಂಧಿಸಿದ ಉಪಯುಕ್ತ ಮಾಹಿತಿಯನ್ನು ನೀಡುವ ವ್ಯಕ್ತಿಗೆ ₹ 5 ಲಕ್ಷ ನಗದು ಬಹುಮಾನ ನೀಡಲಾಗುವುದು ಎಂದೂ ಸಿಬಿಐ ಹೇಳಿದೆ.</p>.<p>ಜುಲೈ 28ರಂದು ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಉತ್ತಮ್ ಆನಂದ್ ಅವರಿಗೆ ಹಿಂದಿನಿಂದ ಬಂದ ಆಟೋರಿಕ್ಷಾವೊಂದು ಡಿಕ್ಕಿ ಹೊಡೆದಿತ್ತು. ಆಸ್ಪತ್ರೆಗೆ ಸೇರಿಸುವ ಮುನ್ನವೇ ಉತ್ತಮ್ ಅವರು ಸಾವನ್ನಪ್ಪಿದ್ದರು. ಇದು ಅಪಘಾತವಲ್ಲ, ಪೂರ್ವನಿಯೋಜಿತ ಹತ್ಯೆ ಎನ್ನುವ ಆರೋಪಗಳು ಕೇಳಿಬಂದಿದ್ದರಿಂದ ಪ್ರಕರಣದ ವಿಚಾರಣೆಯನ್ನು ಸಿಬಿಐ ನಡೆಸುತ್ತಿದೆ.</p>.<p class="bodytext">ಪ್ರಕರಣದ ಆರೋಪಿಗಳಾದ ಆಟೋರಿಕ್ಷಾ ಚಾಲಕ ಲಖನ್ ವರ್ಮಾ ಮತ್ತು ಆತನ ಸಹಚರ ರಾಹುಲ್ ವರ್ಮಾ ಅವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡಿದೆ.</p>.<p class="bodytext"><a href="https://www.prajavani.net/karnataka-news/education-minister-bc-nagesh-has-ordered-an-inquiry-into-the-death-of-the-student-857975.html" itemprop="url">ವಿದ್ಯಾರ್ಥಿ ಸಾವು ಪ್ರಕರಣ: ತನಿಖೆಗೆ ಆದೇಶಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>