<p><strong>ನವದೆಹಲಿ:</strong> ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ನಡೆಸಿದ ನೀಟ್–ಯುಜಿ 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೌತವಿಜ್ಞಾನದ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ ತಂಡದಲ್ಲಿದ್ದ ಪುಣೆಯ ಶಿಕ್ಷಕಿಯನ್ನು ಸಿಬಿಐ ಬಂಧಿಸಿದೆ.</p><p>ಪುಣೆಯ ಸೇಠ್ ಹೀರಾಲಾಲ್ ಸರಾಫ್ ಪ್ರಶಾಲಾದ ಶಿಕ್ಷಕಿ ಮನೀಷಾ ಸಂಜಯ್ ಹವಾಲ್ದಾರ್ ಅವರನ್ನು ವಿಚಾರಣೆಯ ನಂತರ ಬಂಧಿಸಲಾಗಿದೆ ಎಂದು ಸಿಬಿಐ ಶುಕ್ರವಾರ ತಿಳಿಸಿದೆ.</p><p>ನೀಟ್–ಯುಜಿ 2026 ಪರೀಕ್ಷಾ ಪ್ರಕ್ರಿಯೆಯಲ್ಲಿ ಎನ್ಟಿಎ ತಜ್ಞರಾಗಿ ಮನೀಷಾ ಭಾಗಿಯಾಗಿದ್ದು, ಭೌತವಿಜ್ಞಾನದ ಕೆಲವು ಪ್ರಶ್ನೆಗಳನ್ನು ಈಗಾಗಲೇ ಬಂಧಿತಳಾಗಿರುವ ಆರೋಪಿ ಮನೀಷಾ ಮಂಧರೆ ಅವರೊಂದಿಗೆ ಹಂಚಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆಯಲ್ಲಿ ಬಂದಂತಹ ಪ್ರಶ್ನೆಗಳು ಇವುಗಳೊಂದಿಗೆ ಹೊಂದಿಕೆಯಾಗಿವೆ ಎಂದು ಸಿಬಿಐ ಪ್ರಕಟಣೆಯಲ್ಲಿ ಹೇಳಿದೆ. </p><p>ದೆಹಲಿ, ಜೈಪುರ, ಗುರುಗ್ರಾಮ, ನಾಸಿಕ್, ಪುಣೆ, ಲಾತೂರ್, ಅಹ್ಲಿಯಾನಗರದ 11 ಮಂದಿಯನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.</p>.ಯಾವುದೇ ಲೋಪವಿಲ್ಲದೆ ನೀಟ್-ಯುಜಿ ಮರು ಪರೀಕ್ಷೆ: ಶಿಕ್ಷಣ ಸಚಿವ ಧರ್ಮೇಂದ್ರ ಭರವಸೆ.ನೀಟ್–ಯುಜಿ ಪ್ರಶ್ನೆಪತ್ರಿಕೆ ‘ಸೋರಿಕೆ’ ಒಪ್ಪದ ಎನ್ಟಿಎ ಅಧಿಕಾರಿಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ನಡೆಸಿದ ನೀಟ್–ಯುಜಿ 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೌತವಿಜ್ಞಾನದ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ ತಂಡದಲ್ಲಿದ್ದ ಪುಣೆಯ ಶಿಕ್ಷಕಿಯನ್ನು ಸಿಬಿಐ ಬಂಧಿಸಿದೆ.</p><p>ಪುಣೆಯ ಸೇಠ್ ಹೀರಾಲಾಲ್ ಸರಾಫ್ ಪ್ರಶಾಲಾದ ಶಿಕ್ಷಕಿ ಮನೀಷಾ ಸಂಜಯ್ ಹವಾಲ್ದಾರ್ ಅವರನ್ನು ವಿಚಾರಣೆಯ ನಂತರ ಬಂಧಿಸಲಾಗಿದೆ ಎಂದು ಸಿಬಿಐ ಶುಕ್ರವಾರ ತಿಳಿಸಿದೆ.</p><p>ನೀಟ್–ಯುಜಿ 2026 ಪರೀಕ್ಷಾ ಪ್ರಕ್ರಿಯೆಯಲ್ಲಿ ಎನ್ಟಿಎ ತಜ್ಞರಾಗಿ ಮನೀಷಾ ಭಾಗಿಯಾಗಿದ್ದು, ಭೌತವಿಜ್ಞಾನದ ಕೆಲವು ಪ್ರಶ್ನೆಗಳನ್ನು ಈಗಾಗಲೇ ಬಂಧಿತಳಾಗಿರುವ ಆರೋಪಿ ಮನೀಷಾ ಮಂಧರೆ ಅವರೊಂದಿಗೆ ಹಂಚಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆಯಲ್ಲಿ ಬಂದಂತಹ ಪ್ರಶ್ನೆಗಳು ಇವುಗಳೊಂದಿಗೆ ಹೊಂದಿಕೆಯಾಗಿವೆ ಎಂದು ಸಿಬಿಐ ಪ್ರಕಟಣೆಯಲ್ಲಿ ಹೇಳಿದೆ. </p><p>ದೆಹಲಿ, ಜೈಪುರ, ಗುರುಗ್ರಾಮ, ನಾಸಿಕ್, ಪುಣೆ, ಲಾತೂರ್, ಅಹ್ಲಿಯಾನಗರದ 11 ಮಂದಿಯನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.</p>.ಯಾವುದೇ ಲೋಪವಿಲ್ಲದೆ ನೀಟ್-ಯುಜಿ ಮರು ಪರೀಕ್ಷೆ: ಶಿಕ್ಷಣ ಸಚಿವ ಧರ್ಮೇಂದ್ರ ಭರವಸೆ.ನೀಟ್–ಯುಜಿ ಪ್ರಶ್ನೆಪತ್ರಿಕೆ ‘ಸೋರಿಕೆ’ ಒಪ್ಪದ ಎನ್ಟಿಎ ಅಧಿಕಾರಿಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>